ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕ್ರೀಡಾಂಗಣದಂತಹ ಸ್ಥಳಗಳಲ್ಲಿ ತಾತ್ಕಾಲಿಕವಾಗಿ ‘ಒಪನ್ ಆಸ್ಪತ್ರೆ’ಗಳನ್ನು ನಿರ್ಮಿಸಲಾಗುವುದು. ಹೊರದೇಶಗಳಲ್ಲಿ ಇಂತಹ ಆಸ್ಪತ್ರೆಗಳನ್ನು ಆರಂಭಿಸಲಾಗಿದೆ. ಇಲ್ಲಿ ಕೊರೊನ ಲಕ್ಷಣಗಳು ಇರಬಹುದಾದ ವ್ಯಕ್ತಿಗಳನ್ನು ಸಾಮೂಹಿಕವಾಗಿ ತಪಾಸಣೆ ಮಾಡಲಾಗುತ್ತದೆ. ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಲು ಸಾಧ್ಯವಾಗಲಿದೆ. ಕಾರ್ಯಪಡೆ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಗ್ರಾಮೀಣ ಭಾಗಕ್ಕೆ ರೋಗ ಕಾಲಿಡುವ ಆತಂಕ ವ್ಯಕ್ತವಾಗಿದ್ದು, ಹರಡುವಿಕೆಯನ್ನು ಸಮರ್ಥವಾಗಿ ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.