ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಮುರುಘಾ ಶರಣರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿ ಐದು ದಿನ ಕಳೆದರು ಸಹ ಆರೋಪಿಗಳನ್ನು ಬಂಧಿಸಿಲ್ಲ. ಪೊಲೀಸ್ ಇಲಾಖೆ ಆರೋಪಿಗಳ ಪರ ನಿಂತಿದ್ದಾರೆ ಎಂಬ ಅನುಮಾನಗಳು ಮೂಡುತ್ತಿವೆ. ಸಂವಿಧಾನ ಹಾಗೂ ಕಾನೂನಿನಲ್ಲಿ ಸರ್ವರು ಸಮಾನರು ಎನ್ನುವ ನಂಬಿಕೆಯನ್ನು ಮುರುಘಾ ಶ್ರೀ ಪ್ರಕರಣದಲ್ಲಿ ಆಡಳಿತ ವ್ಯವಸ್ಥೆ ಹುಸಿಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.