ಲಿಂಗಾಯತ ವೀರಶೈವರಲ್ಲಿ ಬಡವರು, ಶೋಷಿತರು ಇದ್ದಾರೆ. ಇಂತಹ ಸಮುದಾಯವನ್ನು ಕೇಂದ್ರದ ಹಿಂದುಳಿದ ಜಾತಿ ಪಟ್ಟಿಗೆ ಸೇರಿಸುವ ಶಿಫಾರಸ್ಸು ಮಾಡುವುದಾಗಿ ಹೇಳಿದ್ದು ಸಮುದಾಯದಲ್ಲಿ ಸಂಚಲನ ಉಂಟು ಮಾಡಿದೆ. ಇದೊಂದು ನಿರ್ಧಾರ ಕೇಳಿ ಸಂತಸ ಉಂಟಾಗಿದೆ. ಆ ಕಾರ್ಯವನ್ನು ಯಡಿಯೂರಪ್ಪ ಅವರೇ ಪೂರ್ಣಗೊಳಿಸಬೇಕು. ಬೇರೆ ಯಾರೂ ಈ ಕೆಲಸ ಮಾಡಲು ಸಾಧ್ಯವಿಲ್ಲ. ಇದಕ್ಕಾಗಿ ಮುಖ್ಯಮಂತ್ರಿ ಹುದ್ದೆಯಲ್ಲಿ ಯಡಿಯೂರಪ್ಪ ಮುಂದುವರೆಯಬೇಕಿದೆ ಎಂದರು.