<p><strong>ಸಾಣೇಹಳ್ಳಿ (ಹೊಸದುರ್ಗ):</strong> ‘25 ವರ್ಷಗಳ ಹಿಂದೆ ಮನುಷ್ಯನಿಗೆ ಹಣವೇ ಮುಖ್ಯವಾಗಿತ್ತು. ಹಣಕ್ಕಾಗಿಯೇ ಮೆಡಿಕಲ್, ಎಂಜಿನಿಯರ್ ಶಿಕ್ಷಣ ಎನ್ನುವ ಭಾವನೆಯಿತ್ತು. ಶಿಕ್ಷಣದ ಮೂಲ ಉದ್ದೇಶ ಇದರಿಂದ ಹಾಳಾಯಿತು. ಅವಿಭಕ್ತ ಕುಟುಂಬಗಳು ವಿಭಕ್ತ ಕುಟುಂಬಗಳಾದವು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದಲ್ಲಿ ನಡೆಯುತ್ತಿರುವ ಶಿವಸಂಚಾರ ನಾಟಕೋತ್ಸವ ಬೆಳ್ಳಿಹಬ್ಬ ಕಾರ್ಯಕ್ರಮದ 4ನೇ ದಿನವಾದ ಶುಕ್ರವಾರ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸ್ವಾಮೀಜಿಯವರ ಮುಂದಾಳತ್ವದಲ್ಲಿ ಹೋದರೆ ಒಳಿತು ಸಾಧ್ಯ. ಭಾರತ ಕೋವಿಡ್ ಅನ್ನು ಎದುರಿಸಲು ಸಾಧ್ಯವಿಲ್ಲ ಎನ್ನುವ ನಂಬಿಕೆ ಹಲವರಲ್ಲಿತ್ತು. ಆದರೆ ಪ್ರಪಂಚಕ್ಕೇ ಲಸಿಕೆ ನೀಡುವ ಶಕ್ತಿಯನ್ನು ಪಡೆದುಕೊಂಡಿತು ಎಂದರು.</p>.<p>‘ಕೊರೋನೋತ್ತರ ಬದುಕು’ ಕುರಿತುಉಪನ್ಯಾಸ ನೀಡಿದ ದಾವಣಗೆರೆ ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್, ‘ಕೊರೊನಾ ಹೊಸ ರೋಗವಲ್ಲ. ಹಿಂದೆಯೂ ಅದರ ಬಗ್ಗೆ ತಿಳಿವಳಿಕೆಯಿತ್ತು. ಆದರೆ ಅದು ಇಷ್ಟು ದೊಡ್ಡ ಪ್ರಮಾಣದಲ್ಲಿ ಜಗತ್ತಿಗೆ ಆಘಾತವನ್ನುಂಟು ಮಾಡುತ್ತದೆ ಎನ್ನುವುದರ ಅರಿವಿರಲಿಲ್ಲ’ ಎಂದರು.</p>.<p>ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಮೈಸೂರಿನ ಕುಂದೂರು ಮಠದ ಶರತ್ಚಂದ್ರ ಸ್ವಾಮೀಜಿ, ಹೊಸದುರ್ಗದ ಲೇಖಕ ಎಚ್.ಎಸ್.ನವೀನಕುಮಾರ್ ಅವರ ‘ಅಮೃತ ಬಿಂದುಗಳು’ ಕೃತಿ ಲೋಕಾರ್ಪಣೆ ಮಾಡಿದರು.</p>.<p>ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಕೆ.ಎಂ. ಶಿವಲಿಂಗೇಗೌಡ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿದರು.</p>.<p>ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ, ಹೊಸದುರ್ಗದ ಸಾಹಿತಿ ಎಚ್.ಎಸ್. ನವೀನಕುಮಾರ್, ಹೊಸದುರ್ಗದ ಶಾಸಕ ಗೂಳಿಹಟ್ಟಿ ಡಿ. ಶೇಖರ್, ಮಾಜಿ ಶಾಸಕ ಗೋವಿಂದಪ್ಪ, ಪ್ರಮುಖ ಎಚ್. ಆನಂದಪ್ಪ ಇದ್ದರು.</p>.<p>ಬಳಿಕ ಲಿಂಗದೇವರು ಹಳೆಮನೆ ರಚನೆಯ ಆರ್. ಜಗದೀಶ್ ನಿರ್ದೇಶನದ ‘ಗಡಿಯಂಕ ಕುಡಿಮುದ್ದ’ ನಾಟಕ ಪ್ರದರ್ಶನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಣೇಹಳ್ಳಿ (ಹೊಸದುರ್ಗ):</strong> ‘25 ವರ್ಷಗಳ ಹಿಂದೆ ಮನುಷ್ಯನಿಗೆ ಹಣವೇ ಮುಖ್ಯವಾಗಿತ್ತು. ಹಣಕ್ಕಾಗಿಯೇ ಮೆಡಿಕಲ್, ಎಂಜಿನಿಯರ್ ಶಿಕ್ಷಣ ಎನ್ನುವ ಭಾವನೆಯಿತ್ತು. ಶಿಕ್ಷಣದ ಮೂಲ ಉದ್ದೇಶ ಇದರಿಂದ ಹಾಳಾಯಿತು. ಅವಿಭಕ್ತ ಕುಟುಂಬಗಳು ವಿಭಕ್ತ ಕುಟುಂಬಗಳಾದವು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದಲ್ಲಿ ನಡೆಯುತ್ತಿರುವ ಶಿವಸಂಚಾರ ನಾಟಕೋತ್ಸವ ಬೆಳ್ಳಿಹಬ್ಬ ಕಾರ್ಯಕ್ರಮದ 4ನೇ ದಿನವಾದ ಶುಕ್ರವಾರ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸ್ವಾಮೀಜಿಯವರ ಮುಂದಾಳತ್ವದಲ್ಲಿ ಹೋದರೆ ಒಳಿತು ಸಾಧ್ಯ. ಭಾರತ ಕೋವಿಡ್ ಅನ್ನು ಎದುರಿಸಲು ಸಾಧ್ಯವಿಲ್ಲ ಎನ್ನುವ ನಂಬಿಕೆ ಹಲವರಲ್ಲಿತ್ತು. ಆದರೆ ಪ್ರಪಂಚಕ್ಕೇ ಲಸಿಕೆ ನೀಡುವ ಶಕ್ತಿಯನ್ನು ಪಡೆದುಕೊಂಡಿತು ಎಂದರು.</p>.<p>‘ಕೊರೋನೋತ್ತರ ಬದುಕು’ ಕುರಿತುಉಪನ್ಯಾಸ ನೀಡಿದ ದಾವಣಗೆರೆ ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್, ‘ಕೊರೊನಾ ಹೊಸ ರೋಗವಲ್ಲ. ಹಿಂದೆಯೂ ಅದರ ಬಗ್ಗೆ ತಿಳಿವಳಿಕೆಯಿತ್ತು. ಆದರೆ ಅದು ಇಷ್ಟು ದೊಡ್ಡ ಪ್ರಮಾಣದಲ್ಲಿ ಜಗತ್ತಿಗೆ ಆಘಾತವನ್ನುಂಟು ಮಾಡುತ್ತದೆ ಎನ್ನುವುದರ ಅರಿವಿರಲಿಲ್ಲ’ ಎಂದರು.</p>.<p>ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಮೈಸೂರಿನ ಕುಂದೂರು ಮಠದ ಶರತ್ಚಂದ್ರ ಸ್ವಾಮೀಜಿ, ಹೊಸದುರ್ಗದ ಲೇಖಕ ಎಚ್.ಎಸ್.ನವೀನಕುಮಾರ್ ಅವರ ‘ಅಮೃತ ಬಿಂದುಗಳು’ ಕೃತಿ ಲೋಕಾರ್ಪಣೆ ಮಾಡಿದರು.</p>.<p>ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಕೆ.ಎಂ. ಶಿವಲಿಂಗೇಗೌಡ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿದರು.</p>.<p>ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ, ಹೊಸದುರ್ಗದ ಸಾಹಿತಿ ಎಚ್.ಎಸ್. ನವೀನಕುಮಾರ್, ಹೊಸದುರ್ಗದ ಶಾಸಕ ಗೂಳಿಹಟ್ಟಿ ಡಿ. ಶೇಖರ್, ಮಾಜಿ ಶಾಸಕ ಗೋವಿಂದಪ್ಪ, ಪ್ರಮುಖ ಎಚ್. ಆನಂದಪ್ಪ ಇದ್ದರು.</p>.<p>ಬಳಿಕ ಲಿಂಗದೇವರು ಹಳೆಮನೆ ರಚನೆಯ ಆರ್. ಜಗದೀಶ್ ನಿರ್ದೇಶನದ ‘ಗಡಿಯಂಕ ಕುಡಿಮುದ್ದ’ ನಾಟಕ ಪ್ರದರ್ಶನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>