ಕೂನಬೇವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈರುಳ್ಳಿ, ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ, ಕಡ್ಲೆ, ಜೋಳ ಸೇರಿ ಹಲವು ಬೆಳೆಗಳನ್ನು ಬೆಳೆಯಲಾಗುತ್ತಿದೆ. 2016ರಿಂದಲೂ ಈ ಬೆಳೆಗಳಿಗೆ ವಿಮೆ ಕಂತು ಪಾವತಿಸುತ್ತಿದ್ದೇವೆ. ಆದರೆ, ಈವರೆಗೆ ಪರಿಹಾರ ಸಿಕ್ಕಿಲ್ಲ. ಬರ ಹಾಗೂ ಅತಿವೃಷ್ಟಿಯ ಪರಿಹಾರವೂ ರೈತರಿಗೆ ತಲುಪಿಲ್ಲ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.