ಮಾರುಕಟ್ಟೆ, ಪ್ರಮುಖ ವೃತ್ತ, ಹೋಟೆಲ್, ಅಂಗಡಿ, ಬಸ್ ನಿಲ್ದಾಣ ಸೇರಿ ಹಲವೆಡೆ ಅಂತರ ಮರೆತು ಜನರು ಸಂಚರಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಆಗಾಗ ಸಾರ್ವಜನಿಕರಿಗೆ ಎಚ್ಚರಿಕೆ ನೀಡುತ್ತಿದ್ದರು. ಅಂತರ ಕಾಪಾಡಿಕೊಳ್ಳುವಂತೆ ಅಂಗಡಿ ಮಾಲೀಕರಿಗೂ ಸೂಚನೆ ನೀಡುತ್ತಿದ್ದರು. ಇದಕ್ಕೆ ಮಣಿಯದೇ ಇದ್ದಾಗ ದಂಡದ ಮೊರೆ ಹೋಗಿದ್ದಾರೆ.