<p><strong>ಚಿತ್ರದುರ್ಗ:</strong> ಇಲ್ಲಿಯ ತರಾಸು ರಂಗಮಂದಿರದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಅಂಗವಾಗಿ ಭಾನುವಾರ ಆರಂಭವಾದ ಕುವೆಂಪು ನಾಟಕೋತ್ಸವದ ಮೊದಲ ದಿನದ ಪ್ರಥಮ ಪ್ರದರ್ಶನದಲ್ಲಿ ‘ಬೊಮ್ಮನಹಳ್ಳಿ ಕಿಂದರಿಜೋಗಿ’ ನಾಟಕ ಪ್ರೇಕ್ಷಕರ ಕಣ್ಮನ ಸೆಳೆಯಿತು.</p>.<p>ಕುವೆಂಪು ರಚಿತ ತುಂಗಾ ತೀರದ ಬಲಗಡೆಯಲ್ಲಿ ಹಿಂದಲ್ಲಿದ್ದುದು ಬೊಮ್ಮನಹಳ್ಳಿ, ಅಲ್ಲೇನಿಲಿಗಳ ಕಾಟವೆ ಕಾಟ ಅಲ್ಲಿನ ಜನಗಳಿಗತಿಗೋಳಾಟ ಕವನದ ಸಾಲಿನೊಂದಿಗೆ ನಾಟಕ ಆರಂಭವಾದಾಗ ಇಡೀ ಆವರಣ ಮೌನಕ್ಕೆ ಜಾರಿತು. ಅರ್ಧ ತಾಸು ನೆರೆದಿದ್ದವರನ್ನು ನಗೆಗಡಲಲ್ಲಿ ತೇಲಾಡಿಸಿತು.</p>.<p>ಇಲಿಗಳ ಆರ್ಭಟಕ್ಕೆ ಹಳ್ಳಿಯ ಜನ ತತ್ತರಿಸುವ ಸನ್ನಿವೇಶಗಳನ್ನು ಮಕ್ಕಳು ಅದ್ಭುತವಾಗಿ ಕಟ್ಟಿಕೊಟ್ಟರು. ಕಿಂದರಿ ಜೋಗಿ ಸೇರಿ ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡ 50ಕ್ಕೂ ಹೆಚ್ಚು ಮಂದಿಯ ಅಭಿನಯ ಮನೋಜ್ಞವಾಗಿತ್ತು. ಸಭಿಕರ ಗ್ಯಾಲರಿಯಿಂದ ಕೊನೆಯಲ್ಲಿ ಚಪ್ಪಾಳೆ, ಶಿಳ್ಳೆ ಸೇರಿ ಕರತಾಡನ ವ್ಯಕ್ತವಾಯಿತು.</p>.<p>ನಾಟಕೋತ್ಸವಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಕುವೆಂಪು ಕನ್ನಡ ಭಾಷೆಗೆ ನೀಡಿದ ಕೊಡುಗೆ ಅಪಾರ. ಸಾಹಿತ್ಯ ಲೋಕದ ದಿಗ್ಗಜರಾದ ಅವರು ಮೇರು ಕವಿಯಾಗಿದ್ದಾರೆ. ಅವರ ಸವಿನೆನಪಿಗಾಗಿ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ರಂಗಕಹಳೆ ತಂಡದಿಂದ ಈ ಕಾರ್ಯಕ್ರಮ ಆಯೋಜಿಸಿದೆ ಎಂದು ಹೇಳಿದರು.</p>.<p>ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ, ‘ಕುವೆಂಪು ಸಾಹಿತ್ಯ ವಲಯದ ಎಲ್ಲಾ ಆಯಾಮಗಳಿಗೂ ಪರಿಪೂರ್ಣ ನ್ಯಾಯ ಒದಗಿಸಿದ ಮಹಾನ್ ಕವಿ. ಕನ್ನಡವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಕೀರ್ತಿಯೂ ಅವರಿಗೆ ಸಲ್ಲುತ್ತದೆ. ಸಾಂಪ್ರದಾಯಿಕ ನೆಲೆಗಟ್ಟಿನ ನಡುವೆಯೂ ಜನರಲ್ಲಿ ವೈಜ್ಞಾನಿಕ, ವೈಚಾರಿಕ ಪ್ರಜ್ಞೆ ಮೂಡಿಸುವಲ್ಲಿ ಯಶಸ್ವಿಯಾದವರು. ಅದಕ್ಕಾಗಿಯೇ ಅವರನ್ನು ವಿಶ್ವಮಾನವ ಎಂದು ಕರೆಯಲಾಗುತ್ತಿದೆ’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ, ತೋಟಪ್ಪ ಉತ್ತಂಗಿ, ಕೆಪಿಎಂ ಗಣೇಶಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಇಲ್ಲಿಯ ತರಾಸು ರಂಗಮಂದಿರದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಅಂಗವಾಗಿ ಭಾನುವಾರ ಆರಂಭವಾದ ಕುವೆಂಪು ನಾಟಕೋತ್ಸವದ ಮೊದಲ ದಿನದ ಪ್ರಥಮ ಪ್ರದರ್ಶನದಲ್ಲಿ ‘ಬೊಮ್ಮನಹಳ್ಳಿ ಕಿಂದರಿಜೋಗಿ’ ನಾಟಕ ಪ್ರೇಕ್ಷಕರ ಕಣ್ಮನ ಸೆಳೆಯಿತು.</p>.<p>ಕುವೆಂಪು ರಚಿತ ತುಂಗಾ ತೀರದ ಬಲಗಡೆಯಲ್ಲಿ ಹಿಂದಲ್ಲಿದ್ದುದು ಬೊಮ್ಮನಹಳ್ಳಿ, ಅಲ್ಲೇನಿಲಿಗಳ ಕಾಟವೆ ಕಾಟ ಅಲ್ಲಿನ ಜನಗಳಿಗತಿಗೋಳಾಟ ಕವನದ ಸಾಲಿನೊಂದಿಗೆ ನಾಟಕ ಆರಂಭವಾದಾಗ ಇಡೀ ಆವರಣ ಮೌನಕ್ಕೆ ಜಾರಿತು. ಅರ್ಧ ತಾಸು ನೆರೆದಿದ್ದವರನ್ನು ನಗೆಗಡಲಲ್ಲಿ ತೇಲಾಡಿಸಿತು.</p>.<p>ಇಲಿಗಳ ಆರ್ಭಟಕ್ಕೆ ಹಳ್ಳಿಯ ಜನ ತತ್ತರಿಸುವ ಸನ್ನಿವೇಶಗಳನ್ನು ಮಕ್ಕಳು ಅದ್ಭುತವಾಗಿ ಕಟ್ಟಿಕೊಟ್ಟರು. ಕಿಂದರಿ ಜೋಗಿ ಸೇರಿ ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡ 50ಕ್ಕೂ ಹೆಚ್ಚು ಮಂದಿಯ ಅಭಿನಯ ಮನೋಜ್ಞವಾಗಿತ್ತು. ಸಭಿಕರ ಗ್ಯಾಲರಿಯಿಂದ ಕೊನೆಯಲ್ಲಿ ಚಪ್ಪಾಳೆ, ಶಿಳ್ಳೆ ಸೇರಿ ಕರತಾಡನ ವ್ಯಕ್ತವಾಯಿತು.</p>.<p>ನಾಟಕೋತ್ಸವಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಕುವೆಂಪು ಕನ್ನಡ ಭಾಷೆಗೆ ನೀಡಿದ ಕೊಡುಗೆ ಅಪಾರ. ಸಾಹಿತ್ಯ ಲೋಕದ ದಿಗ್ಗಜರಾದ ಅವರು ಮೇರು ಕವಿಯಾಗಿದ್ದಾರೆ. ಅವರ ಸವಿನೆನಪಿಗಾಗಿ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ರಂಗಕಹಳೆ ತಂಡದಿಂದ ಈ ಕಾರ್ಯಕ್ರಮ ಆಯೋಜಿಸಿದೆ ಎಂದು ಹೇಳಿದರು.</p>.<p>ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ, ‘ಕುವೆಂಪು ಸಾಹಿತ್ಯ ವಲಯದ ಎಲ್ಲಾ ಆಯಾಮಗಳಿಗೂ ಪರಿಪೂರ್ಣ ನ್ಯಾಯ ಒದಗಿಸಿದ ಮಹಾನ್ ಕವಿ. ಕನ್ನಡವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಕೀರ್ತಿಯೂ ಅವರಿಗೆ ಸಲ್ಲುತ್ತದೆ. ಸಾಂಪ್ರದಾಯಿಕ ನೆಲೆಗಟ್ಟಿನ ನಡುವೆಯೂ ಜನರಲ್ಲಿ ವೈಜ್ಞಾನಿಕ, ವೈಚಾರಿಕ ಪ್ರಜ್ಞೆ ಮೂಡಿಸುವಲ್ಲಿ ಯಶಸ್ವಿಯಾದವರು. ಅದಕ್ಕಾಗಿಯೇ ಅವರನ್ನು ವಿಶ್ವಮಾನವ ಎಂದು ಕರೆಯಲಾಗುತ್ತಿದೆ’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ, ತೋಟಪ್ಪ ಉತ್ತಂಗಿ, ಕೆಪಿಎಂ ಗಣೇಶಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>