<p><strong>ಚಳ್ಳಕೆರೆ</strong>: ನಗರದ ವಿವಿಧ ವಾರ್ಡ್ಗಳಿಗೆ ಚರಂಡಿ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಲು ₹260 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಸರ್ಕಾರಕ್ಕೆ ಮನವಿ ಮಾಡಿದರು. </p>.<p>ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಚಳಿಗಾಲದ ಅಧಿವೇಶನದಲ್ಲಿ ಅವರು ಈ ಬಗ್ಗೆ ಸರ್ಕಾರದ ಗಮನ ಸೆಳೆದರು. </p>.<p>ಒಳಚರಂಡಿ ಕಾಮಗಾರಿ ಯೋಜನೆಗಳಿಗೆ ಈ ಹಿಂದೆ ₹197 ಕೋಟಿ ಅನುದಾನ ಬೇಕಾಗಬಹುದು ಎಂದು ಅಂದಾಜಿಸಲಾಗುತ್ತು. ಇದೀಗ ಯೋಜನಾ ವೆಚ್ಚ ₹253 ಕೋಟಿ ಆಗಿದೆ. ಪ್ರಸ್ತುತ ಯೋಜನೆ ಜಾರಿಗೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ ಎಂದು ರಘುಮೂರ್ತಿ ತಿಳಿಸಿದರು. </p>.<p>ಶಾಸಕರ ಮಾತಿಗೆ ಪ್ರತಿಕ್ರಿಯಿಸಿದ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಬೈರತಿ ಸುರೇಶ್, 2015ರಲ್ಲಿ ಒಳಚರಂಡಿ ಯೋಜನೆಗೆ ₹100 ಕೋಟಿ ವೆಚ್ಚವನ್ನು ಅಂದಾಜಿಸಲಾಗಿತ್ತು. ಇದೀಗ ₹260 ಕೋಟಿ ವೆಚ್ಚದ ಅಂದಾಜು ಮಾಡಲಾಗಿದೆ. ಹಣಕಾಸು ಇಲಾಖೆಯ ಸಲಹೆ ಪಡೆದ ನಂತರ ಹಣಕಾಸಿನ ಲಭ್ಯತೆ ನೋಡಿಕೊಂಡು ಈ ಯೋಜನೆ ಜಾರಿಗೆ ಕ್ರಮವ ಹಿಸುವುದಾಗಿ ಸಚಿವರು ಭರವಸೆ ನೀಡಿದರು.</p>.<p>ಆಸಕ್ತಿ ವಹಿಸಿ ಈ ಯೋಜನೆ ಜಾರಿಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಮುಖ್ಯಮಂತ್ರಿಗೆ ಮತ್ತೊಮ್ಮೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ನಗರದ ವಿವಿಧ ವಾರ್ಡ್ಗಳಿಗೆ ಚರಂಡಿ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಲು ₹260 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಸರ್ಕಾರಕ್ಕೆ ಮನವಿ ಮಾಡಿದರು. </p>.<p>ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಚಳಿಗಾಲದ ಅಧಿವೇಶನದಲ್ಲಿ ಅವರು ಈ ಬಗ್ಗೆ ಸರ್ಕಾರದ ಗಮನ ಸೆಳೆದರು. </p>.<p>ಒಳಚರಂಡಿ ಕಾಮಗಾರಿ ಯೋಜನೆಗಳಿಗೆ ಈ ಹಿಂದೆ ₹197 ಕೋಟಿ ಅನುದಾನ ಬೇಕಾಗಬಹುದು ಎಂದು ಅಂದಾಜಿಸಲಾಗುತ್ತು. ಇದೀಗ ಯೋಜನಾ ವೆಚ್ಚ ₹253 ಕೋಟಿ ಆಗಿದೆ. ಪ್ರಸ್ತುತ ಯೋಜನೆ ಜಾರಿಗೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ ಎಂದು ರಘುಮೂರ್ತಿ ತಿಳಿಸಿದರು. </p>.<p>ಶಾಸಕರ ಮಾತಿಗೆ ಪ್ರತಿಕ್ರಿಯಿಸಿದ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಬೈರತಿ ಸುರೇಶ್, 2015ರಲ್ಲಿ ಒಳಚರಂಡಿ ಯೋಜನೆಗೆ ₹100 ಕೋಟಿ ವೆಚ್ಚವನ್ನು ಅಂದಾಜಿಸಲಾಗಿತ್ತು. ಇದೀಗ ₹260 ಕೋಟಿ ವೆಚ್ಚದ ಅಂದಾಜು ಮಾಡಲಾಗಿದೆ. ಹಣಕಾಸು ಇಲಾಖೆಯ ಸಲಹೆ ಪಡೆದ ನಂತರ ಹಣಕಾಸಿನ ಲಭ್ಯತೆ ನೋಡಿಕೊಂಡು ಈ ಯೋಜನೆ ಜಾರಿಗೆ ಕ್ರಮವ ಹಿಸುವುದಾಗಿ ಸಚಿವರು ಭರವಸೆ ನೀಡಿದರು.</p>.<p>ಆಸಕ್ತಿ ವಹಿಸಿ ಈ ಯೋಜನೆ ಜಾರಿಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಮುಖ್ಯಮಂತ್ರಿಗೆ ಮತ್ತೊಮ್ಮೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>