<p><strong>ಧರ್ಮಪುರ:</strong> ಅತಿಯಾದ ರಾಸಾಯನಿಕ ಗೊಬ್ಬರ ಮತ್ತು ಔಷಧಿ ಬಳಕೆಯಿಂದ ಭೂಮಿ ಬರಡಾಗುತ್ತಿದ್ದು, ಇದನ್ನು ತಪ್ಪಿಸಬೇಕಾದರೆ ರೈತರು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಸಲಹೆ ನೀಡಿದರು. </p>.<p>ಸಮೀಪದ ಈಶ್ವರಗೆರೆಯಲ್ಲಿ ಶ್ರೀಕೈಲಾಸನಾಥ ರೈತ ಉತ್ಪಾದಕ ಕಂಪನಿ ಮಂಗಳವಾರ ಹಮ್ಮಿಕೊಂಡಿದ್ದ ಸರ್ವ ಸದಸ್ಯರ ವಾರ್ಷಿಕ ಸಭೆ ಉದ್ದೇಶಿಸಿ ಅವರು ಮಾತನಾಡಿದರು.</p>.<p>ರೈತರು ಹೆಚ್ಚುಹೆಚ್ಚು ಸಿರಿಧಾನ್ಯ ಬೆಳೆಯಬೇಕು. ಕೊಟ್ಟಿಗೆಯಲ್ಲಿ ಹೆಚ್ಚು ದೇಸೀ ಹಸುಗಳನ್ನು ಸಾಕಬೇಕು. ಕೊಟ್ಟಿಗೆ ಗೊಬ್ಬರ ಮತ್ತು ಗಂಜಳ ಸಂಗ್ರಹಿಸಿ ಬೆಳೆಗಳಿಗೆ ಕೊಟ್ಟಾಗ ಸಮೃದ್ಧ ಬೆಳೆಗಳನ್ನು ಬೆಳೆಯಬಹುದು ಎಂದರು.</p>.<p>ರೈತರು ಮಿಶ್ರಬೆಳೆ ಪದ್ಧತಿ ಅನುಸರಿಸಿ ಎಲ್ಲ ಬಗೆಯ ಕಾಳುಗಳನ್ನು ಬೆಳೆಯಬೇಕು ಎಂದು ಬೆಂಗಳೂರಿನ ಮೈಕ್ರೊಬಿ ಫೌಂಡೇಷನ್ ಅಧ್ಯಕ್ಷ ಕೆ.ಆರ್.ಹುಲ್ಲುನಾಚೆಗೌಡ ತಿಳಿಸಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ಎಂ.ವಿ.ಮಂಜುನಾಥ್, ಮೈಕ್ರೊಬಿ ಫೌಂಡೇಷನ್ ಸಿಇಒ ನರಸಿಂಹಪ್ಪ, ಕೃಷಿ ಅಧಿಕಾರಿ ಕಿರಣ್ ಕುಮಾರ್ ಮಾತನಾಡಿದರು. ಎಚ್.ರಾಧಾ ಶಿವಣ್ಣ, ಐಸಿಸಿಒಎ ಸಂಸ್ಥೆಯ ಜಿಲ್ಲಾ ಸಂಯೋಜಕ ಎಸ್.ತಿಪ್ಪೇಸ್ವಾಮಿ, ಶಿವರಾಜ್, ಜಯರಾಜ್, ನಿಜಲಿಂಗಪ್ಪ, ರಂಗಸ್ವಾಮಿ, ಸುಂದರೇಶ್, ಶಂಕರಪ್ಪ, ಸಿದ್ದೇಶ್, ಶಿವಮೂರ್ತಿ, ಎಚ್.ತಿಪ್ಪೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ:</strong> ಅತಿಯಾದ ರಾಸಾಯನಿಕ ಗೊಬ್ಬರ ಮತ್ತು ಔಷಧಿ ಬಳಕೆಯಿಂದ ಭೂಮಿ ಬರಡಾಗುತ್ತಿದ್ದು, ಇದನ್ನು ತಪ್ಪಿಸಬೇಕಾದರೆ ರೈತರು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಸಲಹೆ ನೀಡಿದರು. </p>.<p>ಸಮೀಪದ ಈಶ್ವರಗೆರೆಯಲ್ಲಿ ಶ್ರೀಕೈಲಾಸನಾಥ ರೈತ ಉತ್ಪಾದಕ ಕಂಪನಿ ಮಂಗಳವಾರ ಹಮ್ಮಿಕೊಂಡಿದ್ದ ಸರ್ವ ಸದಸ್ಯರ ವಾರ್ಷಿಕ ಸಭೆ ಉದ್ದೇಶಿಸಿ ಅವರು ಮಾತನಾಡಿದರು.</p>.<p>ರೈತರು ಹೆಚ್ಚುಹೆಚ್ಚು ಸಿರಿಧಾನ್ಯ ಬೆಳೆಯಬೇಕು. ಕೊಟ್ಟಿಗೆಯಲ್ಲಿ ಹೆಚ್ಚು ದೇಸೀ ಹಸುಗಳನ್ನು ಸಾಕಬೇಕು. ಕೊಟ್ಟಿಗೆ ಗೊಬ್ಬರ ಮತ್ತು ಗಂಜಳ ಸಂಗ್ರಹಿಸಿ ಬೆಳೆಗಳಿಗೆ ಕೊಟ್ಟಾಗ ಸಮೃದ್ಧ ಬೆಳೆಗಳನ್ನು ಬೆಳೆಯಬಹುದು ಎಂದರು.</p>.<p>ರೈತರು ಮಿಶ್ರಬೆಳೆ ಪದ್ಧತಿ ಅನುಸರಿಸಿ ಎಲ್ಲ ಬಗೆಯ ಕಾಳುಗಳನ್ನು ಬೆಳೆಯಬೇಕು ಎಂದು ಬೆಂಗಳೂರಿನ ಮೈಕ್ರೊಬಿ ಫೌಂಡೇಷನ್ ಅಧ್ಯಕ್ಷ ಕೆ.ಆರ್.ಹುಲ್ಲುನಾಚೆಗೌಡ ತಿಳಿಸಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ಎಂ.ವಿ.ಮಂಜುನಾಥ್, ಮೈಕ್ರೊಬಿ ಫೌಂಡೇಷನ್ ಸಿಇಒ ನರಸಿಂಹಪ್ಪ, ಕೃಷಿ ಅಧಿಕಾರಿ ಕಿರಣ್ ಕುಮಾರ್ ಮಾತನಾಡಿದರು. ಎಚ್.ರಾಧಾ ಶಿವಣ್ಣ, ಐಸಿಸಿಒಎ ಸಂಸ್ಥೆಯ ಜಿಲ್ಲಾ ಸಂಯೋಜಕ ಎಸ್.ತಿಪ್ಪೇಸ್ವಾಮಿ, ಶಿವರಾಜ್, ಜಯರಾಜ್, ನಿಜಲಿಂಗಪ್ಪ, ರಂಗಸ್ವಾಮಿ, ಸುಂದರೇಶ್, ಶಂಕರಪ್ಪ, ಸಿದ್ದೇಶ್, ಶಿವಮೂರ್ತಿ, ಎಚ್.ತಿಪ್ಪೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>