<p><strong>ಚಿತ್ರದುರ್ಗ:</strong> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಡಿಸಿಆರ್ಬಿ ವಿಭಾಗದ ಡಿವೈಎಸ್ಪಿ ಎನ್.ರಮೇಶ್ (50) ಮಂಗಳವಾರ ತೀವ್ರ ಹೃದಯಾಘಾತದಿಂದ ನಿಧನರಾದರು.</p>.<p>ಇವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಕೋಲಾರ ಜಿಲ್ಲೆ ಮಾಲೂರಿನಲ್ಲಿ ಬುಧವಾರ ಅಂತ್ಯಕ್ರಿಯೆ ನೆರವೇರಲಿದೆ.</p>.<p>ಬೆಳಗಿನ ವಾಯುವಿಹಾರ ಮುಗಿಸಿ ವಸತಿಗೃಹಕ್ಕೆ ಮರಳಿದಾಗ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದೆ. ತೀವ್ರ ಹೃದಯಾಘತವಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೇ ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೂಲತಃ ಕೋಲಾರ ಜಿಲ್ಲೆ ಮಾಲೂರಿನ ರಮೇಶ್ ಅವರು ಹಿರಿಯೂರು ಉಪವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಚಿತ್ರದುರ್ಗ ಡಿಸಿಆರ್ಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕುಟುಂಬ ಬೆಂಗಳೂರಿನಲ್ಲಿ ನಡೆಸಿದ್ದು, ದೀಪಾವಳಿ ಹಬ್ಬಕ್ಕೆ ಚಿತ್ರದುರ್ಗಕ್ಕೆ ಬಂದಿದ್ದರು.</p>.<p>ಮರಣೋತ್ತರ ಪರೀಕ್ಷೆಯ ಬಳಿಕ ಪಾರ್ಥಿವ ಶರೀರವನ್ನು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಮೈದಾನಕ್ಕೆ ತರಲಾಯಿತು. ಸರ್ಕಾರ ಗೌರವ ಸಲ್ಲಿಸಿ ಪಾರ್ಥಿವ ಶರೀರವನ್ನು ಕೋಲಾರಕ್ಕೆ ಕಳುಹಿಸಲಾಯಿತು. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ನಿಧನಕ್ಕೆ ನಿಖರ ಕಾರಣ ತಿಳಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಡಿಸಿಆರ್ಬಿ ವಿಭಾಗದ ಡಿವೈಎಸ್ಪಿ ಎನ್.ರಮೇಶ್ (50) ಮಂಗಳವಾರ ತೀವ್ರ ಹೃದಯಾಘಾತದಿಂದ ನಿಧನರಾದರು.</p>.<p>ಇವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಕೋಲಾರ ಜಿಲ್ಲೆ ಮಾಲೂರಿನಲ್ಲಿ ಬುಧವಾರ ಅಂತ್ಯಕ್ರಿಯೆ ನೆರವೇರಲಿದೆ.</p>.<p>ಬೆಳಗಿನ ವಾಯುವಿಹಾರ ಮುಗಿಸಿ ವಸತಿಗೃಹಕ್ಕೆ ಮರಳಿದಾಗ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದೆ. ತೀವ್ರ ಹೃದಯಾಘತವಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೇ ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೂಲತಃ ಕೋಲಾರ ಜಿಲ್ಲೆ ಮಾಲೂರಿನ ರಮೇಶ್ ಅವರು ಹಿರಿಯೂರು ಉಪವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಚಿತ್ರದುರ್ಗ ಡಿಸಿಆರ್ಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕುಟುಂಬ ಬೆಂಗಳೂರಿನಲ್ಲಿ ನಡೆಸಿದ್ದು, ದೀಪಾವಳಿ ಹಬ್ಬಕ್ಕೆ ಚಿತ್ರದುರ್ಗಕ್ಕೆ ಬಂದಿದ್ದರು.</p>.<p>ಮರಣೋತ್ತರ ಪರೀಕ್ಷೆಯ ಬಳಿಕ ಪಾರ್ಥಿವ ಶರೀರವನ್ನು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಮೈದಾನಕ್ಕೆ ತರಲಾಯಿತು. ಸರ್ಕಾರ ಗೌರವ ಸಲ್ಲಿಸಿ ಪಾರ್ಥಿವ ಶರೀರವನ್ನು ಕೋಲಾರಕ್ಕೆ ಕಳುಹಿಸಲಾಯಿತು. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ನಿಧನಕ್ಕೆ ನಿಖರ ಕಾರಣ ತಿಳಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>