ಈಗಾಗಲೇ ಕೆಲ ರೈತರು ಬೆಳೆದ ಬೆಳೆಗಳನ್ನು ಬೆಂಗಳೂರಿನ ಯಶವಂತಪುರ ಹಾಗೂ ಹೊಸೂರು ಮಾರುಕಟ್ಟೆಗೆ ವಾಹನಗಳ ಮೂಲಕ ಸಾಗಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ, ಮಂಗಳವಾರ ಹಾಗೂ ಶುಕ್ರವಾರ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ದಾಳಿಂಬೆ, ಕಲ್ಲಂಗಡಿ, ಕರ್ಬೂಜ, ಈರುಳ್ಳಿಯನ್ನು ಮಾರಾಟ ಮಾಡಿ ಬಂದಿದ್ದಾರೆ. ಜಿಲ್ಲೆಯ ಟೊಮಟೊಗೆ ಅಧಿಕ ಬೇಡಿಕೆ ಇದ್ದ ಕೋಲಾರದ ಮಾರುಕಟ್ಟೆಯಲ್ಲೂ ಬೆಲೆ ಕುಸಿತವಾಗಿದೆ.