ಹಿರಿಯೂರು ತಾಲ್ಲೂಕಿನ ಆರನಕಟ್ಟೆ ಗ್ರಾಮದ ಅಮೃತರಾಜ್ ಮೃತಪಟ್ಟ ಸ್ಥಿತಿಯಲ್ಲಿ ಗುರುವಾರ ಜಮೀನಿನಲ್ಲಿ ಪತ್ತೆಯಾಗಿದ್ದರೆ. ಮೃತದೇಹದ ಬಳಿ ವಿಷದ ಬಾಟಲಿ ಪತ್ತೆಯಾಗಿದೆ. ಇವರು ವಿಜಯ ಬ್ಯಾಂಕಿನಲ್ಲಿ ₹ 5 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ.
ತೆಂಗು ಹಾಗೂ ದಾಳಿಂಬೆ ಬೆಳೆ ಉಳಿಸಿಕೊಳ್ಳಲು ಅವರು ಶಕ್ತಿ ಮೀರಿ ಪ್ರಯತ್ನಿಸಿದ್ದರು. ಸಾಲ ಮಾಡಿ ಏಳು ಕೊಳವೆ ಬಾವಿ ಕೊರೆಸಿದ್ದರು. ಈ ಪೈಕಿ ಒಂದರಲ್ಲಿ ಮಾತ್ರ ನೀರು ಸಿಕ್ಕಿತ್ತು. ಆ ಕೊಳವೆ ಬಾವಿಯಲ್ಲಿಯೂ ಇತ್ತೀಚೆಗೆ ನೀರು ಕಡಿಮೆಯಾಗಿದ್ದರಿಂದ ಬೇಸರಗೊಂಡಿದ್ದರು ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.