ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳಲ್ಕೆರೆ: ಹಂಸಲೇಖಗೆ ಭದ್ರತೆ ನೀಡಲು ಆಗ್ರಹ

Last Updated 25 ನವೆಂಬರ್ 2021, 3:02 IST
ಅಕ್ಷರ ಗಾತ್ರ

ಹೊಳಲ್ಕೆರೆ: ಸಂಗೀತ ಕಲಾವಿದ ಹಂಸಲೇಖ ಅವರಿಗೆ ಪೊಲೀಸ್ ಭದ್ರತೆ ನೀಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಸದಸ್ಯರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

‘ಹಂಸಲೇಖ ಅವರು ದಲಿತರನ್ನು ಬೆಂಬಲಿಸಿ ಮಾತನಾಡಿದ್ದಾರೆ. ಅಸ್ಪೃಶ್ಯತೆ ಹೋಗಲಾಡಿಸುವ ಉದ್ದೇಶದಿಂದ ಅವರು ಮಾತನಾಡಿದ್ದು, ಮನುವಾದಿಗಳು ಅವರಿಗೆ ಬೆದರಿಕೆ ಹಾಕುವ ಮೂಲಕ ಕ್ಷಮೆ ಕೇಳಿಸಿದ್ದಾರೆ. ಶೇ15 ರಷ್ಟಿರುವ ಬ್ರಾಹ್ಮಣರು ಶೇ 85ರಷ್ಟಿರುವ ದಲಿತರು, ಹಿಂದುಳಿದವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಡಾ.ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಆಧಾರದಲ್ಲಿ ನಾವು ಬದುಕುತ್ತಿದ್ದೇವೆಯೇ ಹೊರತು ಭಗವದ್ಗೀತೆಯ ಆಧಾರದಲ್ಲಿ ಅಲ್ಲ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ, ನವೀನ್ ಮದ್ದೇರು, ಕಾಲ್ಕೆರೆ ಪ್ರಕಾಶ್, ನವೀನ್ ಪವಾರ್, ಸುಂದರ ಮೂರ್ತಿ, ಕೆಂಗುಂಟೆ ಪ್ರಭಾಕರ್, ಮಂಜುನಾಥ್, ಸತೀಶ್, ಶ್ರೀನಿವಾಸ, ಚಂದ್ರು, ರಾಜಪ್ಪ, ರುದ್ರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT