<p><strong>ಚಿತ್ರದುರ್ಗ</strong>: ನಗರದ ಸಿ.ಕೆ. ಪುರದಲ್ಲಿ ಭಾನುವಾರ ಚನ್ನಕೇಶವ ಸ್ವಾಮಿ ಬ್ರಹ್ಮ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.</p>.<p>ಹೂವುಗಳಿಂದ ಅಲಂಕರಿಸಿದ್ದ ಬ್ರಹ್ಮರಥದಲ್ಲಿ ಶ್ರೀದೇವಿ, ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.</p>.<p>ಸಕಲ ವಾದ್ಯಗಳೊಂದಿಗೆ ಮಧ್ಯಾಹ್ನ 1.15ಕ್ಕೆ ಅರ್ಚಕರು ಮಂತ್ರ ಘೋಷ ಮೊಳಗಿಸುತ್ತಿದ್ದಂತೆ ಭಕ್ತರು ರಥವನ್ನು ಎಳೆದು ಪುನೀತರಾದರು. ಭಕ್ತರು ಬಾಳೆಹಣ್ಣು ಹೂವುಗಳನ್ನು ರಥಕ್ಕೆ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಚನ್ನಕೇಶವಸ್ವಾಮಿ ದೇವಸ್ಥಾನದಿಂದ ಕೆಳಗೋಟೆ ಅಡ್ಡರಸ್ತೆಯವರೆಗೆ ರಥವನ್ನು ಎಳೆದು ಮೂಲ ಸ್ಥಾನಕ್ಕೆ ಕರೆತರಲಾಯಿತು.</p>.<p>ಮಹೋತ್ಸವದ ಪ್ರಯುಕ್ತ ಶನಿವಾರ ಶ್ರೀದೇವಿ, ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ಕಲ್ಯಾಣೋತ್ಸವ ಹಾಗೂ ಉಯ್ಯಾಲೋತ್ಸವ ಜರುಗಿತು. ಬೆಳಿಗ್ಗೆ ಅಂಕುರಾರ್ಪಣ, ಧ್ವಜಾರೋಹಣ, ಗಂಗಾಪೂಜೆ, ಕಲಶ ಸ್ಥಾಪನೆ ಮತ್ತು ನವಗ್ರಹ ಪೂಜೆ, ವಾಸ್ತು ಶಾಂತಿ ಹೋಮ ರಾಕ್ಷೋಘ್ನ ಹೋಮ ಸೇರಿ ಮತ್ತಿತರ ಪೂಜಾ ಕೈಂಕರ್ಯಗಳು ಜರುಗಿದವು.</p>.<p>ಮಧ್ಯಾಹ್ನ ಕೆಳಗೋಟೆಯ ಪ್ರಮುಖ ಬೀದಿಗಳಲ್ಲಿ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ರಥೋತ್ಸವದ ಬಳಿಕ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ವಕೀಲ ಫಾತ್ಯರಾಜನ್, ಮಾರುತೇಶ್ ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ನಗರದ ಸಿ.ಕೆ. ಪುರದಲ್ಲಿ ಭಾನುವಾರ ಚನ್ನಕೇಶವ ಸ್ವಾಮಿ ಬ್ರಹ್ಮ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.</p>.<p>ಹೂವುಗಳಿಂದ ಅಲಂಕರಿಸಿದ್ದ ಬ್ರಹ್ಮರಥದಲ್ಲಿ ಶ್ರೀದೇವಿ, ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.</p>.<p>ಸಕಲ ವಾದ್ಯಗಳೊಂದಿಗೆ ಮಧ್ಯಾಹ್ನ 1.15ಕ್ಕೆ ಅರ್ಚಕರು ಮಂತ್ರ ಘೋಷ ಮೊಳಗಿಸುತ್ತಿದ್ದಂತೆ ಭಕ್ತರು ರಥವನ್ನು ಎಳೆದು ಪುನೀತರಾದರು. ಭಕ್ತರು ಬಾಳೆಹಣ್ಣು ಹೂವುಗಳನ್ನು ರಥಕ್ಕೆ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಚನ್ನಕೇಶವಸ್ವಾಮಿ ದೇವಸ್ಥಾನದಿಂದ ಕೆಳಗೋಟೆ ಅಡ್ಡರಸ್ತೆಯವರೆಗೆ ರಥವನ್ನು ಎಳೆದು ಮೂಲ ಸ್ಥಾನಕ್ಕೆ ಕರೆತರಲಾಯಿತು.</p>.<p>ಮಹೋತ್ಸವದ ಪ್ರಯುಕ್ತ ಶನಿವಾರ ಶ್ರೀದೇವಿ, ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ಕಲ್ಯಾಣೋತ್ಸವ ಹಾಗೂ ಉಯ್ಯಾಲೋತ್ಸವ ಜರುಗಿತು. ಬೆಳಿಗ್ಗೆ ಅಂಕುರಾರ್ಪಣ, ಧ್ವಜಾರೋಹಣ, ಗಂಗಾಪೂಜೆ, ಕಲಶ ಸ್ಥಾಪನೆ ಮತ್ತು ನವಗ್ರಹ ಪೂಜೆ, ವಾಸ್ತು ಶಾಂತಿ ಹೋಮ ರಾಕ್ಷೋಘ್ನ ಹೋಮ ಸೇರಿ ಮತ್ತಿತರ ಪೂಜಾ ಕೈಂಕರ್ಯಗಳು ಜರುಗಿದವು.</p>.<p>ಮಧ್ಯಾಹ್ನ ಕೆಳಗೋಟೆಯ ಪ್ರಮುಖ ಬೀದಿಗಳಲ್ಲಿ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ರಥೋತ್ಸವದ ಬಳಿಕ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ವಕೀಲ ಫಾತ್ಯರಾಜನ್, ಮಾರುತೇಶ್ ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>