<p><strong>ಚಿತ್ರದುರ್ಗ:</strong> 1857ರ ಸಿಪಾಯಿ ದಂಗೆಗೂ ಮೊದಲೇ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿ ಕಾಡಿ ನಂತರ ಕಲ್ಲಿನಕೋಟೆಯೊಳಗೆ ನೇಣು ಕುಣಿಕೆಗೆ ಕೊರಳೊಡ್ಡಿದ್ದ 7 ಬೇಡ ಹುಡುಗರ ಕತೆಯೇ ‘ದುರ್ಗದ ಬೇಡರ್ದಂಗೆ’ ಐತಿಹಾಸಿಕ ಕಾದಂಬರಿಯ ತಿರುಳು. ಹಿರಿಯ ಸಾಹಿತಿ ಬಿ.ಎಲ್.ವೇಣು ಅವರು ಚಿತ್ರಿಸಿರುವ ಈ ಚಾರಿತ್ರಿಕ ಕಾದಂಬರಿ ಈಗ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಎಂ.ಎ ಪದವಿ ವಿದ್ಯಾರ್ಥಿಗಳಿಗೆ ಪಠ್ಯವಾಗಿ ಆಯ್ಕೆಯಾಗಿದೆ.</p>.<p>ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿದ್ದ ಬೇಡರು ಬ್ರಿಟಿಷ್ ಅಧಿಕಾರಿಗಳ ಮೇಲೆ ದಾಳಿ ಮಾಡುತ್ತಿದ್ದರು. ದೊಡ್ಡೇರಿ ಗೌಡರು, ಕಾಡಂಚಿನ ಗ್ರಾಮಸ್ಥರು ಅವರಿಗೆ ಸಹಾಯ ಮಾಡುತ್ತಿದ್ದರು. ಬೇಡರು ಕಾಡಿನಿಂದ ಕಾಡಿಗೆ ಸ್ಥಳ ಬದಲಾವಣೆ ಮಾಡುತ್ತಿದ್ದರು. ಕಡೆಗೆ ಹೊಳಲ್ಕೆರೆ ತಾಲ್ಲೂಕು ರಾಮಗಿರಿ ಅರಣ್ಯದಲ್ಲಿ 7 ಮಂದಿ ಬೇಡ ಹುಡುಗರು ಬ್ರಿಟಿಷ್ ಸೈನ್ಯಕ್ಕೆ ಸೆರೆ ಸಿಕ್ಕಿದ್ದರು. ಬ್ರಿಟಿಷರು ಏಕನಾಥೇಶ್ವರಿ ದೇವಾಲಯದ ಎದುರು ಸಾರ್ವಜನಿಕರ ಎದುರಿನಲ್ಲಿ ನೇಣುಗಂಬಕ್ಕೇರಿಸಿದರು ಎಂಬ ವಿಷಯ ಕುತೂಹಲ ಮೂಡಿಸುತ್ತದೆ.</p>.<p>1849ರಲ್ಲಿ ಈ ಘಟನೆ ನಡೆದಿದ್ದರೂ ಇತಿಹಾಸದ ಪುಟಗಳಲ್ಲಿ ದಾಖಲಾಗಿಲ್ಲ. ಸಿಪಾಯಿ ದಂಗೆಯೇ ಮೊದಲ ಸ್ವಾತಂತ್ರ್ಯ ಸಂಗ್ರಾಮ ಎಂದು ಬಿಂಬಿತವಾಗಿದೆ. ಅದಕ್ಕೂ ಮೊದಲೇ ನಡೆದ ಬೇಡರ ದಂಗೆಯ ಚಿತ್ರಣವನ್ನು ಈ ಕಾದಂಬರಿ ಕಟ್ಟಿಕೊಡುತ್ತದೆ. ಬೇಡರ ತ್ಯಾಗವನ್ನು ಕೇಳಿ ಪ್ರೇರಣೆಗೊಂಡ ಸಾಹಿತಿ ಬಿ.ಎಲ್.ವೇಣು ಅವರು 2023ರಲ್ಲಿ ಈ ಕಾದಂಬರಿ ರಚಿಸಿದರು. ಅದರಲ್ಲಿ ಚಿತ್ರದುರ್ಗದ ಬೇಡರ ಇತಿಹಾಸ, ಹೋರಾಟವನ್ನು ದಾಖಲಿಸಿದ್ದಾರೆ. ಈಗ ಕಾದಂಬರಿ ಪಠ್ಯ ರೂಪ ಪಡೆದಿದೆ. ಈಗಾಗಲೇ ವೇಣು ಅವರ ‘ನಾಳೆಗಳಿಲ್ಲದವರು’, ‘ಸುಡುಗಾಡು ಸಿದ್ದನ ಪ್ರಸಂಗ’ ಕೃತಿಗಳು ಪಠ್ಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> 1857ರ ಸಿಪಾಯಿ ದಂಗೆಗೂ ಮೊದಲೇ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿ ಕಾಡಿ ನಂತರ ಕಲ್ಲಿನಕೋಟೆಯೊಳಗೆ ನೇಣು ಕುಣಿಕೆಗೆ ಕೊರಳೊಡ್ಡಿದ್ದ 7 ಬೇಡ ಹುಡುಗರ ಕತೆಯೇ ‘ದುರ್ಗದ ಬೇಡರ್ದಂಗೆ’ ಐತಿಹಾಸಿಕ ಕಾದಂಬರಿಯ ತಿರುಳು. ಹಿರಿಯ ಸಾಹಿತಿ ಬಿ.ಎಲ್.ವೇಣು ಅವರು ಚಿತ್ರಿಸಿರುವ ಈ ಚಾರಿತ್ರಿಕ ಕಾದಂಬರಿ ಈಗ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಎಂ.ಎ ಪದವಿ ವಿದ್ಯಾರ್ಥಿಗಳಿಗೆ ಪಠ್ಯವಾಗಿ ಆಯ್ಕೆಯಾಗಿದೆ.</p>.<p>ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿದ್ದ ಬೇಡರು ಬ್ರಿಟಿಷ್ ಅಧಿಕಾರಿಗಳ ಮೇಲೆ ದಾಳಿ ಮಾಡುತ್ತಿದ್ದರು. ದೊಡ್ಡೇರಿ ಗೌಡರು, ಕಾಡಂಚಿನ ಗ್ರಾಮಸ್ಥರು ಅವರಿಗೆ ಸಹಾಯ ಮಾಡುತ್ತಿದ್ದರು. ಬೇಡರು ಕಾಡಿನಿಂದ ಕಾಡಿಗೆ ಸ್ಥಳ ಬದಲಾವಣೆ ಮಾಡುತ್ತಿದ್ದರು. ಕಡೆಗೆ ಹೊಳಲ್ಕೆರೆ ತಾಲ್ಲೂಕು ರಾಮಗಿರಿ ಅರಣ್ಯದಲ್ಲಿ 7 ಮಂದಿ ಬೇಡ ಹುಡುಗರು ಬ್ರಿಟಿಷ್ ಸೈನ್ಯಕ್ಕೆ ಸೆರೆ ಸಿಕ್ಕಿದ್ದರು. ಬ್ರಿಟಿಷರು ಏಕನಾಥೇಶ್ವರಿ ದೇವಾಲಯದ ಎದುರು ಸಾರ್ವಜನಿಕರ ಎದುರಿನಲ್ಲಿ ನೇಣುಗಂಬಕ್ಕೇರಿಸಿದರು ಎಂಬ ವಿಷಯ ಕುತೂಹಲ ಮೂಡಿಸುತ್ತದೆ.</p>.<p>1849ರಲ್ಲಿ ಈ ಘಟನೆ ನಡೆದಿದ್ದರೂ ಇತಿಹಾಸದ ಪುಟಗಳಲ್ಲಿ ದಾಖಲಾಗಿಲ್ಲ. ಸಿಪಾಯಿ ದಂಗೆಯೇ ಮೊದಲ ಸ್ವಾತಂತ್ರ್ಯ ಸಂಗ್ರಾಮ ಎಂದು ಬಿಂಬಿತವಾಗಿದೆ. ಅದಕ್ಕೂ ಮೊದಲೇ ನಡೆದ ಬೇಡರ ದಂಗೆಯ ಚಿತ್ರಣವನ್ನು ಈ ಕಾದಂಬರಿ ಕಟ್ಟಿಕೊಡುತ್ತದೆ. ಬೇಡರ ತ್ಯಾಗವನ್ನು ಕೇಳಿ ಪ್ರೇರಣೆಗೊಂಡ ಸಾಹಿತಿ ಬಿ.ಎಲ್.ವೇಣು ಅವರು 2023ರಲ್ಲಿ ಈ ಕಾದಂಬರಿ ರಚಿಸಿದರು. ಅದರಲ್ಲಿ ಚಿತ್ರದುರ್ಗದ ಬೇಡರ ಇತಿಹಾಸ, ಹೋರಾಟವನ್ನು ದಾಖಲಿಸಿದ್ದಾರೆ. ಈಗ ಕಾದಂಬರಿ ಪಠ್ಯ ರೂಪ ಪಡೆದಿದೆ. ಈಗಾಗಲೇ ವೇಣು ಅವರ ‘ನಾಳೆಗಳಿಲ್ಲದವರು’, ‘ಸುಡುಗಾಡು ಸಿದ್ದನ ಪ್ರಸಂಗ’ ಕೃತಿಗಳು ಪಠ್ಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>