<p><strong>ಚಳ್ಳಕೆರೆ: </strong>ಸಾಂಪ್ರದಾಯಿಕ ಹಾಗೂ ಆಧುನಿಕ ಕೃಷಿ ಪದ್ಧತಿ ವಿಧಾನದಿಂದ ಕೃಷಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು. ಕೃಷಿ ಬದುಕಿನ ಬಗ್ಗೆ ರೈತರು ಎಂದಿಗೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಆಹಾರ ಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಬೇಕು ಎಂದು ಶಾಸಕ ಟಿ. ರಘುಮೂರ್ತಿ ರೈತರಿಗೆ ಸಲಹೆ ನೀಡಿದರು.</p>.<p>ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಜನಸೇವಾ ಟ್ರಸ್ಟ್ ಶನಿವಾರ ಹಮ್ಮಿಕೊಂಡಿದ್ದ ಸಾಂಪ್ರದಾಯಿಕ ಜಾನುವಾನು ವ್ಯವಸಾಯ ಮತ್ತು ರೈತರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ರೈತರು ಆರ್ಥಿಕವಾಗಿ ಸದೃಢರಾಗುವ ಮೂಲಕ ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಜನಸೇವಾ ಟ್ರಸ್ಟ್ ಗೌರಾಧ್ಯಕ್ಷ ರಾಮಕೃಷ್ಣರೆಡ್ಡಿ, ಸಮಗ್ರ ಕೃಷಿ ಚಟುವಟಿಕೆಯ ಬಗ್ಗೆ ಸೂಕ್ತ ತರಬೇತಿ ನೀಡುವುದರ ಜತೆಗೆ ರೈತರಿಗೆ ಉಚಿತ ಬಿತ್ತನೆ ಬೀಜ, ಗೊಬ್ಬರ ವಿತರಿಸಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.</p>.<p>ಸೇವಾನಿರತ ಸಂಘಟನೆಗಳು ಒಗ್ಗೂಡುವ ಮೂಲಕ ಗ್ರಾಮಾಭಿವೃದ್ಧಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ತಿಂಗಳಿಗೊಮ್ಮೆ ಕೃಷಿ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಕೃಷಿ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.</p>.<p>ಪ್ರಗತಿಪರ ರೈತ ಏಕಾಂತಪ್ಪ, ತಂತ್ರಜ್ಞಾನಾಧಾರಿತ ಬೇಸಾಯದ ಕ್ರಮದ ತರಬೇತಿಯನ್ನು ತಪ್ಪದೆ ಪಡೆದುಕೊಳ್ಳಬೇಕು ಎಂದು ರೈತರಿಗೆ ಕಿವಿಮಾತು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಜನಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್, ರೈತ ಮುಖಂಡ ಗೋವಿಂದರೆಡ್ಡಿ, ದೇವರಾಜರೆಡ್ಡಿ ಮಾತನಾಡಿದರು.</p>.<p>30 ಜನ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೇವಣ್ಣ, ಕೃಷಿ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ: </strong>ಸಾಂಪ್ರದಾಯಿಕ ಹಾಗೂ ಆಧುನಿಕ ಕೃಷಿ ಪದ್ಧತಿ ವಿಧಾನದಿಂದ ಕೃಷಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು. ಕೃಷಿ ಬದುಕಿನ ಬಗ್ಗೆ ರೈತರು ಎಂದಿಗೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಆಹಾರ ಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಬೇಕು ಎಂದು ಶಾಸಕ ಟಿ. ರಘುಮೂರ್ತಿ ರೈತರಿಗೆ ಸಲಹೆ ನೀಡಿದರು.</p>.<p>ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಜನಸೇವಾ ಟ್ರಸ್ಟ್ ಶನಿವಾರ ಹಮ್ಮಿಕೊಂಡಿದ್ದ ಸಾಂಪ್ರದಾಯಿಕ ಜಾನುವಾನು ವ್ಯವಸಾಯ ಮತ್ತು ರೈತರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ರೈತರು ಆರ್ಥಿಕವಾಗಿ ಸದೃಢರಾಗುವ ಮೂಲಕ ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಜನಸೇವಾ ಟ್ರಸ್ಟ್ ಗೌರಾಧ್ಯಕ್ಷ ರಾಮಕೃಷ್ಣರೆಡ್ಡಿ, ಸಮಗ್ರ ಕೃಷಿ ಚಟುವಟಿಕೆಯ ಬಗ್ಗೆ ಸೂಕ್ತ ತರಬೇತಿ ನೀಡುವುದರ ಜತೆಗೆ ರೈತರಿಗೆ ಉಚಿತ ಬಿತ್ತನೆ ಬೀಜ, ಗೊಬ್ಬರ ವಿತರಿಸಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.</p>.<p>ಸೇವಾನಿರತ ಸಂಘಟನೆಗಳು ಒಗ್ಗೂಡುವ ಮೂಲಕ ಗ್ರಾಮಾಭಿವೃದ್ಧಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ತಿಂಗಳಿಗೊಮ್ಮೆ ಕೃಷಿ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಕೃಷಿ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.</p>.<p>ಪ್ರಗತಿಪರ ರೈತ ಏಕಾಂತಪ್ಪ, ತಂತ್ರಜ್ಞಾನಾಧಾರಿತ ಬೇಸಾಯದ ಕ್ರಮದ ತರಬೇತಿಯನ್ನು ತಪ್ಪದೆ ಪಡೆದುಕೊಳ್ಳಬೇಕು ಎಂದು ರೈತರಿಗೆ ಕಿವಿಮಾತು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಜನಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್, ರೈತ ಮುಖಂಡ ಗೋವಿಂದರೆಡ್ಡಿ, ದೇವರಾಜರೆಡ್ಡಿ ಮಾತನಾಡಿದರು.</p>.<p>30 ಜನ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೇವಣ್ಣ, ಕೃಷಿ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>