<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ಮೊಗಲಹಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿರುವ ಈಶ್ವರಸ್ವಾಮಿ ದೇವಸ್ಥಾನ ಮುಂಭಾಗದ ಸೇತುವೆ ಅತ್ಯಂತ ಕಿರಿದಾಗಿದ್ದು, ಅಪಘಾತ ಸ್ಥಳವಾಗಿ ಮಾರ್ಪಟ್ಟಿದೆ.</p>.<p>ಬಿ.ಜಿ.ಕೆರೆಯಿಂದ ಮೊಗಲಹಳ್ಳಿ ಮೂಲಕ ಮೊಳಕಾಲ್ಮುರು ಸಂಪರ್ಕಿಸುವ ಮೊಳಕಾಲ್ಮುರು-ಮಲ್ಪೆ ರಾಜ್ಯ ಹೆದ್ದಾರಿ-65 ಇದಾಗಿದ್ದು, ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ದೊಡ್ಡ ಹಳ್ಳಕ್ಕೆ ಈ ಸೇತುವೆಯನ್ನು ರಸ್ತೆ ವಿಸ್ತರಣೆಗೂ ಮುಂಚೆಯೇ ನಿರ್ಮಿಸಲಾಗಿದೆ. ರಸ್ತೆ ವಿಸ್ತರಣೆಯಾಗಿ 10 ವರ್ಷ ಕಳೆದರೂ ಸೇತುವೆಯನ್ನು ವಿಸ್ತರಿಸಿಲ್ಲ.</p>.<p>ಸೇತುವೆಯು ರಸ್ತೆಯ ತಿರುವು ಹಾಗೂ ಇಳಿಜಾರಿನಲ್ಲಿ ಇರುವ ಕಾರಣ ಎದುರಿಗೆ ಬರುವ ವಾಹನಗಳು ಸರಿಯಾಗಿ ಕಾಣಿಸುವುದಿಲ್ಲ. ಸೇತುವೆ ಇಕ್ಕೆಲಗಳಲ್ಲಿ ಗೋಡೆ ನಿರ್ಮಿಸಿಲ್ಲ. ಪರಿಣಾಮವಾಗಿ ಎರಡು ಸಲ ಬಸ್ಸು ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದಿದೆ. ದ್ವಿಚಕ್ರ ವಾಹನ ಅಪಘಾತಗಳು ಲೆಕ್ಕವಿಲ್ಲದಷ್ಟು ಸಂಭವಿಸಿವೆ.</p>.<p>ಇದೇ ರಸ್ತೆಯಲ್ಲಿ ಬರುವ ಬಹುತೇಕ ಸೇತುವೆಗಳನ್ನು 3-4 ವರ್ಷಗಳ ಹಿಂದೆ ನವೀಕರಣ ಮಾಡಲಾಯಿತು. ಈ ಸೇತುವೆಯನ್ನು ಮಾತ್ರ ಕೈ ಬಿಡಲಾಗಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಗಮನಕ್ಕೆ ಹಲವು ಸಲ ತಂದರೂ ಅಧಿಕಾರಿಗಳು ಕ್ರಮ ತೆಗೆದುಕೊಂಡಿಲ್ಲ. ದೊಡ್ಡ ಪ್ರಮಾಣದ ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು.</p>.<p>ತಿಪ್ಪೇಸ್ವಾಮಿ ಹಾಗೂ ಸಿದ್ದು, ಗ್ರಾಮಸ್ಥರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ಮೊಗಲಹಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿರುವ ಈಶ್ವರಸ್ವಾಮಿ ದೇವಸ್ಥಾನ ಮುಂಭಾಗದ ಸೇತುವೆ ಅತ್ಯಂತ ಕಿರಿದಾಗಿದ್ದು, ಅಪಘಾತ ಸ್ಥಳವಾಗಿ ಮಾರ್ಪಟ್ಟಿದೆ.</p>.<p>ಬಿ.ಜಿ.ಕೆರೆಯಿಂದ ಮೊಗಲಹಳ್ಳಿ ಮೂಲಕ ಮೊಳಕಾಲ್ಮುರು ಸಂಪರ್ಕಿಸುವ ಮೊಳಕಾಲ್ಮುರು-ಮಲ್ಪೆ ರಾಜ್ಯ ಹೆದ್ದಾರಿ-65 ಇದಾಗಿದ್ದು, ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ದೊಡ್ಡ ಹಳ್ಳಕ್ಕೆ ಈ ಸೇತುವೆಯನ್ನು ರಸ್ತೆ ವಿಸ್ತರಣೆಗೂ ಮುಂಚೆಯೇ ನಿರ್ಮಿಸಲಾಗಿದೆ. ರಸ್ತೆ ವಿಸ್ತರಣೆಯಾಗಿ 10 ವರ್ಷ ಕಳೆದರೂ ಸೇತುವೆಯನ್ನು ವಿಸ್ತರಿಸಿಲ್ಲ.</p>.<p>ಸೇತುವೆಯು ರಸ್ತೆಯ ತಿರುವು ಹಾಗೂ ಇಳಿಜಾರಿನಲ್ಲಿ ಇರುವ ಕಾರಣ ಎದುರಿಗೆ ಬರುವ ವಾಹನಗಳು ಸರಿಯಾಗಿ ಕಾಣಿಸುವುದಿಲ್ಲ. ಸೇತುವೆ ಇಕ್ಕೆಲಗಳಲ್ಲಿ ಗೋಡೆ ನಿರ್ಮಿಸಿಲ್ಲ. ಪರಿಣಾಮವಾಗಿ ಎರಡು ಸಲ ಬಸ್ಸು ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದಿದೆ. ದ್ವಿಚಕ್ರ ವಾಹನ ಅಪಘಾತಗಳು ಲೆಕ್ಕವಿಲ್ಲದಷ್ಟು ಸಂಭವಿಸಿವೆ.</p>.<p>ಇದೇ ರಸ್ತೆಯಲ್ಲಿ ಬರುವ ಬಹುತೇಕ ಸೇತುವೆಗಳನ್ನು 3-4 ವರ್ಷಗಳ ಹಿಂದೆ ನವೀಕರಣ ಮಾಡಲಾಯಿತು. ಈ ಸೇತುವೆಯನ್ನು ಮಾತ್ರ ಕೈ ಬಿಡಲಾಗಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಗಮನಕ್ಕೆ ಹಲವು ಸಲ ತಂದರೂ ಅಧಿಕಾರಿಗಳು ಕ್ರಮ ತೆಗೆದುಕೊಂಡಿಲ್ಲ. ದೊಡ್ಡ ಪ್ರಮಾಣದ ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು.</p>.<p>ತಿಪ್ಪೇಸ್ವಾಮಿ ಹಾಗೂ ಸಿದ್ದು, ಗ್ರಾಮಸ್ಥರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>