ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ‘ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ‘ನಿಜವಾದ ಆದರ್ಶ ಪುರುಷ ಯಾರಾಗಬೇಕು? ಎಂಬ ತಲೆಬರಹದಲ್ಲಿ ಹೆಡಗೇವಾರ್ ಭಾಷಣ ಪಠ್ಯವಾಗಿ ಸೇರಿಸಿದೆ. ಇದು ಶಿಕ್ಷಣದ ಕೇಸರೀಕರಣದ ಮುಂದುವರಿದ ಭಾಗವಾಗಿದೆ. ಇದನ್ನು ಕೂಡಲೇ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.