ಅದಿರು ಸಾಗಣೆಯಾಗುವ ರಸ್ತೆಯ ಎರಡು ಬದಿಯಲ್ಲಿ ಗ್ರಾಮದ ಅಳತೆಗೆ ಗ್ರಿಲ್ ವ್ಯವಸ್ಥೆ ಮಾಡುವ ಮೂಲಕ ಪಾದಚರಿಗಳಿಗೆ ಅನುಕೂಲ ಮಾಡಿಕೊಡಬೇಕು. ಕೊಳವೆಬಾವಿ ಹಾಗೂ ಪೈಪ್ಲೈನ್ ವ್ಯವಸ್ಥೆ ಕಲ್ಪಿಸಬೇಕು. ಉದ್ಯಾನ ವನಗಳನ್ನು ನಿರ್ಮಿಸಬೇಕು ಎಂದು ಹಿರೇಗುಂಟನೂರು, ಹಿರೇಗುಂಟನೂರು ಗೊಲ್ಲರಹಟ್ಟಿ, ಚಿಕ್ಕಗುಂಟನೂರು, ಮಾನಂಗಿ, ಸಿದ್ದಾಪುರ, ಬಿ. ದುರ್ಗ, ಸಿರಿಗೆರೆ, ಬೊಮ್ಮವ್ವ ನಾಗತಿಹಳ್ಳಿ, ಮುತ್ತುಗದೂರು, ಮೆದಕೇರಿಪುರ ಗ್ರಾಮಗಳ ಗ್ರಾಮಸ್ಥರು ಕೋರಿದರು.