<p>ಚಿತ್ರದುರ್ಗ: ‘ಜಿಲ್ಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಭಾಷಾ ಕೌಶಲದ ಸಾಮರ್ಥ್ಯ ಬೆಳೆಸಿ ಸೂಕ್ತ ಪ್ರೋತ್ಸಾಹ ನೀಡಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ತಿಳಿಸಿದರು.</p>.<p>ಇಲ್ಲಿನ ಡಯಟ್ನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಹಂತದ ಶೈಕ್ಷಣಿಕ ಅನುಷ್ಠಾನಾಧಿಕಾರಿಗಳಿಗೆ ಈಚೆಗೆ ಆಯೋಜಿಸಿದ್ದ ಡಿಆರ್ಜಿ ಸಭೆಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ವಿದ್ಯಾರ್ಥಿಗಳು ಶಿಕ್ಷಣದ ಮಹತ್ವ ತಿಳಿಸಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ಗಮನ ನೀಡಬೇಕು’ ಎಂದರು.</p>.<p>‘ಎಸ್ಎಸ್ಎಲ್ಸಿ ಫಲಿತಾಂಶ ವೃದ್ಧಿಗೆ ಅನುಷ್ಠಾನಾಧಿಕಾರಿಗಳ ಪಾತ್ರ ಮುಖ್ಯವಾಗಿದೆ. ಶಾಲೆಗೆ ನಿಯಮಿತವಾಗಿ ಭೇಟಿ ನೀಡುವುದರ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಮಾರ್ಗದರ್ಶನ ಮಾಡಬೇಕು’ ಎಂದು ತಿಳಿಸಿದರು.</p>.<p>‘ಭವಿಷ್ಯದ ಉತ್ತಮ ಪ್ರಜೆಗಳನ್ನು ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಪ್ರಾಥಮಿಕ ಹಂತದಿಂದಲೇ ಪರಿಣಾಮಕಾರಿಯಾಗಿ ಕಲಿಕಾ ಸಾಮರ್ಥ್ಯ ಹೆಚ್ಚಿಸಬೇಕು’ ಎಂದು ಡಯಟ್ ಪ್ರಾಂಶುಪಾಲ ಎಂ.ನಾಸಿರುದ್ದೀನ್ ಹೇಳಿದರು.</p>.<p>‘ಶಿಕ್ಷಕರ ಸಾಮರ್ಥ್ಯ ಅಭಿವೃದ್ಧಿಗೆ ಡಯಟ್ನಿಂದ ವಿಷಯವಾರು ತರಬೇತಿ ನೀಡಲಾಗುತ್ತಿದೆ. ತರಗತಿ ಕೋಣೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರ ಮೂಲಕ ಫಲಿತಾಂಶ ಹೆಚ್ಚಿಸಲು ಕಾರ್ಯೋನ್ಮುಖರಾಗಬೇಕು’ ಎಂದು ತಿಳಿಸಿದರು.</p>.<p>ಉಪ ಪ್ರಾಂಶುಪಾಲ ಅಶ್ವಥ್ ನಾರಾಯಣ, ಹಿರಿಯ ಉಪನ್ಯಾಸಕರಾದ ಪೂರ್ಣಿಮಾ, ಎಸ್.ಸಿ.ಪ್ರಸಾದ್, ತಿಪ್ಪೇಸ್ವಾಮಿ, ಜ್ಞಾನೇಶ್ವರಿ, ಡಿವೈಪಿಸಿ ವೆಂಕಟೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸೈಯದ್ ಮೋಸಿನ್, ನಾಗಭೂಷಣ್, ಸುರೇಶ್, ನಿರ್ಮಲಾದೇವಿ, ಉಪನ್ಯಾಸಕರಾದ ಆರ್.ನಾಗರಾಜು, ಎಸ್.ಬಸವರಾಜು, ಯು.ಸಿದ್ದೇಶಿ, ವಿ.ಕನಕಮ್ಮ, ಕೆ.ಎ.ಪದ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಜಿಲ್ಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಭಾಷಾ ಕೌಶಲದ ಸಾಮರ್ಥ್ಯ ಬೆಳೆಸಿ ಸೂಕ್ತ ಪ್ರೋತ್ಸಾಹ ನೀಡಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ತಿಳಿಸಿದರು.</p>.<p>ಇಲ್ಲಿನ ಡಯಟ್ನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಹಂತದ ಶೈಕ್ಷಣಿಕ ಅನುಷ್ಠಾನಾಧಿಕಾರಿಗಳಿಗೆ ಈಚೆಗೆ ಆಯೋಜಿಸಿದ್ದ ಡಿಆರ್ಜಿ ಸಭೆಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ವಿದ್ಯಾರ್ಥಿಗಳು ಶಿಕ್ಷಣದ ಮಹತ್ವ ತಿಳಿಸಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ಗಮನ ನೀಡಬೇಕು’ ಎಂದರು.</p>.<p>‘ಎಸ್ಎಸ್ಎಲ್ಸಿ ಫಲಿತಾಂಶ ವೃದ್ಧಿಗೆ ಅನುಷ್ಠಾನಾಧಿಕಾರಿಗಳ ಪಾತ್ರ ಮುಖ್ಯವಾಗಿದೆ. ಶಾಲೆಗೆ ನಿಯಮಿತವಾಗಿ ಭೇಟಿ ನೀಡುವುದರ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಮಾರ್ಗದರ್ಶನ ಮಾಡಬೇಕು’ ಎಂದು ತಿಳಿಸಿದರು.</p>.<p>‘ಭವಿಷ್ಯದ ಉತ್ತಮ ಪ್ರಜೆಗಳನ್ನು ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಪ್ರಾಥಮಿಕ ಹಂತದಿಂದಲೇ ಪರಿಣಾಮಕಾರಿಯಾಗಿ ಕಲಿಕಾ ಸಾಮರ್ಥ್ಯ ಹೆಚ್ಚಿಸಬೇಕು’ ಎಂದು ಡಯಟ್ ಪ್ರಾಂಶುಪಾಲ ಎಂ.ನಾಸಿರುದ್ದೀನ್ ಹೇಳಿದರು.</p>.<p>‘ಶಿಕ್ಷಕರ ಸಾಮರ್ಥ್ಯ ಅಭಿವೃದ್ಧಿಗೆ ಡಯಟ್ನಿಂದ ವಿಷಯವಾರು ತರಬೇತಿ ನೀಡಲಾಗುತ್ತಿದೆ. ತರಗತಿ ಕೋಣೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರ ಮೂಲಕ ಫಲಿತಾಂಶ ಹೆಚ್ಚಿಸಲು ಕಾರ್ಯೋನ್ಮುಖರಾಗಬೇಕು’ ಎಂದು ತಿಳಿಸಿದರು.</p>.<p>ಉಪ ಪ್ರಾಂಶುಪಾಲ ಅಶ್ವಥ್ ನಾರಾಯಣ, ಹಿರಿಯ ಉಪನ್ಯಾಸಕರಾದ ಪೂರ್ಣಿಮಾ, ಎಸ್.ಸಿ.ಪ್ರಸಾದ್, ತಿಪ್ಪೇಸ್ವಾಮಿ, ಜ್ಞಾನೇಶ್ವರಿ, ಡಿವೈಪಿಸಿ ವೆಂಕಟೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸೈಯದ್ ಮೋಸಿನ್, ನಾಗಭೂಷಣ್, ಸುರೇಶ್, ನಿರ್ಮಲಾದೇವಿ, ಉಪನ್ಯಾಸಕರಾದ ಆರ್.ನಾಗರಾಜು, ಎಸ್.ಬಸವರಾಜು, ಯು.ಸಿದ್ದೇಶಿ, ವಿ.ಕನಕಮ್ಮ, ಕೆ.ಎ.ಪದ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>