ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹರಾಜು, ‘ಅಧಿಕಾರಿಗಳು ಮನಸು ಮಾಡಿ ಕೆಲಸ ನಿರ್ವಹಿಸಿದರೆ ಉತ್ತಮ ಪಂಚಾಯಿತಿಯನ್ನಾಗಿ ಮಾಡುವುದು ಕಷ್ಟವಲ್ಲ. ಸರ್ಕಾರ ನೀಡಿರುವ ಜವಾಬ್ದಾರಿಯನ್ನು ಅರಿತು ಅಸಕ್ತಿಯಿಂದ ಕರ್ತವ್ಯ ಮಾಡಿದಾಗ ಮಾತ್ರ ಪಂಚಾಯಿತಿಗಳು ಪ್ರಗತಿ ಹೊಂದಲು ಸಾಧ್ಯ’ ಎಂದು ಸಲಹೆ ನೀಡಿದರು.
ಸದಸ್ಯೆ ಸೌಭಾಗ್ಯ ಬಸವರಾಜನ್, ‘ಕೆಲ ಪಂಚಾಯಿತಿಗಳಲ್ಲಿ ಕಂಪ್ಯೂಟರ್ ಆಪರೇಟರ್ಗಳ ಸಮಸ್ಯೆ ಇದೆ. ಅದನ್ನು ಮೊದಲು ಸರಿಪಡಿಸಬೇಕಿದೆ. ಕೆಲವೆಡೆ ಪಿಡಿಒಗಳಿಗೆ ಎರಡು ಪಂಚಾಯಿತಿಗಳ ಉಸ್ತುವಾರಿ ನೀಡಲಾಗಿದೆ. ಇದರಿಂದಲೂ ಕೆಲ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ’ ಎಂದು ಅಭಿಪ್ರಾಯಪಟ್ಟರು.