<p><strong>ಹಿರಿಯೂರು:</strong> ಸಮಾಜದಲ್ಲಿ ಸಮಾನತೆ ತರಲು ಶಿಕ್ಷಣವೇ ಸೂಕ್ತ ಮಾರ್ಗ ಎಂದು ಸಹಾಯಕ ಕಾನೂನು ನೆರವು ಅಭಿರಕ್ಷಕಿ ಕೆ.ಆರ್. ಸೋಮ ಹೇಳಿದರು.</p>.<p>ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬುಧವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅಭಿಯೋಜನಾ ಇಲಾಖೆ ನೇತೃತ್ವದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಕಾನೂನು ಅರಿವು–ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಸಂವಿಧಾನ ಅಕ್ಷಯ ಪಾತ್ರೆ ಇದ್ದಂತೆ. ನಮಗೆ ಬೇಕಿರುವ ಸೌಲಭ್ಯಗಳನ್ನು ಪರಿಶ್ರಮದ ಮೂಲಕ ನಾವೇ ಪಡೆದುಕೊಳ್ಳಬೇಕು. ಉನ್ನತ ಶಿಕ್ಷಣದಿಂದ ಸಮಾನತೆ ತರಲು ಸಾಧ್ಯವಿದೆ. ಹಾಗಾಗಿ ಯುವ ಪೀಳಿಗೆ ತಾವು ಅಂದುಕೊಂಡ ಗುರಿ ತಲುಪಲು ಶಿಕ್ಷಣವನ್ನು ಮೆಟ್ಟಿಲಾಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪೋಷಕರು ತಮ್ಮ ಮಕ್ಕಳನ್ನು ಸರಿಯಾದ ಹಾದಿಯಲ್ಲಿ ಸಾಗುವ ರೀತಿ ನೋಡಿಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಮಹಮ್ಮದ್ ಜಬೀವುಲ್ಲಾ ತಿಳಿಸಿದರು.</p>.<p>ವಕೀಲರ ಸಂಘದ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಬಿ. ವೆಂಕಟೇಶ ಶಿಲ್ಪಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಜಂಟಿ ಕಾರ್ಯದರ್ಶಿ ಎಚ್.ವಿ. ಅಜಯ್, ಖಜಾಂಚಿ ಎಚ್. ಲಕ್ಷ್ಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ಸಮಾಜದಲ್ಲಿ ಸಮಾನತೆ ತರಲು ಶಿಕ್ಷಣವೇ ಸೂಕ್ತ ಮಾರ್ಗ ಎಂದು ಸಹಾಯಕ ಕಾನೂನು ನೆರವು ಅಭಿರಕ್ಷಕಿ ಕೆ.ಆರ್. ಸೋಮ ಹೇಳಿದರು.</p>.<p>ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬುಧವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅಭಿಯೋಜನಾ ಇಲಾಖೆ ನೇತೃತ್ವದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಕಾನೂನು ಅರಿವು–ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಸಂವಿಧಾನ ಅಕ್ಷಯ ಪಾತ್ರೆ ಇದ್ದಂತೆ. ನಮಗೆ ಬೇಕಿರುವ ಸೌಲಭ್ಯಗಳನ್ನು ಪರಿಶ್ರಮದ ಮೂಲಕ ನಾವೇ ಪಡೆದುಕೊಳ್ಳಬೇಕು. ಉನ್ನತ ಶಿಕ್ಷಣದಿಂದ ಸಮಾನತೆ ತರಲು ಸಾಧ್ಯವಿದೆ. ಹಾಗಾಗಿ ಯುವ ಪೀಳಿಗೆ ತಾವು ಅಂದುಕೊಂಡ ಗುರಿ ತಲುಪಲು ಶಿಕ್ಷಣವನ್ನು ಮೆಟ್ಟಿಲಾಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪೋಷಕರು ತಮ್ಮ ಮಕ್ಕಳನ್ನು ಸರಿಯಾದ ಹಾದಿಯಲ್ಲಿ ಸಾಗುವ ರೀತಿ ನೋಡಿಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಮಹಮ್ಮದ್ ಜಬೀವುಲ್ಲಾ ತಿಳಿಸಿದರು.</p>.<p>ವಕೀಲರ ಸಂಘದ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಬಿ. ವೆಂಕಟೇಶ ಶಿಲ್ಪಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಜಂಟಿ ಕಾರ್ಯದರ್ಶಿ ಎಚ್.ವಿ. ಅಜಯ್, ಖಜಾಂಚಿ ಎಚ್. ಲಕ್ಷ್ಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>