<p><strong>ಹೊಸದುರ್ಗ</strong>: ಗ್ರಾಮೀಣ ಭಾಗದ ಜನರ ಆರ್ಥಿಕ ಸಬಲೀಕರಣಕ್ಕಾಗಿ ನಾಟಿಕೋಳಿ ಮರಿಗಳನ್ನು ವಿತರಿಸಲಾಗುತ್ತಿದೆ. ನಾಟಿಕೋಳಿ ಸಾಕಾಣಿಕೆ ರೈತರ ಆದಾಯ ಹೆಚ್ಚಿಸುತ್ತದೆ. ಮೊಟ್ಟೆ ಸೇವನೆಯಿಂದ ಆರೋಗ್ಯವೂ ವೃದ್ಧಿಸುತ್ತದೆ ಎಂದು ಮುಖ್ಯ ಪಶುವೈದ್ಯಾಧಿಕಾರಿ ಕಿರಣ್ ಎಚ್.ಎಂ. ಹೇಳಿದರು.</p>.<p>ಪಟ್ಟಣದ ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ ವತಿಯಿಂದ ಗ್ರಾಮೀಣ ರೈತ ಮಹಿಳೆಯರಿಗೆ 20 ನಾಟಿಕೋಳಿ ಮರಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.<br><br> ನಾಟಿಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಕರೆಯಲಾಗಿತ್ತು. ಲಾಟರಿ ಮೂಲಕ ಆಯ್ಕೆ ಮಾಡಲಾಗಿದೆ. ಪ.ಜಾತಿಯವರಿಗೆ 60, ಪಂಗಡದವರಿಗೆ 60 ಹಾಗೂ ಸಾಮಾನ್ಯ ವರ್ಗದವರಿಗೆ ತಲಾ 20 ಮರಿಗಳನ್ನು ತಾಲ್ಲೂಕಿನಾದ್ಯಂತ ವಿತರಿಸಲಾಗಿದೆ ಎಂದು ಹೇಳಿದರು.<br><br> ಜಾನುವಾರು ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಮುಖ್ಯ ಪಶುವೈದ್ಯಾಧಿಕಾರಿ ದಾಸಯ್ಯ, ಪಶು ವೈದ್ಯಕೀಯ ಪರಿವೀಕ್ಷಕ ದೇವರಾಜ್ , ಪಶು ವೈದ್ಯಾಧಿಕಾರಿ ಕೆ.ಎಂ. ಬಸವರಾಜ್, ಮುಖಂಡರಾದ ನಿರಂಜನಮೂರ್ತಿ ಸೇರಿದಂತೆ ಸಿಬ್ಬಂದಿ ಹಾಗೂ ಫಲಾನುಭವಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ಗ್ರಾಮೀಣ ಭಾಗದ ಜನರ ಆರ್ಥಿಕ ಸಬಲೀಕರಣಕ್ಕಾಗಿ ನಾಟಿಕೋಳಿ ಮರಿಗಳನ್ನು ವಿತರಿಸಲಾಗುತ್ತಿದೆ. ನಾಟಿಕೋಳಿ ಸಾಕಾಣಿಕೆ ರೈತರ ಆದಾಯ ಹೆಚ್ಚಿಸುತ್ತದೆ. ಮೊಟ್ಟೆ ಸೇವನೆಯಿಂದ ಆರೋಗ್ಯವೂ ವೃದ್ಧಿಸುತ್ತದೆ ಎಂದು ಮುಖ್ಯ ಪಶುವೈದ್ಯಾಧಿಕಾರಿ ಕಿರಣ್ ಎಚ್.ಎಂ. ಹೇಳಿದರು.</p>.<p>ಪಟ್ಟಣದ ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ ವತಿಯಿಂದ ಗ್ರಾಮೀಣ ರೈತ ಮಹಿಳೆಯರಿಗೆ 20 ನಾಟಿಕೋಳಿ ಮರಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.<br><br> ನಾಟಿಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಕರೆಯಲಾಗಿತ್ತು. ಲಾಟರಿ ಮೂಲಕ ಆಯ್ಕೆ ಮಾಡಲಾಗಿದೆ. ಪ.ಜಾತಿಯವರಿಗೆ 60, ಪಂಗಡದವರಿಗೆ 60 ಹಾಗೂ ಸಾಮಾನ್ಯ ವರ್ಗದವರಿಗೆ ತಲಾ 20 ಮರಿಗಳನ್ನು ತಾಲ್ಲೂಕಿನಾದ್ಯಂತ ವಿತರಿಸಲಾಗಿದೆ ಎಂದು ಹೇಳಿದರು.<br><br> ಜಾನುವಾರು ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಮುಖ್ಯ ಪಶುವೈದ್ಯಾಧಿಕಾರಿ ದಾಸಯ್ಯ, ಪಶು ವೈದ್ಯಕೀಯ ಪರಿವೀಕ್ಷಕ ದೇವರಾಜ್ , ಪಶು ವೈದ್ಯಾಧಿಕಾರಿ ಕೆ.ಎಂ. ಬಸವರಾಜ್, ಮುಖಂಡರಾದ ನಿರಂಜನಮೂರ್ತಿ ಸೇರಿದಂತೆ ಸಿಬ್ಬಂದಿ ಹಾಗೂ ಫಲಾನುಭವಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>