<p><strong>ನಾಯಕನಹಟ್ಟಿ: </strong>ಗುರು ತಿಪ್ಪೇರುದ್ರಸ್ವಾಮಿ ವಾರ್ಷಿಕ ದೊಡ್ಡ ಕಾರ್ತಿಕೋತ್ಸವ ಶುಕ್ರವಾರ ಸಡಗರದಿಂದ ನಡೆಯಿತು.</p>.<p>ಶುಕ್ರವಾರ ಬೆಳಿಗ್ಗೆಯಿಂದಲೇ ಬಣ್ಣ ಬಣ್ಣದ ಬಾವುಟಗಳಿಂದ ರಥವನ್ನು ಸಿಂಗಾರ ಮಾಡಲಾಗಿತ್ತು. ಮಧ್ಯಾಹ್ನ 3ಕ್ಕೆ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಸಕಲ ಪೂಜಾ ವಿಧಿವಿಧಾನಗಳಿಂದ ಪ್ರತಿಷ್ಠಾಪಿಸಿ ರಥಕ್ಕೆ ಚಾಲನೆ ನೀಡಲಾಯಿತು.</p>.<p>ಭಕ್ತರು ಸಂಭ್ರಮದಿಂದ ರಥವನ್ನು ಎಳೆದರು. ರಥ ಸಾಗುವ ದಾರಿಯುದ್ದಕ್ಕೂ ಮಹಿಳೆಯರು, ಮಕ್ಕಳು ಬಾಳೆಹಣ್ಣು, ಕಾಳುಮೆಣಸು, ಬೆಲ್ಲದ ಚೂರನ್ನು ರಥಕ್ಕೆ ಹಾಕಿ ಹರಕೆ ಪೂರೈಸಿದರು. ಪಂಜು, ಕರಡಿ ಮಜಲು, ಡೊಳ್ಳು ವಾದ್ಯ ಹಾಗೂ ನಂದಿಕೋಲು ಕುಣಿತ ಆಕರ್ಷಿಸಿತು.</p>.<p>ರಥ ಸಾಗುತ್ತ ವೀರಭದ್ರನ ಓಣಿಗೆ ಬಂದಾಗ ಹರಕೆ ಹೊತ್ತ ನೂರಾರು ಯುವಕರು ಬೆಳಿಗ್ಗೆಯಿಂದಲೇ ಉಪವಾಸ ವ್ರತ ಕೈಗೊಂಡಿದ್ದರು. ಯುವಕರು ಶಸ್ತ್ರ ಪೂಜಾ ವಿಧಿಗಳನ್ನು ಕೈಗೊಂಡು, ಚೂಪಾದ ಪಂಚಲೋಹದ ಕಡ್ಡಿಗಳನ್ನು ಬಾಯಿಗೆ ಸಿಕ್ಕಿಸಿಕೊಂಡು ವೀರಭದ್ರ ಕುಣಿತ ಪ್ರದರ್ಶಿಸಿದರು.</p>.<p>ನಂತರ ಸಂಜೆ ಸಕಲ ಬಿರುದಾವಳಿಗಳಿಂದ ದೇವರನ್ನು ಗುಡಿದುಂಬಿಸಲಾಯಿತು. ನಂತರ ನೆರೆದ ಭಕ್ತರೆಲ್ಲರಿಗೂ ವಿಶೇಷವಾದ ಸಜ್ಜೆ ಮತ್ತು ಕಡ್ಲೆಕಾಳು ಮೊಳಕೆಯನ್ನು ಪ್ರಸಾದವಾಗಿ ವಿತರಿಸಿದರು. ಉತ್ಸವಕ್ಕೆ ಜನಪದ ಕಲಾತಂಡಗಳಾದ ಕೋಲಾಟ, ಬೊಂಬೆ ಕುಣಿತ, ಮೆರುಗು ಹೆಚ್ಚಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ: </strong>ಗುರು ತಿಪ್ಪೇರುದ್ರಸ್ವಾಮಿ ವಾರ್ಷಿಕ ದೊಡ್ಡ ಕಾರ್ತಿಕೋತ್ಸವ ಶುಕ್ರವಾರ ಸಡಗರದಿಂದ ನಡೆಯಿತು.</p>.<p>ಶುಕ್ರವಾರ ಬೆಳಿಗ್ಗೆಯಿಂದಲೇ ಬಣ್ಣ ಬಣ್ಣದ ಬಾವುಟಗಳಿಂದ ರಥವನ್ನು ಸಿಂಗಾರ ಮಾಡಲಾಗಿತ್ತು. ಮಧ್ಯಾಹ್ನ 3ಕ್ಕೆ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಸಕಲ ಪೂಜಾ ವಿಧಿವಿಧಾನಗಳಿಂದ ಪ್ರತಿಷ್ಠಾಪಿಸಿ ರಥಕ್ಕೆ ಚಾಲನೆ ನೀಡಲಾಯಿತು.</p>.<p>ಭಕ್ತರು ಸಂಭ್ರಮದಿಂದ ರಥವನ್ನು ಎಳೆದರು. ರಥ ಸಾಗುವ ದಾರಿಯುದ್ದಕ್ಕೂ ಮಹಿಳೆಯರು, ಮಕ್ಕಳು ಬಾಳೆಹಣ್ಣು, ಕಾಳುಮೆಣಸು, ಬೆಲ್ಲದ ಚೂರನ್ನು ರಥಕ್ಕೆ ಹಾಕಿ ಹರಕೆ ಪೂರೈಸಿದರು. ಪಂಜು, ಕರಡಿ ಮಜಲು, ಡೊಳ್ಳು ವಾದ್ಯ ಹಾಗೂ ನಂದಿಕೋಲು ಕುಣಿತ ಆಕರ್ಷಿಸಿತು.</p>.<p>ರಥ ಸಾಗುತ್ತ ವೀರಭದ್ರನ ಓಣಿಗೆ ಬಂದಾಗ ಹರಕೆ ಹೊತ್ತ ನೂರಾರು ಯುವಕರು ಬೆಳಿಗ್ಗೆಯಿಂದಲೇ ಉಪವಾಸ ವ್ರತ ಕೈಗೊಂಡಿದ್ದರು. ಯುವಕರು ಶಸ್ತ್ರ ಪೂಜಾ ವಿಧಿಗಳನ್ನು ಕೈಗೊಂಡು, ಚೂಪಾದ ಪಂಚಲೋಹದ ಕಡ್ಡಿಗಳನ್ನು ಬಾಯಿಗೆ ಸಿಕ್ಕಿಸಿಕೊಂಡು ವೀರಭದ್ರ ಕುಣಿತ ಪ್ರದರ್ಶಿಸಿದರು.</p>.<p>ನಂತರ ಸಂಜೆ ಸಕಲ ಬಿರುದಾವಳಿಗಳಿಂದ ದೇವರನ್ನು ಗುಡಿದುಂಬಿಸಲಾಯಿತು. ನಂತರ ನೆರೆದ ಭಕ್ತರೆಲ್ಲರಿಗೂ ವಿಶೇಷವಾದ ಸಜ್ಜೆ ಮತ್ತು ಕಡ್ಲೆಕಾಳು ಮೊಳಕೆಯನ್ನು ಪ್ರಸಾದವಾಗಿ ವಿತರಿಸಿದರು. ಉತ್ಸವಕ್ಕೆ ಜನಪದ ಕಲಾತಂಡಗಳಾದ ಕೋಲಾಟ, ಬೊಂಬೆ ಕುಣಿತ, ಮೆರುಗು ಹೆಚ್ಚಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>