ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾನಮತ್ತ ಬೇಡರರೆಡ್ಡಿಹಳ್ಳಿ ಪಿಡಿಒ ಅಮಾನತು

Last Updated 18 ಜನವರಿ 2023, 4:33 IST
ಅಕ್ಷರ ಗಾತ್ರ

ಚಳ್ಳಕೆರೆ: ಪಾನಮತ್ತನಾಗಿ ಪದೇ ಪದೆ ಕರ್ತವ್ಯ ಲೋಪವೆಸಗುತ್ತಿದ್ದ ತಾಲ್ಲೂಕಿನ ತಳಕು ಹೋಬಳಿ ವ್ಯಾಪ್ತಿಯ ಬೇಡರರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಹನುಮಂತಕುಮಾರ್ ಎಂಬಾತನನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ದಿವಾಕರ್‌ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಎಸ್.ಹನುಮಂತಕುಮಾರ್, ಕರ್ತವ್ಯಕ್ಕೆ ಹಾಜರಾಗದೆ ಪಾನಮತ್ತನಾಗಿ ನಗರದ ಬಸ್ ನಿಲ್ದಾಣದಲ್ಲಿ ಬಿದ್ದಿರುತ್ತಿದ್ದರು. ಕಚೇರಿ ವೇಳೆಯಲ್ಲೇ ಮದ್ಯಸೇವನೆ ಮಾಡುತ್ತಿದ್ದರು. ಇದೇ ಪ್ರವೃತ್ತಿಯನ್ನು ಮುಂದುವರಿಸಿದ್ದರು. ಮೇಲಧಿಕಾರಿಗಳ ಯಾವುದೇ ಪೂರ್ವಾನುಮತಿ ಪಡೆಯದೇ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗುತ್ತಿದ್ದರು.

ಇ-ಸ್ವತ್ತು, ಕುಡಿಯುವ ನೀರಿನ ತೊಂದರೆಯಾಗುತ್ತಿತ್ತು. ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಇಒಗೆ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಸಿಇಒ ಕ್ರಮ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT