<p><strong>ಚಿತ್ರದುರ್ಗ:</strong> ಶಿಕ್ಷಕರಿಗೆ ಒಳನೋಟ ಮುಖ್ಯವಾಗಿದ್ದು, ಮಕ್ಕಳ ಕಲಿಕಾ ಸಾಮರ್ಥ್ಯ ಅರಿತುಕೊಳ್ಳಲು ಸಹಾನುಭೂತಿ, ಸಂವೇದನಾಶೀಲತೆ ಗುಣ ಬೆಳೆಸಿಕೊಳ್ಳಬೇಕು ಎಂದು ಡಯಟ್ ಉಪನ್ಯಾಸಕ ಎಸ್.ಬಸವರಾಜು ಹೇಳಿದರು.</p>.<p>ಇಲ್ಲಿನ ಡಯಟ್ನಲ್ಲಿ ಸೋಮವಾರ ಹೊಸದುರ್ಗದ ಎಸ್ವಿಎಸ್ ಶಿಕ್ಷಣ ವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಿದ್ದ ಶೈಕ್ಷಣಿಕ ಚಟುವಟಿಕೆ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ವೃತ್ತಿಪರ ಸಾಮರ್ಥ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು’ ಎಂದರು.</p>.<p>‘ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯ. ಹೊಸ ಚಿಂತನೆ, ಆಲೋಚನೆಯೊಂದಿಗೆ ನಾವೀನ್ಯಯುತ ಚಟುವಟಿಕೆ ಅಳವಡಿಸಿಕೊಂಡು ಬೋಧಿಸಬೇಕು. ತರಗತಿ ಕೋಣೆಯಲ್ಲಿ ವಿದ್ಯಾರ್ಥಿ ಸ್ನೇಹಿ ಕಲಿಕಾ ವಾತಾವರಣ ನಿರ್ಮಿಸಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ, ಜೀವನ ಮೌಲ್ಯ ಬೆಳೆಸಬೇಕು’ ಎಂದು ತಿಳಿಸಿದರು.</p>.<p>ಉಪನ್ಯಾಸಕರಾದ ವಿ.ಕನಕಮ್ಮ, ನಿತ್ಯಾನಂದ, ಗಿರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಶಿಕ್ಷಕರಿಗೆ ಒಳನೋಟ ಮುಖ್ಯವಾಗಿದ್ದು, ಮಕ್ಕಳ ಕಲಿಕಾ ಸಾಮರ್ಥ್ಯ ಅರಿತುಕೊಳ್ಳಲು ಸಹಾನುಭೂತಿ, ಸಂವೇದನಾಶೀಲತೆ ಗುಣ ಬೆಳೆಸಿಕೊಳ್ಳಬೇಕು ಎಂದು ಡಯಟ್ ಉಪನ್ಯಾಸಕ ಎಸ್.ಬಸವರಾಜು ಹೇಳಿದರು.</p>.<p>ಇಲ್ಲಿನ ಡಯಟ್ನಲ್ಲಿ ಸೋಮವಾರ ಹೊಸದುರ್ಗದ ಎಸ್ವಿಎಸ್ ಶಿಕ್ಷಣ ವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಿದ್ದ ಶೈಕ್ಷಣಿಕ ಚಟುವಟಿಕೆ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ವೃತ್ತಿಪರ ಸಾಮರ್ಥ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು’ ಎಂದರು.</p>.<p>‘ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯ. ಹೊಸ ಚಿಂತನೆ, ಆಲೋಚನೆಯೊಂದಿಗೆ ನಾವೀನ್ಯಯುತ ಚಟುವಟಿಕೆ ಅಳವಡಿಸಿಕೊಂಡು ಬೋಧಿಸಬೇಕು. ತರಗತಿ ಕೋಣೆಯಲ್ಲಿ ವಿದ್ಯಾರ್ಥಿ ಸ್ನೇಹಿ ಕಲಿಕಾ ವಾತಾವರಣ ನಿರ್ಮಿಸಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ, ಜೀವನ ಮೌಲ್ಯ ಬೆಳೆಸಬೇಕು’ ಎಂದು ತಿಳಿಸಿದರು.</p>.<p>ಉಪನ್ಯಾಸಕರಾದ ವಿ.ಕನಕಮ್ಮ, ನಿತ್ಯಾನಂದ, ಗಿರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>