‘ಎನ್.ಜಿ. ಹಳ್ಳಿಯ ನರ್ಸರಿಯಲ್ಲಿ 90 ಪೈಸೆಗೆ ಒಂದರಂತೆ ಮೆಣಸಿನ ಸಸಿ ತಂದು ನಾಟಿ ಮಾಡಿದ್ದೆವು. ಸಾಗಾಣಿಕೆ ವೆಚ್ಚ ಸೇರಿ ಸಸಿಗಳಿಗೆ ₹4,500 ಖರ್ಚಾಗಿದೆ. ಗೊಬ್ಬರ, ಔಷಧಿಗೆ ₹4,000 ಖರ್ಚಾಗಿದೆ. ಅಡಿಕೆ ಸಸಿ ಜತೆಗೇ ಮೆಣಸಿನ ಗಿಡಗಳಿಗೂ ಹನಿ ನೀರಾವರಿ ವ್ಯವಸ್ಥೆ ಮಾಡಿಸಿದ್ದೇನೆ. ಇದರಿಂದ ನೀರು ಪೋಲಾಗುವುದು ತಪ್ಪುತ್ತದೆ. ಸಸಿ ನಾಟಿ ಮಾಡುವುದರಿಂದ ಕಳೆ ತೆಗೆಯುವುದು, ಗೊಬ್ಬರ ಹಾಕುವುದು, ಔಷಧ ಸಿಂಪರಣೆಯನ್ನು ನಾವೇ ಮಾಡಿದ್ದೇವೆ. ಇದರಿಂದ ಕೂಲಿ ಹಣ ಉಳಿತಾಯ ಆಗಿದೆ. ಪತ್ನಿ ಮಂಜುಳಾ ಹಾಗೂ ದ್ವಿತೀಯ ಪಿಯುಸಿ ಓದುತ್ತಿದ್ದ ಮಗಳು ಸಿಂಚನಾ ಕೃಷಿಗೆ ನೆರವಾಗಿದ್ದಾರೆ’ ಎನ್ನುತ್ತಾರೆ ಕೃಷಿಕ ನಾಗರಾಜ್.