<p>ಚಿತ್ರದುರ್ಗ: ರಂಜಾನ್ ಮಾಸದ ಕೊನೆಯ ದಿನವಾದ ಮಂಗಳವಾರ ಮುಸ್ಲಿಮರು ಈದ್ ಉಲ್ ಫಿತ್ರ್ ಹಬ್ಬವನ್ನು ಜಿಲ್ಲಾದ್ಯಂತ ಸಡಗರ–ಸಂಭ್ರಮದಿಂದ ಆಚರಿಸಿದರು. ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಉಪವಾಸವನ್ನು ಅಂತ್ಯಗೊಳಿಸಿದರು.</p>.<p>ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಸರಳವಾಗಿ ಹಬ್ಬವನ್ನು ಆಚರಿಸಲಾಗಿತ್ತು. ಸೋಂಕು ಇಳಿಮುಖವಾಗಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರುಕಳಿಸಿದ್ದರಿಂದ ಹಬ್ಬದ ಸಂಭ್ರಮ ಜೋರಾಗಿತ್ತು.</p>.<p>ಒಂದು ತಿಂಗಳು ಕಠಿಣ ಉಪವಾಸ ಆಚರಿಸಿದ್ದ ಮುಸ್ಲಿಮರಿಗೆ ಸೋಮವಾರ ಸಂಜೆ ಚಂದ್ರ ದರ್ಶನವಾಗಿತ್ತು. ಶಾಂತಿ–ಸಹನೆ ಹಾಗೂ ಹಸಿವಿನ ಮಹತ್ವ ಸಾರುವ ಹಬ್ಬವು ನಗರದ ಮುಸ್ಲಿಂ ಬಡಾವಣೆಗಳಲ್ಲಿ ಸಂಭ್ರಮದ ವಾತಾವರಣ ಕಂಡು ಬಂದಿತು.</p>.<p>ಮಂಗಳವಾರ ಬೆಳಿಗ್ಗೆ ಮನೆಗಳಲ್ಲಿ ಹಬ್ಬದ ಸಿದ್ಧತೆ ನಡೆಸಿದರು. ಶುಭ್ರ ಬಿಳಿ ಬಟ್ಟೆ ಧರಿಸಿ, ಸುಗಂಧ ದ್ರವ್ಯದ ಪರಿಮಳವನ್ನು ಪುರುಷರು ಪಸರಿಸಿದರು. ಬಳಿಕ ಪ್ರಾರ್ಥನೆ ಸಲ್ಲಿಸಲು ಅಗತ್ಯವಿರುವ ಚಾಪೆ, ಚಾದಾರವನ್ನು ಕೈಯಲ್ಲಿ ಹಿಡಿದು ಈದ್ಗಾ ಮೈದಾನದತ್ತ ಹೆಜ್ಜೆ ಹಾಕಿದರು. ಬೆಳಿಗ್ಗೆ 9 ಗಂಟೆಯಿಂದಲೇ ಈದ್ಗಾ ಮೈದಾನಕ್ಕೆ ಧಾವಿಸುವವರ ಸಂಖ್ಯೆ ಹೆಚ್ಚಾಗಿತ್ತು. ಸೂಕ್ತ ಸ್ಥಳ ಆಯ್ಕೆ ಮಾಡಿಕೊಂಡು ಪ್ರಾರ್ಥನೆ ಸಲ್ಲಿಸಿದರು.</p>.<p>ಸಾಮೂಹಿಕ ಪ್ರಾರ್ಥನೆ ಸ್ಥಳಗಳಲ್ಲಿ ಯಾವುದೇ ಸಮಸ್ಯೆ ಆಗದಂತೆ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ಮೈದಾನಕ್ಕೆ ಸಾಗಲು ತೊಂದರೆಯಾಗದಂತೆ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಜತೆಗೆ ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿತ್ತು.</p>.<p>ಚಂದ್ರವಳ್ಳಿ, ಅಗಸನಕಲ್ಲು, ಚೇಳುಗುಡ್ಡ, ಎಪಿಎಂಸಿಯ ಈದ್ಗಾ ಮೈದಾನ ಹಾಗೂ ಮಸೀದಿಗಳಲ್ಲಿ ಧರ್ಮ ಗುರುಗಳು ಕುರಾನ್ ಪಠಿಸಿ, ಸಂದೇಶ ಬೋಧಿಸಿದರು. ಮೈದಾನದಲ್ಲಿ ಸಾವಿರಾರು ಮಂದಿ ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸಿದ್ದು ವಿಶೇಷವಾಗಿತ್ತು. ಬಳಿಕ ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.</p>.<p>ಮೈದಾನದ ಹೊರಭಾಗದಲ್ಲಿ ಕುಳಿತಿದ್ದ ಬಡವರು, ನಿರ್ಗತಿಕರಿಗೆ ಕೈಲಾದಷ್ಟು ಆರ್ಥಿಕ ನೆರವು ನೀಡಿದರು. ಮಕ್ಕಳ ಕೈಯಿಂದ ಹಣ ಕೊಡಿಸಿ ಧನ್ಯತೆ ಮೆರೆದರು. ಮಾಜಿ ಶಾಸಕ ಎಸ್.ಕೆ. ಬಸವರಾಜನ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಾಂಗ್ರೆಸ್ ಮುಖಂಡ ಎಚ್.ಎ. ಷಣ್ಮುಖಪ್ಪ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ರಂಜಾನ್ ಮಾಸದ ಕೊನೆಯ ದಿನವಾದ ಮಂಗಳವಾರ ಮುಸ್ಲಿಮರು ಈದ್ ಉಲ್ ಫಿತ್ರ್ ಹಬ್ಬವನ್ನು ಜಿಲ್ಲಾದ್ಯಂತ ಸಡಗರ–ಸಂಭ್ರಮದಿಂದ ಆಚರಿಸಿದರು. ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಉಪವಾಸವನ್ನು ಅಂತ್ಯಗೊಳಿಸಿದರು.</p>.<p>ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಸರಳವಾಗಿ ಹಬ್ಬವನ್ನು ಆಚರಿಸಲಾಗಿತ್ತು. ಸೋಂಕು ಇಳಿಮುಖವಾಗಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರುಕಳಿಸಿದ್ದರಿಂದ ಹಬ್ಬದ ಸಂಭ್ರಮ ಜೋರಾಗಿತ್ತು.</p>.<p>ಒಂದು ತಿಂಗಳು ಕಠಿಣ ಉಪವಾಸ ಆಚರಿಸಿದ್ದ ಮುಸ್ಲಿಮರಿಗೆ ಸೋಮವಾರ ಸಂಜೆ ಚಂದ್ರ ದರ್ಶನವಾಗಿತ್ತು. ಶಾಂತಿ–ಸಹನೆ ಹಾಗೂ ಹಸಿವಿನ ಮಹತ್ವ ಸಾರುವ ಹಬ್ಬವು ನಗರದ ಮುಸ್ಲಿಂ ಬಡಾವಣೆಗಳಲ್ಲಿ ಸಂಭ್ರಮದ ವಾತಾವರಣ ಕಂಡು ಬಂದಿತು.</p>.<p>ಮಂಗಳವಾರ ಬೆಳಿಗ್ಗೆ ಮನೆಗಳಲ್ಲಿ ಹಬ್ಬದ ಸಿದ್ಧತೆ ನಡೆಸಿದರು. ಶುಭ್ರ ಬಿಳಿ ಬಟ್ಟೆ ಧರಿಸಿ, ಸುಗಂಧ ದ್ರವ್ಯದ ಪರಿಮಳವನ್ನು ಪುರುಷರು ಪಸರಿಸಿದರು. ಬಳಿಕ ಪ್ರಾರ್ಥನೆ ಸಲ್ಲಿಸಲು ಅಗತ್ಯವಿರುವ ಚಾಪೆ, ಚಾದಾರವನ್ನು ಕೈಯಲ್ಲಿ ಹಿಡಿದು ಈದ್ಗಾ ಮೈದಾನದತ್ತ ಹೆಜ್ಜೆ ಹಾಕಿದರು. ಬೆಳಿಗ್ಗೆ 9 ಗಂಟೆಯಿಂದಲೇ ಈದ್ಗಾ ಮೈದಾನಕ್ಕೆ ಧಾವಿಸುವವರ ಸಂಖ್ಯೆ ಹೆಚ್ಚಾಗಿತ್ತು. ಸೂಕ್ತ ಸ್ಥಳ ಆಯ್ಕೆ ಮಾಡಿಕೊಂಡು ಪ್ರಾರ್ಥನೆ ಸಲ್ಲಿಸಿದರು.</p>.<p>ಸಾಮೂಹಿಕ ಪ್ರಾರ್ಥನೆ ಸ್ಥಳಗಳಲ್ಲಿ ಯಾವುದೇ ಸಮಸ್ಯೆ ಆಗದಂತೆ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ಮೈದಾನಕ್ಕೆ ಸಾಗಲು ತೊಂದರೆಯಾಗದಂತೆ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಜತೆಗೆ ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿತ್ತು.</p>.<p>ಚಂದ್ರವಳ್ಳಿ, ಅಗಸನಕಲ್ಲು, ಚೇಳುಗುಡ್ಡ, ಎಪಿಎಂಸಿಯ ಈದ್ಗಾ ಮೈದಾನ ಹಾಗೂ ಮಸೀದಿಗಳಲ್ಲಿ ಧರ್ಮ ಗುರುಗಳು ಕುರಾನ್ ಪಠಿಸಿ, ಸಂದೇಶ ಬೋಧಿಸಿದರು. ಮೈದಾನದಲ್ಲಿ ಸಾವಿರಾರು ಮಂದಿ ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸಿದ್ದು ವಿಶೇಷವಾಗಿತ್ತು. ಬಳಿಕ ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.</p>.<p>ಮೈದಾನದ ಹೊರಭಾಗದಲ್ಲಿ ಕುಳಿತಿದ್ದ ಬಡವರು, ನಿರ್ಗತಿಕರಿಗೆ ಕೈಲಾದಷ್ಟು ಆರ್ಥಿಕ ನೆರವು ನೀಡಿದರು. ಮಕ್ಕಳ ಕೈಯಿಂದ ಹಣ ಕೊಡಿಸಿ ಧನ್ಯತೆ ಮೆರೆದರು. ಮಾಜಿ ಶಾಸಕ ಎಸ್.ಕೆ. ಬಸವರಾಜನ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಾಂಗ್ರೆಸ್ ಮುಖಂಡ ಎಚ್.ಎ. ಷಣ್ಮುಖಪ್ಪ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>