ರೈತ ಸಂಘದ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಮಾತನಾಡಿ, ‘ಮಳೆ ಹೆಚ್ಚಾಗಿದ್ದರಿಂದ ಶೇಂಗಾ ಇಳುವರಿ ಕುಸಿದಿದೆ. ಈರುಳ್ಳಿ ಬೆಳೆಗೆ ಮಾಡಿದ ವೆಚ್ಚವೂ ಕೈಗೆ ಸಿಕ್ಕಿಲ್ಲ. ಖರೀದಿ ಕೇಂದ್ರಗಳನ್ನು ತೆರೆದರೆ ರೈತರಿಗೆ ಅನುಕೂಲವಾಗುತ್ತದೆ. ಮೆಕ್ಕೆಜೋಳಕ್ಕೆ ಸರ್ಕಾರ ₹ 1,850 ಬೆಂಬಲ ಬೆಲೆ ಘೋಷಣೆ ಮಾಡಿದೆ. ಆದರೆ, ಮಾರುಕಟ್ಟೆಯಲ್ಲಿ ₹ 1,350ಕ್ಕಿಂತ ಹೆಚ್ಚು ಬೆಲೆ ರೈತರಿಗೆ ಸಿಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.