<p>ಚಿತ್ರದುರ್ಗ: ಚರ್ಮ ವಿಜ್ಞಾನವನ್ನು ಸಬಲೀಕರಣಗೊಳಿಸುವ ಘೋಷವಾಕ್ಯದೊಂದಿಗೆ ಹುಬ್ಬಳ್ಳಿಯಲ್ಲಿ ಪ್ರಾರಂಭವಾದ ಡರ್ಮಾಕೊನ್ ಸೈಕಲ್ ರ್ಯಾಲಿ ಮಂಗಳವಾರ ನಗರಕ್ಕೆ ಆಗಮಿಸಿತು.</p>.<p>ಕೋಟೆ ಆವರಣದಲ್ಲಿ ರ್ಯಾಲಿಯನ್ನು ಚರ್ಮ ರೋಗ ವ್ಯೆದ್ಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ಯೋಗೇಂದ್ರ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅವರು, ‘ಆರೋಗ್ಯಕರ ಚರ್ಮ,ದೇಹ ಹಾಗೂ ರಾಷ್ಟ್ರಕ್ಕಾಗಿ ಪುಣೆಯ ಚರ್ಮ ರೋಗ ತಜ್ಞ ವೈದ್ಯ ಡಾ.ನರೇಂದ್ರ ಪಟವರ್ಧನ ತಂಡ ಸೈಕಲ್ ರ್ಯಾಲಿ ನಡೆಸುತ್ತಿದೆ. ಜ. 21ರಂದು ಹುಬ್ಬಳ್ಳಿಯಲ್ಲಿ ಪ್ರಾರಂಭವಾದ ರ್ಯಾಲಿ ಜ. 28ರಂದು ಬೆಂಗಳೂರು ತಲುಪಲಿದೆ’ ಎಂದು ತಿಳಿಸಿದರು.</p>.<p>‘ಜ. 29ರಿಂದ 31ರವರೆಗೆ ಬೆಂಗಳೂರಿನಲ್ಲಿ ಭಾರತೀಯ ಚರ್ಮ, ಲೈಂಗಿಕ ಮತ್ತು ಕುಷ್ಠ ರೋಗ ಸಂಘದ (ಐಏಡಿವಿಎಲ್) ವಾರ್ಷಿಕ ಸಮ್ಮೇಳನ ನಡೆಯಲಿದೆ. ರ್ಯಾಲಿ ಮೂಲಕ ಚರ್ಮ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.</p>.<p>ರ್ಯಾಲಿ ತುಮಕೂರಿಗೆ ಪ್ರಯಾಣ ಬೆಳೆಸಿತು. ತಂಡದ ಸದಸ್ಯರಾದ ಸ್ವಪ್ನಲಿ ಗುಪ್ತೆ, ಭೂಷಣ ಆಪ್ಟೆ, ರವಿ ಬೇಂದ್ರೆ, ನಿತಿನ್ ದಾಮ್ಲೆ, ವಿಶ್ವನಾಥ ಗೋಖಲೆ, ಅನಿಲ ಜಮ್ತಾನಿ, ಮಕರಂದ ಸಾನೆ, ಪ್ರಕಾಶ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಚರ್ಮ ವಿಜ್ಞಾನವನ್ನು ಸಬಲೀಕರಣಗೊಳಿಸುವ ಘೋಷವಾಕ್ಯದೊಂದಿಗೆ ಹುಬ್ಬಳ್ಳಿಯಲ್ಲಿ ಪ್ರಾರಂಭವಾದ ಡರ್ಮಾಕೊನ್ ಸೈಕಲ್ ರ್ಯಾಲಿ ಮಂಗಳವಾರ ನಗರಕ್ಕೆ ಆಗಮಿಸಿತು.</p>.<p>ಕೋಟೆ ಆವರಣದಲ್ಲಿ ರ್ಯಾಲಿಯನ್ನು ಚರ್ಮ ರೋಗ ವ್ಯೆದ್ಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ಯೋಗೇಂದ್ರ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅವರು, ‘ಆರೋಗ್ಯಕರ ಚರ್ಮ,ದೇಹ ಹಾಗೂ ರಾಷ್ಟ್ರಕ್ಕಾಗಿ ಪುಣೆಯ ಚರ್ಮ ರೋಗ ತಜ್ಞ ವೈದ್ಯ ಡಾ.ನರೇಂದ್ರ ಪಟವರ್ಧನ ತಂಡ ಸೈಕಲ್ ರ್ಯಾಲಿ ನಡೆಸುತ್ತಿದೆ. ಜ. 21ರಂದು ಹುಬ್ಬಳ್ಳಿಯಲ್ಲಿ ಪ್ರಾರಂಭವಾದ ರ್ಯಾಲಿ ಜ. 28ರಂದು ಬೆಂಗಳೂರು ತಲುಪಲಿದೆ’ ಎಂದು ತಿಳಿಸಿದರು.</p>.<p>‘ಜ. 29ರಿಂದ 31ರವರೆಗೆ ಬೆಂಗಳೂರಿನಲ್ಲಿ ಭಾರತೀಯ ಚರ್ಮ, ಲೈಂಗಿಕ ಮತ್ತು ಕುಷ್ಠ ರೋಗ ಸಂಘದ (ಐಏಡಿವಿಎಲ್) ವಾರ್ಷಿಕ ಸಮ್ಮೇಳನ ನಡೆಯಲಿದೆ. ರ್ಯಾಲಿ ಮೂಲಕ ಚರ್ಮ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.</p>.<p>ರ್ಯಾಲಿ ತುಮಕೂರಿಗೆ ಪ್ರಯಾಣ ಬೆಳೆಸಿತು. ತಂಡದ ಸದಸ್ಯರಾದ ಸ್ವಪ್ನಲಿ ಗುಪ್ತೆ, ಭೂಷಣ ಆಪ್ಟೆ, ರವಿ ಬೇಂದ್ರೆ, ನಿತಿನ್ ದಾಮ್ಲೆ, ವಿಶ್ವನಾಥ ಗೋಖಲೆ, ಅನಿಲ ಜಮ್ತಾನಿ, ಮಕರಂದ ಸಾನೆ, ಪ್ರಕಾಶ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>