<p><strong>ನಾಯಕನಹಟ್ಟಿ:</strong> ರೈತರು ಅಡವಿಟ್ಟಿರುವ ಬಂಗಾರವನ್ನು ಹರಾಜು ಹಾಕದೇ ಬಂಗಾರ ಬಿಡಿಸಿಕೊಳ್ಳಲು ಕಾಲವಕಾಶ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಒತ್ತಾಯಿಸಿದರು.</p>.<p>ಕರ್ನಾಟಕ ರಾಜ್ಯ ರೈತ ಸಂಘ ರಾಷ್ಟ್ರೀಯ ಕಿಸಾನ್ ಸಂಘ ಪಟ್ಟಣದ ಕೆನರಾ ಬ್ಯಾಂಕ್ ಎದುರು ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.</p>.<p>ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆದ ಬೆಳೆ ರೈತನ ಕೈಸೇರದೆ ಕಂಗಾಲಾಗಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಅಡವಿಟ್ಟ ಬಂಗಾರವನ್ನು ಹರಾಜು ಹಾಕುವುದು ಸರಿಯಲ್ಲ ಎಂದು ಹೇಳಿದರು.</p>.<p>ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಚಂದ್ರಯ್ಯ ಹಿರೇಮಠ್, ‘ಆರ್ಬಿಐ ನಿಯಮಾವಳಿಯಂತೆ ಹರಾಜು ಪ್ರಕ್ರಿಯೆಗೆ ಮುಂದಾಗಿದ್ದೇವೆ’ ಎಂದು ಹರಾಜು ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದರು.</p>.<p>ಕೆ.ಸಿ. ಶ್ರೀಕಂಠಮೂರ್ತಿ, ಯರ್ರಿಸ್ವಾಮಿ, ತಿಪ್ಪೇಸ್ವಾಮಿ, ರಾಜಣ್ಣ, ಮಲ್ಲಿಕಾರ್ಜುನ, ಬಿ.ಟಿ.ಪ್ರಕಾಶ್, ಓಬಣ್ಣ, ಬೋರಣ್ಣ, ಬೋರಯ್ಯ, ಬ್ಯಾಂಕ್ ಕೃಷಿ ವಿಸ್ತರಣಾಧಿಕಾರಿ ಕೆ.ಎಸ್. ಸಂತೋಷ್, ಮಹಾಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ:</strong> ರೈತರು ಅಡವಿಟ್ಟಿರುವ ಬಂಗಾರವನ್ನು ಹರಾಜು ಹಾಕದೇ ಬಂಗಾರ ಬಿಡಿಸಿಕೊಳ್ಳಲು ಕಾಲವಕಾಶ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಒತ್ತಾಯಿಸಿದರು.</p>.<p>ಕರ್ನಾಟಕ ರಾಜ್ಯ ರೈತ ಸಂಘ ರಾಷ್ಟ್ರೀಯ ಕಿಸಾನ್ ಸಂಘ ಪಟ್ಟಣದ ಕೆನರಾ ಬ್ಯಾಂಕ್ ಎದುರು ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.</p>.<p>ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆದ ಬೆಳೆ ರೈತನ ಕೈಸೇರದೆ ಕಂಗಾಲಾಗಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಅಡವಿಟ್ಟ ಬಂಗಾರವನ್ನು ಹರಾಜು ಹಾಕುವುದು ಸರಿಯಲ್ಲ ಎಂದು ಹೇಳಿದರು.</p>.<p>ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಚಂದ್ರಯ್ಯ ಹಿರೇಮಠ್, ‘ಆರ್ಬಿಐ ನಿಯಮಾವಳಿಯಂತೆ ಹರಾಜು ಪ್ರಕ್ರಿಯೆಗೆ ಮುಂದಾಗಿದ್ದೇವೆ’ ಎಂದು ಹರಾಜು ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದರು.</p>.<p>ಕೆ.ಸಿ. ಶ್ರೀಕಂಠಮೂರ್ತಿ, ಯರ್ರಿಸ್ವಾಮಿ, ತಿಪ್ಪೇಸ್ವಾಮಿ, ರಾಜಣ್ಣ, ಮಲ್ಲಿಕಾರ್ಜುನ, ಬಿ.ಟಿ.ಪ್ರಕಾಶ್, ಓಬಣ್ಣ, ಬೋರಣ್ಣ, ಬೋರಯ್ಯ, ಬ್ಯಾಂಕ್ ಕೃಷಿ ವಿಸ್ತರಣಾಧಿಕಾರಿ ಕೆ.ಎಸ್. ಸಂತೋಷ್, ಮಹಾಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>