‘ಗುಬ್ಬಚ್ಚಿಗಳು ದೂರವಾದರೆ ಜನರ ಜೀವನ ಕಷ್ಟದಲ್ಲಿದೆ ಎಂದರ್ಥ. ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪ್ರಾಣಿ, ಪಕ್ಷಿ ಸಂಕುಲದ ರಕ್ಷಣೆಗಾಗಿ ಸಾಧ್ಯವಾದಷ್ಟು ಕೆಲಸ ಮಾಡಿದ್ದೇವೆ. ಪ್ರತಿ ವರ್ಷ ಬೇಸಿಗೆ ಆರಂಭದಲ್ಲಿ ವಿಶ್ವ ಗುಬ್ಬಚ್ಚಿ ದಿನದಂದು ಮಣ್ಣಿನ ತಟ್ಟೆ ಹಾಗೂ ನೀರು ಇರಿಸುವ ಬಾಟಲ್ಗಳನ್ನು ಉಚಿತವಾಗಿ ನೀಡುತ್ತೇವೆ. ಕಳೆದ ಎರಡು ವರ್ಷಗಳಿಂದ 150 ಜನರಿಗೆ ಈ ಪರಿಕರಗಳನ್ನು ನೀಡಲಾಗಿದೆ. ಪಕ್ಷಿಗಳಿಗೆ ಆಹಾರ ಧಾನ್ಯ ನೀಡುವ ವಿಧಾನದ ಬಗ್ಗೆಯೂ ಮಾಹಿತಿ ನೀಡಿದ್ದೇವೆ’ ಎನ್ನುತ್ತಾರೆ ಟ್ರಸ್ಟ್ ಸದಸ್ಯ ಭಾರ್ಗವ್ ಆರ್.