<p><strong>ಚಿತ್ರದುರ್ಗ</strong>: ರಾಜ್ಯದಲ್ಲಿ ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ, ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳು ನಡೆಯುತ್ತಿದ್ದರೂ ಸರ್ಕಾರ ಮಾತ್ರ ಕಠಿಣ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಮುಖಂಡ ಬಾಳೆಕಾಯಿ ಶ್ರೀನಿವಾಸ್ ಆರೋಪಿಸಿದರು.</p>.<p>‘ರಾಜ್ಯದ ಪ್ರತಿ ಗ್ರಾಮದಲ್ಲೂ ಅಸ್ಪೃಶ್ಯತೆ ಆಚರಣೆ ಕೊನೆಗೊಂಡಿಲ್ಲ. ಕಾಂಗ್ರೆಸ್ ನಾಯಕರು ತೋರ್ಪಡಿಕೆಗೆ ದಲಿತರ ಪರ ಎಂದು ಹೇಳುತ್ತಿದ್ದಾರೆ. ಆದರೆ ಘಟನೆಗಳು ನಡೆದಾಗ ಮಾತ್ರ ಕ್ರಮ ವಹಿಸುತ್ತಿಲ್ಲ. ಕೂಡಲೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿಸ್ಥರಿಗೆ ಶಿಕ್ಷೆ ವಿಧಿಸಬೇಕು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. </p>.<p>‘ಶಾಸಕ ಮುನಿರತ್ನ ಅವರನ್ನು ಬಿಜೆಪಿ ಉಚ್ಛಾಟಿಸಬೇಕು. ಈ ಮೂಲಕ ದಲಿತರ ಪರ ಇದ್ದೇವೆ ಎಂಬ ನಿಲುವು ಪ್ರದರ್ಶಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಬಂದು 18 ತಿಂಗಳಾದರೂ ಸಾಮಾಜಿಕ ನ್ಯಾಯ ಕೊಡುತ್ತಿಲ್ಲ. ಇದೇ ರೀತಿ ಮುಂದುವರೆದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ಗೆ ತಕ್ಕಪಾಠ ಕಲಿಸಲಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಡಿಎಸ್ಎಸ್ ರಾಜ್ಯ ಘಟಕದ ಅಧ್ಯಕ್ಷ ಕುಂಚಿಗನಹಾಳ್ ಮಹಾಲಿಂಗಪ್ಪ, ಮುಖಂಡರಾದ ಕೆ.ರಾಜಣ್ಣ, ಕಸ್ತೂರಪ್ಪ, ಮಲ್ಲಿಕಾರ್ಜುನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ರಾಜ್ಯದಲ್ಲಿ ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ, ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳು ನಡೆಯುತ್ತಿದ್ದರೂ ಸರ್ಕಾರ ಮಾತ್ರ ಕಠಿಣ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಮುಖಂಡ ಬಾಳೆಕಾಯಿ ಶ್ರೀನಿವಾಸ್ ಆರೋಪಿಸಿದರು.</p>.<p>‘ರಾಜ್ಯದ ಪ್ರತಿ ಗ್ರಾಮದಲ್ಲೂ ಅಸ್ಪೃಶ್ಯತೆ ಆಚರಣೆ ಕೊನೆಗೊಂಡಿಲ್ಲ. ಕಾಂಗ್ರೆಸ್ ನಾಯಕರು ತೋರ್ಪಡಿಕೆಗೆ ದಲಿತರ ಪರ ಎಂದು ಹೇಳುತ್ತಿದ್ದಾರೆ. ಆದರೆ ಘಟನೆಗಳು ನಡೆದಾಗ ಮಾತ್ರ ಕ್ರಮ ವಹಿಸುತ್ತಿಲ್ಲ. ಕೂಡಲೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿಸ್ಥರಿಗೆ ಶಿಕ್ಷೆ ವಿಧಿಸಬೇಕು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. </p>.<p>‘ಶಾಸಕ ಮುನಿರತ್ನ ಅವರನ್ನು ಬಿಜೆಪಿ ಉಚ್ಛಾಟಿಸಬೇಕು. ಈ ಮೂಲಕ ದಲಿತರ ಪರ ಇದ್ದೇವೆ ಎಂಬ ನಿಲುವು ಪ್ರದರ್ಶಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಬಂದು 18 ತಿಂಗಳಾದರೂ ಸಾಮಾಜಿಕ ನ್ಯಾಯ ಕೊಡುತ್ತಿಲ್ಲ. ಇದೇ ರೀತಿ ಮುಂದುವರೆದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ಗೆ ತಕ್ಕಪಾಠ ಕಲಿಸಲಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಡಿಎಸ್ಎಸ್ ರಾಜ್ಯ ಘಟಕದ ಅಧ್ಯಕ್ಷ ಕುಂಚಿಗನಹಾಳ್ ಮಹಾಲಿಂಗಪ್ಪ, ಮುಖಂಡರಾದ ಕೆ.ರಾಜಣ್ಣ, ಕಸ್ತೂರಪ್ಪ, ಮಲ್ಲಿಕಾರ್ಜುನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>