<p><strong>ಮೊಳಕಾಲ್ಮುರು:</strong> ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಅಪ್ಲೋಡ್ ಮಾಡಲು ತೊಂದರೆಯಾಗುತ್ತಿದೆ ಎಂದು ಈಚೆಗೆ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದರು. ಇದನ್ನು ಪರಿಗಣಿಸಿ ಸರ್ಕಾರ ಲ್ಯಾಪ್ಟ್ಯಾಪ್ ನೀಡಿದೆ. ಜನರಿಂದ ದೂರು ಬಾರದ ರೀತಿಯಲ್ಲಿ ಕೆಲಸ ಮಾಡಿ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಸಲಹೆ ನೀಡಿದರು.</p>.<p>ತಾಲ್ಲೂಕು ಆಡಳಿತ ಸೌಧದಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಈಚೆಗೆ ಲ್ಯಾಪ್ಟ್ಯಾಪ್ ಉಚಿತವಾಗಿ ವಿತರಿಸಿ ಮಾತನಾಡಿದರು.</p>.<p>ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕ ಮಂಡಳಿಗಳಿಂದ ಪೂರೈಕೆಯಾಗಿದ್ದ ಕಿಟ್ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಇಲಾಖೆಯಿಂದ ಪೂರೈಕೆಯಾಗಿದ್ದ ತ್ರಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಿದರು. </p>.<p>ತಹಶೀಲ್ದಾರ್ ಟಿ. ಜಗದೀಶ್, ತಾಲ್ಲೂಕು ಪಂಚಾಯಿತಿ ಇಒ ಎಚ್. ಹನುಮಂತಪ್ಪ, ಉಪ ತಹಶೀಲ್ದಾರ್ ಮಹಾಂತೇಶ್, ಕಾರ್ಮಿಕ ಇಲಾಖೆ ಜಿಲ್ಲಾಧಿಕಾರಿ ವೈಶಾಲಿ, ದಾದಾಪೀರ್ ಇದ್ದರು.</p>.<p><strong>ಶಂಕುಸ್ಥಾಪನೆ:</strong> ತಾಲ್ಲೂಕಿನ ರಾಂಪುರ ಬಳಿಯ ವಡೇರಹಳ್ಳಿಯಲ್ಲಿ ₹2.50 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ಮೊಳಕಾಲ್ಮುರು- ಹಂಪಿ- ಕಮಲಾಪುರ ಸಂಪರ್ಕ ರಸ್ತೆಯ ನವೀಕರಣ ಮತ್ತು ಮರ್ಲಹಳ್ಳಿಯಲ್ಲಿ ₹2.50 ಕೋಟಿ ವೆಚ್ಚದಲ್ಲಿ ಮೊಳಕಾಲ್ಮುರು- ಮಲ್ಪೆ ರಾಜ್ಯ ಹೆದ್ದಾರಿಯ ನವೀಕರಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು.</p>.<p>ಲೋಕೋಪಯೋಗಿ ಇಲಾಖೆ ಎಇಇ ಲಕ್ಷ್ಮೀನಾರಾಯಣ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ನಾಗಸಮುದ್ರ ಗೋವಿಂದಪ್ಪ, ಗೌರವಾಧ್ಯಕ್ಷ ಎಸ್. ಖಾದರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಅಪ್ಲೋಡ್ ಮಾಡಲು ತೊಂದರೆಯಾಗುತ್ತಿದೆ ಎಂದು ಈಚೆಗೆ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದರು. ಇದನ್ನು ಪರಿಗಣಿಸಿ ಸರ್ಕಾರ ಲ್ಯಾಪ್ಟ್ಯಾಪ್ ನೀಡಿದೆ. ಜನರಿಂದ ದೂರು ಬಾರದ ರೀತಿಯಲ್ಲಿ ಕೆಲಸ ಮಾಡಿ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಸಲಹೆ ನೀಡಿದರು.</p>.<p>ತಾಲ್ಲೂಕು ಆಡಳಿತ ಸೌಧದಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಈಚೆಗೆ ಲ್ಯಾಪ್ಟ್ಯಾಪ್ ಉಚಿತವಾಗಿ ವಿತರಿಸಿ ಮಾತನಾಡಿದರು.</p>.<p>ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕ ಮಂಡಳಿಗಳಿಂದ ಪೂರೈಕೆಯಾಗಿದ್ದ ಕಿಟ್ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಇಲಾಖೆಯಿಂದ ಪೂರೈಕೆಯಾಗಿದ್ದ ತ್ರಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಿದರು. </p>.<p>ತಹಶೀಲ್ದಾರ್ ಟಿ. ಜಗದೀಶ್, ತಾಲ್ಲೂಕು ಪಂಚಾಯಿತಿ ಇಒ ಎಚ್. ಹನುಮಂತಪ್ಪ, ಉಪ ತಹಶೀಲ್ದಾರ್ ಮಹಾಂತೇಶ್, ಕಾರ್ಮಿಕ ಇಲಾಖೆ ಜಿಲ್ಲಾಧಿಕಾರಿ ವೈಶಾಲಿ, ದಾದಾಪೀರ್ ಇದ್ದರು.</p>.<p><strong>ಶಂಕುಸ್ಥಾಪನೆ:</strong> ತಾಲ್ಲೂಕಿನ ರಾಂಪುರ ಬಳಿಯ ವಡೇರಹಳ್ಳಿಯಲ್ಲಿ ₹2.50 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ಮೊಳಕಾಲ್ಮುರು- ಹಂಪಿ- ಕಮಲಾಪುರ ಸಂಪರ್ಕ ರಸ್ತೆಯ ನವೀಕರಣ ಮತ್ತು ಮರ್ಲಹಳ್ಳಿಯಲ್ಲಿ ₹2.50 ಕೋಟಿ ವೆಚ್ಚದಲ್ಲಿ ಮೊಳಕಾಲ್ಮುರು- ಮಲ್ಪೆ ರಾಜ್ಯ ಹೆದ್ದಾರಿಯ ನವೀಕರಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು.</p>.<p>ಲೋಕೋಪಯೋಗಿ ಇಲಾಖೆ ಎಇಇ ಲಕ್ಷ್ಮೀನಾರಾಯಣ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ನಾಗಸಮುದ್ರ ಗೋವಿಂದಪ್ಪ, ಗೌರವಾಧ್ಯಕ್ಷ ಎಸ್. ಖಾದರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>