ಇದುವರೆಗೂ ಬಾಡಿಗೆ ಕಟ್ಟಡದಲ್ಲಿ ಕೆಲಸ ನಡೆಯುತ್ತಿದ್ದು, ಮಳೆ ಬಂದಾಗಲೆಲ್ಲಾ ಕಂಪ್ಯೂಟರ್ ಕೊಠಡಿ, ಉಪತಹಶೀಲ್ದಾರ್ ಕಚೇರಿಯಲ್ಲಿ ನೀರು ಸೋರುತ್ತದೆ. ಸಿಬ್ಬಂದಿ ಕೆಲವೊಮ್ಮೆ ಕಂಪ್ಯೂಟರ್ ಅನ್ನು ತಾಡಪಾಲ್ನಿಂದ ಮುಚ್ಚಿಡುತ್ತಾರೆ. ರಾತ್ರಿ ವೇಳೆ ಮಳೆ ಬಂದಾಗ ಕಂಪ್ಯೂಟರ್ ಹಾಳಾಗಿ ಕೆಲವು ಸಲ ನೆಮ್ಮದಿ ಕೇಂದ್ರ ಮುಚ್ಚಲಾಗಿದೆ. ಇದರಿಂದ ಸಾರ್ವಜನಿಕರು, ರೈತರಿಗೆ ಬಹಳಷ್ಟು ತೊಂದರೆಯೂ ಆಗಿದೆ.