<p><strong>ಮೊಳಕಾಲ್ಮುರು</strong>: ನಕಲಿ ಬಂಗಾರದ ನಾಣ್ಯಗಳನ್ನು ಮಾರಾಟ ಮಾಡಿದ ಆರೋಪ ಸಂಬಂಧ ತಾಲ್ಲೂಕಿನ ರಾಂಪುರ ಪೊಲೀಸರು ಭಾನುವಾರ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.</p>.<p>ಆರೋಪಿಯಿಂದ ₹ 3.85 ಲಕ್ಷ ವಶಪಡಿಸಿಕೊಂಡಿದ್ದು, ಇನ್ನೊಬ್ಬ ಆರೋಪಿಗೆ ಶೋಧ ಕಾರ್ಯ ನಡೆಸಿದ್ದಾರೆ. </p>.<p>ಆಂಧ್ರಪ್ರದೇಶದ ಇಬ್ಬರು ಆರೋಪಿಗಳು ಆಂಧ್ರದ ಕಾಕಿನಾಡದ ಚಿಂತಕಾಯಲ ಶ್ರೀನಿವಾಸ ಅವರಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದರು.</p>.<p>ನಂತರ, ‘ನಮ್ಮ ಸಂಬಂಧಿಕರ ಹಳೆ ಮನೆಯನ್ನು ಕೀಳುವಾಗ ಅದರಲ್ಲಿ 5 ಕೆ.ಜಿಯಷ್ಟು ಪೂರ್ವಿಕರಿಗೆ ಸೇರಿದ ಬಂಗಾರದ ನಾಣ್ಯಗಳು ಸಿಕ್ಕಿವೆ. ಇವುಗಳನ್ನು ಅರ್ಧ ದರಕ್ಕೆ ನೀಡುವುದಾಗಿ ನಂಬಿಸಿದ್ದಾರೆ. ಅದರಂತೆ ಶ್ರೀನಿವಾಸ ಅವರು ರಾಂಪುರಕ್ಕೆ ಬಂದಾಗ ಅವರಿಂದ ಹಣ ಪಡೆದು ಬಂಗಾರದ ನಾಣ್ಯಗಳನ್ನು ತರುವುದಾಗಿ ಹೇಳಿ ಬೈಕ್ನಲ್ಲಿ ಪರಾರಿಯಾಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾಂಪುರ ಪಿಎಸ್ಐ ಮಹೇಶ್ ಹೊಸಪೇಟೆ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.</p>.<p>‘ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಆಂಧ್ರಪ್ರದೇಶ, ತೆಲಂಗಾಣಕ್ಕೆ ಸೇರಿದ ವಂಚಕರು ನಕಲಿ ಬಂಗಾರವನ್ನು ಅಸಲಿ ಎಂದು ನಂಬಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದು, ಜನರು ಎಚ್ಚರ ವಹಿಸಬೇಕು’ ಎಂದು ಪೊಲೀಸರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ನಕಲಿ ಬಂಗಾರದ ನಾಣ್ಯಗಳನ್ನು ಮಾರಾಟ ಮಾಡಿದ ಆರೋಪ ಸಂಬಂಧ ತಾಲ್ಲೂಕಿನ ರಾಂಪುರ ಪೊಲೀಸರು ಭಾನುವಾರ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.</p>.<p>ಆರೋಪಿಯಿಂದ ₹ 3.85 ಲಕ್ಷ ವಶಪಡಿಸಿಕೊಂಡಿದ್ದು, ಇನ್ನೊಬ್ಬ ಆರೋಪಿಗೆ ಶೋಧ ಕಾರ್ಯ ನಡೆಸಿದ್ದಾರೆ. </p>.<p>ಆಂಧ್ರಪ್ರದೇಶದ ಇಬ್ಬರು ಆರೋಪಿಗಳು ಆಂಧ್ರದ ಕಾಕಿನಾಡದ ಚಿಂತಕಾಯಲ ಶ್ರೀನಿವಾಸ ಅವರಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದರು.</p>.<p>ನಂತರ, ‘ನಮ್ಮ ಸಂಬಂಧಿಕರ ಹಳೆ ಮನೆಯನ್ನು ಕೀಳುವಾಗ ಅದರಲ್ಲಿ 5 ಕೆ.ಜಿಯಷ್ಟು ಪೂರ್ವಿಕರಿಗೆ ಸೇರಿದ ಬಂಗಾರದ ನಾಣ್ಯಗಳು ಸಿಕ್ಕಿವೆ. ಇವುಗಳನ್ನು ಅರ್ಧ ದರಕ್ಕೆ ನೀಡುವುದಾಗಿ ನಂಬಿಸಿದ್ದಾರೆ. ಅದರಂತೆ ಶ್ರೀನಿವಾಸ ಅವರು ರಾಂಪುರಕ್ಕೆ ಬಂದಾಗ ಅವರಿಂದ ಹಣ ಪಡೆದು ಬಂಗಾರದ ನಾಣ್ಯಗಳನ್ನು ತರುವುದಾಗಿ ಹೇಳಿ ಬೈಕ್ನಲ್ಲಿ ಪರಾರಿಯಾಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾಂಪುರ ಪಿಎಸ್ಐ ಮಹೇಶ್ ಹೊಸಪೇಟೆ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.</p>.<p>‘ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಆಂಧ್ರಪ್ರದೇಶ, ತೆಲಂಗಾಣಕ್ಕೆ ಸೇರಿದ ವಂಚಕರು ನಕಲಿ ಬಂಗಾರವನ್ನು ಅಸಲಿ ಎಂದು ನಂಬಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದು, ಜನರು ಎಚ್ಚರ ವಹಿಸಬೇಕು’ ಎಂದು ಪೊಲೀಸರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>