<p><strong>ಧರ್ಮಪುರ:</strong> ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘ ಎರಡು ಬಿಎಂಸಿ ಕೇಂದ್ರಗಳನ್ನು ಹೊಂದಿದ್ದು, ಅಂದಾಜು 4 ಸಾವಿರಕ್ಕೂ ಹೆಚ್ಚು ಹಾಲು ಉತ್ಪಾದನೆ ಮಾಡುವ ಮೂಲಕ ತಮ್ಮದೇ ಆದ ಹೆಸರನ್ನು ಗಳಿಸಿದೆ ಎಂದು ಶಿಮುಲ್ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ತಿಳಿಸಿದರು.</p>.<p>ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ 2024–25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಶಿಮುಲ್ ವ್ಯಾಪ್ತಿಯ ಮೂರು ಜಿಲ್ಲೆಗಳ ಒಕ್ಕೂಟದಲ್ಲಿ ಧರ್ಮಪುರ ಹಾಲು ಉತ್ಪಾದಕರ ಸಹಕಾರ ಸಂಘ ಅತೀ ಹೆಚ್ಚು ಗುಣಮಟ್ಟದ ಹಾಲು ಉತ್ಪಾದನೆ ಮಾಡುತ್ತಿದೆ. ಇದರಿಂದ ₹ 14 ಲಕ್ಷ ಲಾಭಾಂಶ ಪಡೆಯುವುದರ ಮೂಲಕ ಅಭಿವೃದ್ಧಿಯತ್ತ ಸಾಗುತ್ತಿದೆ. ಜೊತೆಗೆ ಶಿಮುಲ್ ಒಕ್ಕೂಟದಿಂದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ ಎಂದರು.</p>.<p>ಈ ಹಿಂದೆ ರೈತರ ಹಸುಗಳಿಗೆ ವಿಮೆ ಸೌಲಭ್ಯ ಮಾಡಲಾಗುತ್ತಿತ್ತು. ಆದರೆ, ಇದೀಗ ಬೇರೆ ಕಂಪನಿ ಬದಾಲಾವಣೆಯಾಗಿದ್ದು, ಆಕಸ್ಮಿಕವಾಗಿ ಮೃತಪಟ್ಟ ಹಸುಗಳ ಪೂರ್ತಿ ಹಣವನ್ನು ನೀಡಲಾಗುವುದು. ಕೃಷಿ ಇಲಾಖೆ ಸಹಯೋಗದೊಂದಿಗೆ ಪಹಣಿ ಹೊಂದಿದ ರೈತರು ಹಸುಗಳನ್ನು ಕೊಳ್ಳಲು ₹ 20,000 ಪ್ರೋತ್ಸಾಹ ಧನ ನೀಡುತ್ತಿದ್ದೇವೆ ಎಂದು ತಿಳಿಸಿದರು.</p>.<p>‘ಹೈನುಗಾರಿಕೆಯನ್ನು ನಂಬಿರುವ ರೈತರು ಆರ್ಥಿಕವಾಗಿ ಸಬಲರಾಗಿ ತಮ್ಮ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ’ ಎಂದು ಹೊಸದುರ್ಗ ವಿಭಾಗದ ಶಿಮುಲ್ ನಿರ್ದೇಶಕ ಬಿ.ಆರ್. ರವಿಕುಮಾರ್ ತಿಳಿಸಿದರು.</p>.<p>ಧರ್ಮಪುರ ಹಾಲು ಉತ್ಪಾದಕರ ಸಹಕಾರ ಸಂಘ ರಾಜ್ಯದಲ್ಲಿಯೇ ಪ್ರಸಿದ್ಧಿಯನ್ನು ಪಡೆದಿದ್ದು, ಉತ್ತಮ ಲಾಭಾಂಶ ಪಡೆದಿದ್ದರಿಂದ ಇಲ್ಲಿನ ಹಾಲು ಉತ್ಪಾದಕರಿಗೆ ₹ 2 ಪ್ರೋತ್ಸಾಹ ಧನ ನೀಡಿ ಉತ್ತೇಜನ ನೀಡುತ್ತಿರುವ ಏಕೈಕ ಕೇಂದ್ರ ಎಂದು ಧರ್ಮಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ. ದಿನೇಶ್ ಶ್ರವಣಗೆರೆ ತಿಳಿಸಿದರು.</p>.<p>ನಿರ್ದೇಶಕರಾದ ಆರ್. ಭದ್ರಚಲಾ, ಕುಮಾರ್, ಮಹಾಲಿಂಗಪ್ಪ, ಮಂಜುನಾಥ್, ಜ್ಯೋತಿ, ಲತಾ, ಕೆ. ಕೃಷ್ಣಕುಮಾರ್, ಪುಟ್ಟರಾಜು, ರವಿಚಂದ್ರನ್, ಭೂತೇಶ್, ಕಾರ್ಯದರ್ಶಿ ಮಾರುತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ:</strong> ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘ ಎರಡು ಬಿಎಂಸಿ ಕೇಂದ್ರಗಳನ್ನು ಹೊಂದಿದ್ದು, ಅಂದಾಜು 4 ಸಾವಿರಕ್ಕೂ ಹೆಚ್ಚು ಹಾಲು ಉತ್ಪಾದನೆ ಮಾಡುವ ಮೂಲಕ ತಮ್ಮದೇ ಆದ ಹೆಸರನ್ನು ಗಳಿಸಿದೆ ಎಂದು ಶಿಮುಲ್ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ತಿಳಿಸಿದರು.</p>.<p>ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ 2024–25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಶಿಮುಲ್ ವ್ಯಾಪ್ತಿಯ ಮೂರು ಜಿಲ್ಲೆಗಳ ಒಕ್ಕೂಟದಲ್ಲಿ ಧರ್ಮಪುರ ಹಾಲು ಉತ್ಪಾದಕರ ಸಹಕಾರ ಸಂಘ ಅತೀ ಹೆಚ್ಚು ಗುಣಮಟ್ಟದ ಹಾಲು ಉತ್ಪಾದನೆ ಮಾಡುತ್ತಿದೆ. ಇದರಿಂದ ₹ 14 ಲಕ್ಷ ಲಾಭಾಂಶ ಪಡೆಯುವುದರ ಮೂಲಕ ಅಭಿವೃದ್ಧಿಯತ್ತ ಸಾಗುತ್ತಿದೆ. ಜೊತೆಗೆ ಶಿಮುಲ್ ಒಕ್ಕೂಟದಿಂದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ ಎಂದರು.</p>.<p>ಈ ಹಿಂದೆ ರೈತರ ಹಸುಗಳಿಗೆ ವಿಮೆ ಸೌಲಭ್ಯ ಮಾಡಲಾಗುತ್ತಿತ್ತು. ಆದರೆ, ಇದೀಗ ಬೇರೆ ಕಂಪನಿ ಬದಾಲಾವಣೆಯಾಗಿದ್ದು, ಆಕಸ್ಮಿಕವಾಗಿ ಮೃತಪಟ್ಟ ಹಸುಗಳ ಪೂರ್ತಿ ಹಣವನ್ನು ನೀಡಲಾಗುವುದು. ಕೃಷಿ ಇಲಾಖೆ ಸಹಯೋಗದೊಂದಿಗೆ ಪಹಣಿ ಹೊಂದಿದ ರೈತರು ಹಸುಗಳನ್ನು ಕೊಳ್ಳಲು ₹ 20,000 ಪ್ರೋತ್ಸಾಹ ಧನ ನೀಡುತ್ತಿದ್ದೇವೆ ಎಂದು ತಿಳಿಸಿದರು.</p>.<p>‘ಹೈನುಗಾರಿಕೆಯನ್ನು ನಂಬಿರುವ ರೈತರು ಆರ್ಥಿಕವಾಗಿ ಸಬಲರಾಗಿ ತಮ್ಮ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ’ ಎಂದು ಹೊಸದುರ್ಗ ವಿಭಾಗದ ಶಿಮುಲ್ ನಿರ್ದೇಶಕ ಬಿ.ಆರ್. ರವಿಕುಮಾರ್ ತಿಳಿಸಿದರು.</p>.<p>ಧರ್ಮಪುರ ಹಾಲು ಉತ್ಪಾದಕರ ಸಹಕಾರ ಸಂಘ ರಾಜ್ಯದಲ್ಲಿಯೇ ಪ್ರಸಿದ್ಧಿಯನ್ನು ಪಡೆದಿದ್ದು, ಉತ್ತಮ ಲಾಭಾಂಶ ಪಡೆದಿದ್ದರಿಂದ ಇಲ್ಲಿನ ಹಾಲು ಉತ್ಪಾದಕರಿಗೆ ₹ 2 ಪ್ರೋತ್ಸಾಹ ಧನ ನೀಡಿ ಉತ್ತೇಜನ ನೀಡುತ್ತಿರುವ ಏಕೈಕ ಕೇಂದ್ರ ಎಂದು ಧರ್ಮಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ. ದಿನೇಶ್ ಶ್ರವಣಗೆರೆ ತಿಳಿಸಿದರು.</p>.<p>ನಿರ್ದೇಶಕರಾದ ಆರ್. ಭದ್ರಚಲಾ, ಕುಮಾರ್, ಮಹಾಲಿಂಗಪ್ಪ, ಮಂಜುನಾಥ್, ಜ್ಯೋತಿ, ಲತಾ, ಕೆ. ಕೃಷ್ಣಕುಮಾರ್, ಪುಟ್ಟರಾಜು, ರವಿಚಂದ್ರನ್, ಭೂತೇಶ್, ಕಾರ್ಯದರ್ಶಿ ಮಾರುತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>