<p>ಚಿತ್ರದುರ್ಗ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಲ್ಲಿಕೆಯಾಗುವ ಅರ್ಜಿಗಳಲ್ಲಿ ದಾಖಲೆಯ ಕೊರತೆಯಿಂದ ಆನ್ಲೈನ್ ಅರ್ಜಿಗಳು ಹೆಚ್ಚಾಗಿ ತಿರಸ್ಕೃತಗೊಳ್ಳುತ್ತಿವೆ.</p>.<p>ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪರಿಶೀಲನಾ ಸಭೆಯಲ್ಲಿ ಈ ವಿಚಾರ ಬಹಿರಂಗವಾಯಿತು.</p>.<p>‘ಆನ್ಲೈನ್ ಮೂಲಕ ಸಲ್ಲಿಕೆಯಾಗುವ ಅರ್ಜಿಗಳಿಗೆ ಸರಿಯಾದ ದಾಖಲೆ ಇರುವುದಿಲ್ಲ. ಹೀಗಾಗಿ, ಆನ್ಲೈನ್ ಅರ್ಜಿಗಳೇ ಹೆಚ್ಚಾಗಿ ತಿರಸ್ಕೃತಗೊಳ್ಳುತ್ತಿವೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ ಅವರು ಮತದಾರರ ಪಟ್ಟಿ ವೀಕ್ಷಕರಾದ ಡಾ.ಶಮ್ಲಾ ಇಕ್ಬಾಲ್ ಅವರಿಗೆ ವಿವರಣೆ ನೀಡಿದರು.</p>.<p>‘ಮತದಾರರ ಪಟ್ಟಿಗೆ ಪರಿಷ್ಕರಣೆ ಸಂಬಂಧ ಸಲ್ಲಿಕೆಯಾಗುವ ಆನ್ಲೈನ್ ಹಾಗೂ ಆಪ್ಲೈನ್ ಅರ್ಜಿಗಳನ್ನು ತಿರಸ್ಕರಿಸುವುದಕ್ಕೂ ಮುನ್ನ ಸಕಾರಣ ನೀಡಬೇಕು. ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ವಿವರಣೆ ಪಡೆಯಬೇಕು. ಬಳಿಕ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಬೇಕು’ ಎಂದು ತಾಕೀತು ಮಾಡಿದರು.</p>.<p>‘ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ದೂರು ಬಂದಿಲ್ಲ. ಮತದಾರರ ಪಟ್ಟಿ ದೋಷರಹಿತವಾಗಿದ್ದರೆ ಚುನಾವಣೆ ಪಾರದರ್ಶಕವಾಗಿ ನಡೆಯುತ್ತದೆ. ಮತದಾನದ ಸಂದರ್ಭದಲ್ಲಿ ಯಾವುದೇ ದೂರುಗಳು ಬಾರದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಿದೆ’ ಎಂದು ಸೂಚನೆ ನೀಡಿದರು.</p>.<p>‘ಮತದಾರರ ಪಟ್ಟಿಯ ನೋಂದಣಿ ಹಾಗೂ ಮತದಾರರ ಹೆಸರು ಕೈಬಿಡುವ ಮುನ್ನ ಆಲೋಚಿಸಬೇಕು. ಸಂಬಂಧಿಸಿದ ದಾಖಲೆಗಳನ್ನು ಕಲೆಹಾಕಿ ಕ್ರಮ ಕೈಗೊಳ್ಳಬೇಕು. ಪರಿಶೀಲನೆಯ ಸಂದರ್ಭದಲ್ಲಿ ಈ ದಾಖಲೆಗಳು ಲಭ್ಯವಾಗಬೇಕು’ ಎಂದು ಹೇಳಿದರು. ಮತದಾರರ ಪಟ್ಟಿಗೆ ಹೆಸರು ಸೇರಿಸುವಂತೆ ಯುವ ಮತದಾರರು ಸಲ್ಲಿಸುವ ಅರ್ಜಿಗಳ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು.</p>.<p class="Subhead"><strong>ಮತದಾರರ ನೋಂದಣಿ ಕುಸಿತ</strong></p>.<p>ಕೊರೊನಾ ಸೋಂಕು ಕಾಣಿಸಿಕೊಂಡು ಕಾಲೇಜುಗಳು ಹಲವು ತಿಂಗಳು ಮುಚ್ಚಿದ್ದರಿಂದ ಯುವ ಮತದಾರರ ನೋಂದಣಿಯಲ್ಲಿ ಕುಸಿತ ಕಂಡುಬಂದಿದೆ.</p>.<p>‘ನವೆಂಬರ್ನಲ್ಲಿ ಹೊರಡಿಸಿದ ಕರಡು ಮತದಾರ ಪಟ್ಟಿಯಂತೆ ಜಿಲ್ಲೆಯಲ್ಲಿ 13,61,973 ಮತದಾರರಿದ್ದಾರೆ. ಯುವ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಲು ಮಿಂಚಿನ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಭೆಗೆ ಮಾಹಿತಿ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಉಪವಿಭಾಗಾಧಿಕಾರಿ ಎಲ್.ನಾಗರಾಜ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಧುಸೂದನ್, ತಹಶೀಲ್ದಾರ್ ವೆಂಕಟೇಶಯ್ಯ, ಸತ್ಯನಾರಾಯಣ, ಜಿಲ್ಲಾ ಅಂವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಪೌರಾಯುಕ್ತ ಜೆ.ಟಿ.ಹನುಮಂತರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಲ್ಲಿಕೆಯಾಗುವ ಅರ್ಜಿಗಳಲ್ಲಿ ದಾಖಲೆಯ ಕೊರತೆಯಿಂದ ಆನ್ಲೈನ್ ಅರ್ಜಿಗಳು ಹೆಚ್ಚಾಗಿ ತಿರಸ್ಕೃತಗೊಳ್ಳುತ್ತಿವೆ.</p>.<p>ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪರಿಶೀಲನಾ ಸಭೆಯಲ್ಲಿ ಈ ವಿಚಾರ ಬಹಿರಂಗವಾಯಿತು.</p>.<p>‘ಆನ್ಲೈನ್ ಮೂಲಕ ಸಲ್ಲಿಕೆಯಾಗುವ ಅರ್ಜಿಗಳಿಗೆ ಸರಿಯಾದ ದಾಖಲೆ ಇರುವುದಿಲ್ಲ. ಹೀಗಾಗಿ, ಆನ್ಲೈನ್ ಅರ್ಜಿಗಳೇ ಹೆಚ್ಚಾಗಿ ತಿರಸ್ಕೃತಗೊಳ್ಳುತ್ತಿವೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ ಅವರು ಮತದಾರರ ಪಟ್ಟಿ ವೀಕ್ಷಕರಾದ ಡಾ.ಶಮ್ಲಾ ಇಕ್ಬಾಲ್ ಅವರಿಗೆ ವಿವರಣೆ ನೀಡಿದರು.</p>.<p>‘ಮತದಾರರ ಪಟ್ಟಿಗೆ ಪರಿಷ್ಕರಣೆ ಸಂಬಂಧ ಸಲ್ಲಿಕೆಯಾಗುವ ಆನ್ಲೈನ್ ಹಾಗೂ ಆಪ್ಲೈನ್ ಅರ್ಜಿಗಳನ್ನು ತಿರಸ್ಕರಿಸುವುದಕ್ಕೂ ಮುನ್ನ ಸಕಾರಣ ನೀಡಬೇಕು. ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ವಿವರಣೆ ಪಡೆಯಬೇಕು. ಬಳಿಕ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಬೇಕು’ ಎಂದು ತಾಕೀತು ಮಾಡಿದರು.</p>.<p>‘ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ದೂರು ಬಂದಿಲ್ಲ. ಮತದಾರರ ಪಟ್ಟಿ ದೋಷರಹಿತವಾಗಿದ್ದರೆ ಚುನಾವಣೆ ಪಾರದರ್ಶಕವಾಗಿ ನಡೆಯುತ್ತದೆ. ಮತದಾನದ ಸಂದರ್ಭದಲ್ಲಿ ಯಾವುದೇ ದೂರುಗಳು ಬಾರದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಿದೆ’ ಎಂದು ಸೂಚನೆ ನೀಡಿದರು.</p>.<p>‘ಮತದಾರರ ಪಟ್ಟಿಯ ನೋಂದಣಿ ಹಾಗೂ ಮತದಾರರ ಹೆಸರು ಕೈಬಿಡುವ ಮುನ್ನ ಆಲೋಚಿಸಬೇಕು. ಸಂಬಂಧಿಸಿದ ದಾಖಲೆಗಳನ್ನು ಕಲೆಹಾಕಿ ಕ್ರಮ ಕೈಗೊಳ್ಳಬೇಕು. ಪರಿಶೀಲನೆಯ ಸಂದರ್ಭದಲ್ಲಿ ಈ ದಾಖಲೆಗಳು ಲಭ್ಯವಾಗಬೇಕು’ ಎಂದು ಹೇಳಿದರು. ಮತದಾರರ ಪಟ್ಟಿಗೆ ಹೆಸರು ಸೇರಿಸುವಂತೆ ಯುವ ಮತದಾರರು ಸಲ್ಲಿಸುವ ಅರ್ಜಿಗಳ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು.</p>.<p class="Subhead"><strong>ಮತದಾರರ ನೋಂದಣಿ ಕುಸಿತ</strong></p>.<p>ಕೊರೊನಾ ಸೋಂಕು ಕಾಣಿಸಿಕೊಂಡು ಕಾಲೇಜುಗಳು ಹಲವು ತಿಂಗಳು ಮುಚ್ಚಿದ್ದರಿಂದ ಯುವ ಮತದಾರರ ನೋಂದಣಿಯಲ್ಲಿ ಕುಸಿತ ಕಂಡುಬಂದಿದೆ.</p>.<p>‘ನವೆಂಬರ್ನಲ್ಲಿ ಹೊರಡಿಸಿದ ಕರಡು ಮತದಾರ ಪಟ್ಟಿಯಂತೆ ಜಿಲ್ಲೆಯಲ್ಲಿ 13,61,973 ಮತದಾರರಿದ್ದಾರೆ. ಯುವ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಲು ಮಿಂಚಿನ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಭೆಗೆ ಮಾಹಿತಿ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಉಪವಿಭಾಗಾಧಿಕಾರಿ ಎಲ್.ನಾಗರಾಜ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಧುಸೂದನ್, ತಹಶೀಲ್ದಾರ್ ವೆಂಕಟೇಶಯ್ಯ, ಸತ್ಯನಾರಾಯಣ, ಜಿಲ್ಲಾ ಅಂವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಪೌರಾಯುಕ್ತ ಜೆ.ಟಿ.ಹನುಮಂತರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>