<p><strong>ಚಿತ್ರದುರ್ಗ:</strong> ಕೊಳವೆಬಾವಿ ಕೊರೆಯುವ ದರವನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡಿರುವ ಬೋರ್ವೆಲ್ ಲಾರಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ರೈತರು ಬರ ಪರಿಸ್ಥಿತಿಯಲ್ಲಿ ಕೃಷಿಕರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಬರ ಪರಿಸ್ಥಿತಿ ಎದುರಾಗಿರುವುದರಿಂದ ಕೊಳವೆಬಾವಿಗಳಲ್ಲಿ ನೀರು ಬರುತ್ತಿಲ್ಲ. ಬೆಳೆಗಳನ್ನು ಉಳಿಸಿಕೊಳ್ಳಲು ಹೊಸ ಕೊಳವೆಬಾವಿ ಕೊರೆಸಲು ರೈತರು ಮುಂದಾಗಿದ್ದಾರೆ. ಅಸಹಾಯಕತೆಯ ಲಾಭ ಪಡೆದುಕೊಳ್ಳಲು ಹವಣಿಸುತ್ತಿರುವ ಬೋರ್ವೆಲ್ ಲಾರಿ ಮಾಲೀಕರು ಏಕಾಏಕಿ ದರ ಏರಿಕೆ ಮಾಡಿದ್ದಾರೆ. ಈ ಶೋಷಣೆಯಿಂದ ರೈತರನ್ನು ರಕ್ಷಿಸಿ’ ಎಂದು ಒತ್ತಾಯಿಸಿದರು.</p>.<p>‘ಕೊಳವೆಬಾವಿ ಕೊರೆಸಲು ಪ್ರತಿ ಅಡಿಗೆ ₹90 ನಿಗದಿಪಡಿಸಲಾಗಿತ್ತು. ಬರ ಪರಿಸ್ಥಿತಿಯಲ್ಲಿ ಕೊಳವೆಬಾವಿ ಕೊರೆಸುವ ಅನಿವಾರ್ಯತೆ ಸೃಷ್ಟಿಯಾಗಿರುವುದನ್ನು ಮನಗಂಡ ಬೋರ್ವೆಲ್ ಮಾಲೀಕರು ಏಕಾಏಕಿ ₹110ರಿಂದ ₹120ಕ್ಕೆ ಏರಿಕೆ ಮಾಡಿದ್ದಾರೆ. ಕೇಸಿಂಗ್ ಪೈಪ್ ದರ ಕೂಡ ವಿಪರೀತ ಹೆಚ್ಚಿಸಲಾಗಿದೆ’ ಎಂದು ಕಿಡಿಕಾರಿದರು.</p>.<p>ರೈತ ಸಂಘದ ಕಾರ್ಯಾಧ್ಯಕ್ಷ ಈಚಗಟ್ಟದ ಸಿದ್ಧವೀರಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಮುಖಂಡರಾದ ಬಸವರಾಜಪ್ಪ, ಬಿ.ನಿಜಲಿಂಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಕೊಳವೆಬಾವಿ ಕೊರೆಯುವ ದರವನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡಿರುವ ಬೋರ್ವೆಲ್ ಲಾರಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ರೈತರು ಬರ ಪರಿಸ್ಥಿತಿಯಲ್ಲಿ ಕೃಷಿಕರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಬರ ಪರಿಸ್ಥಿತಿ ಎದುರಾಗಿರುವುದರಿಂದ ಕೊಳವೆಬಾವಿಗಳಲ್ಲಿ ನೀರು ಬರುತ್ತಿಲ್ಲ. ಬೆಳೆಗಳನ್ನು ಉಳಿಸಿಕೊಳ್ಳಲು ಹೊಸ ಕೊಳವೆಬಾವಿ ಕೊರೆಸಲು ರೈತರು ಮುಂದಾಗಿದ್ದಾರೆ. ಅಸಹಾಯಕತೆಯ ಲಾಭ ಪಡೆದುಕೊಳ್ಳಲು ಹವಣಿಸುತ್ತಿರುವ ಬೋರ್ವೆಲ್ ಲಾರಿ ಮಾಲೀಕರು ಏಕಾಏಕಿ ದರ ಏರಿಕೆ ಮಾಡಿದ್ದಾರೆ. ಈ ಶೋಷಣೆಯಿಂದ ರೈತರನ್ನು ರಕ್ಷಿಸಿ’ ಎಂದು ಒತ್ತಾಯಿಸಿದರು.</p>.<p>‘ಕೊಳವೆಬಾವಿ ಕೊರೆಸಲು ಪ್ರತಿ ಅಡಿಗೆ ₹90 ನಿಗದಿಪಡಿಸಲಾಗಿತ್ತು. ಬರ ಪರಿಸ್ಥಿತಿಯಲ್ಲಿ ಕೊಳವೆಬಾವಿ ಕೊರೆಸುವ ಅನಿವಾರ್ಯತೆ ಸೃಷ್ಟಿಯಾಗಿರುವುದನ್ನು ಮನಗಂಡ ಬೋರ್ವೆಲ್ ಮಾಲೀಕರು ಏಕಾಏಕಿ ₹110ರಿಂದ ₹120ಕ್ಕೆ ಏರಿಕೆ ಮಾಡಿದ್ದಾರೆ. ಕೇಸಿಂಗ್ ಪೈಪ್ ದರ ಕೂಡ ವಿಪರೀತ ಹೆಚ್ಚಿಸಲಾಗಿದೆ’ ಎಂದು ಕಿಡಿಕಾರಿದರು.</p>.<p>ರೈತ ಸಂಘದ ಕಾರ್ಯಾಧ್ಯಕ್ಷ ಈಚಗಟ್ಟದ ಸಿದ್ಧವೀರಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಮುಖಂಡರಾದ ಬಸವರಾಜಪ್ಪ, ಬಿ.ನಿಜಲಿಂಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>