<p><strong>ಮೊಳಕಾಲ್ಮುರು: </strong>ತಾಲ್ಲೂಕಿನ ತುಮಕೂರ್ಲಹಳ್ಳಿಯಲ್ಲಿ ಈಚೆಗೆ ಕಾಯಕಲ್ಪ ಮಾಡಿದ್ದ ಹಳೆ ಕೆರೆಯು ಈಚೆಗೆ ಬಿದ್ದ ಮಳೆಗೆ ಭರ್ತಿಯಾಗಿದೆ.</p>.<p>ನೂರಾರು ವರ್ಷಗಳ ಐತಿಹ್ಯ ಹೊಂದಿರುವ ಈ ಕೆರೆ ಗ್ರಾಮದ ಕುಡಿಯುವ ನೀರಿನ ಮೂಲ. ಹೂಳು ತುಂಬಿಕೊಂಡಿದ್ದ ಈ ಕೆರೆಯನ್ನು ಕಳೆದ ವರ್ಷ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ‘ನಮ್ಮ ಗ್ರಾಮನಮ್ಮಕೆರೆ’ ಯೋಜನೆಯಲ್ಲಿ ಅಭಿವೃದ್ಧಿ ಪಡಿಸಿತ್ತು ಎಂದು ಗ್ರಾಮಸ್ಥರು ಮಾಹಿತಿ ನೀಡಿದರು.</p>.<p>ಧರ್ಮಸ್ಥಳ ಸಂಸ್ಥೆ ಯೋಜನೆಗೆ ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಗ್ರಾಮಸ್ಥರು ಕೈ ಜೋಡಿಸಿದರು. ಧರ್ಮಸ್ಥಳ ಸಂಸ್ಥೆಯು ₹ 14.24 ಲಕ್ಷ ದೇಣಿಗೆ ನೀಡಿದೆ. ಈ ಕಾರ್ಯದಲ್ಲಿ ಕೆರೆ ಹೂಳೆತ್ತುವುದು, ಕೆರೆ ಅಂಚು ರಕ್ಷಣೆ ಕಾರ್ಯ, ಸೋಲಾರ್ ದೀಪಅಳವಡಿಕೆ ಮಾಡಲಾಗಿದೆ ಎಂದು ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜಣ್ಣ ಮಾಹಿತಿ ನೀಡಿದರು.</p>.<p>37 ದಿನಗಳ ಕಾಲ ನಡೆದ ಅಭಿವೃದ್ಧಿಯಲ್ಲಿ ಗ್ರಾಮಸ್ಥರು 6 ಸಾವಿರ ಲೋಡ್, ಧರ್ಮಸ್ಥಳ ಸಂಸ್ಥೆಯು 9 ಸಾವಿರ ಲೋಡ್ನಷ್ಟು ಹೂಳು ಎತ್ತಿದ್ದಾರೆ. ಒಟ್ಟು24.16 ಎಕರೆ ವಿಸ್ತೀರ್ಣವಿರುವ ಕೆರೆಯಲ್ಲಿ 10 ಎಕರೆಯಲ್ಲಿ ಹೂಳು ಎತ್ತಲಾಗಿದೆ. ಇದಕ್ಕೆ ಕೆರೆ ಸಮಿತಿ ಗೌರವಾಧ್ಯಕ್ಷ ಎಚ್ ಎಎಲ್ ನಿವೃತ್ತ ಅಧಿಕಾರಿ ಟಿ.ಜಿ.ಪಾಪಯ್ಯ ಮತ್ತು ಸದಸ್ಯರ ಸಹಕಾರ ಸ್ಮರಣೀಯ. ಈಚೆಗೆ ಬಿದ್ದಿರುವ ಮಳೆಯಿಂದಾಗಿ ಕೆರೆ ಪೂರ್ಣ ತುಂಬಿಕೊಂಡಿದೆ. ಇಲ್ಲಿ ಗ್ರಾಮ ಪಂಚಾಯಿತಿ ಕುಡಿಯುವ ನೀರಿನ ಕೊಳವೆಬಾವಿ ಕೊರೆಸಿದ್ದು ಕುಡಿಯುವ ನೀರಿನ ಸಮಸ್ಯೆ ನೀಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು: </strong>ತಾಲ್ಲೂಕಿನ ತುಮಕೂರ್ಲಹಳ್ಳಿಯಲ್ಲಿ ಈಚೆಗೆ ಕಾಯಕಲ್ಪ ಮಾಡಿದ್ದ ಹಳೆ ಕೆರೆಯು ಈಚೆಗೆ ಬಿದ್ದ ಮಳೆಗೆ ಭರ್ತಿಯಾಗಿದೆ.</p>.<p>ನೂರಾರು ವರ್ಷಗಳ ಐತಿಹ್ಯ ಹೊಂದಿರುವ ಈ ಕೆರೆ ಗ್ರಾಮದ ಕುಡಿಯುವ ನೀರಿನ ಮೂಲ. ಹೂಳು ತುಂಬಿಕೊಂಡಿದ್ದ ಈ ಕೆರೆಯನ್ನು ಕಳೆದ ವರ್ಷ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ‘ನಮ್ಮ ಗ್ರಾಮನಮ್ಮಕೆರೆ’ ಯೋಜನೆಯಲ್ಲಿ ಅಭಿವೃದ್ಧಿ ಪಡಿಸಿತ್ತು ಎಂದು ಗ್ರಾಮಸ್ಥರು ಮಾಹಿತಿ ನೀಡಿದರು.</p>.<p>ಧರ್ಮಸ್ಥಳ ಸಂಸ್ಥೆ ಯೋಜನೆಗೆ ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಗ್ರಾಮಸ್ಥರು ಕೈ ಜೋಡಿಸಿದರು. ಧರ್ಮಸ್ಥಳ ಸಂಸ್ಥೆಯು ₹ 14.24 ಲಕ್ಷ ದೇಣಿಗೆ ನೀಡಿದೆ. ಈ ಕಾರ್ಯದಲ್ಲಿ ಕೆರೆ ಹೂಳೆತ್ತುವುದು, ಕೆರೆ ಅಂಚು ರಕ್ಷಣೆ ಕಾರ್ಯ, ಸೋಲಾರ್ ದೀಪಅಳವಡಿಕೆ ಮಾಡಲಾಗಿದೆ ಎಂದು ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜಣ್ಣ ಮಾಹಿತಿ ನೀಡಿದರು.</p>.<p>37 ದಿನಗಳ ಕಾಲ ನಡೆದ ಅಭಿವೃದ್ಧಿಯಲ್ಲಿ ಗ್ರಾಮಸ್ಥರು 6 ಸಾವಿರ ಲೋಡ್, ಧರ್ಮಸ್ಥಳ ಸಂಸ್ಥೆಯು 9 ಸಾವಿರ ಲೋಡ್ನಷ್ಟು ಹೂಳು ಎತ್ತಿದ್ದಾರೆ. ಒಟ್ಟು24.16 ಎಕರೆ ವಿಸ್ತೀರ್ಣವಿರುವ ಕೆರೆಯಲ್ಲಿ 10 ಎಕರೆಯಲ್ಲಿ ಹೂಳು ಎತ್ತಲಾಗಿದೆ. ಇದಕ್ಕೆ ಕೆರೆ ಸಮಿತಿ ಗೌರವಾಧ್ಯಕ್ಷ ಎಚ್ ಎಎಲ್ ನಿವೃತ್ತ ಅಧಿಕಾರಿ ಟಿ.ಜಿ.ಪಾಪಯ್ಯ ಮತ್ತು ಸದಸ್ಯರ ಸಹಕಾರ ಸ್ಮರಣೀಯ. ಈಚೆಗೆ ಬಿದ್ದಿರುವ ಮಳೆಯಿಂದಾಗಿ ಕೆರೆ ಪೂರ್ಣ ತುಂಬಿಕೊಂಡಿದೆ. ಇಲ್ಲಿ ಗ್ರಾಮ ಪಂಚಾಯಿತಿ ಕುಡಿಯುವ ನೀರಿನ ಕೊಳವೆಬಾವಿ ಕೊರೆಸಿದ್ದು ಕುಡಿಯುವ ನೀರಿನ ಸಮಸ್ಯೆ ನೀಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>