<p><strong>ಪರಶುರಾಂಪುರ:</strong> ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ ಎಂದು ರೈತರು ಎತ್ತಿನ ಗಾಡಿ ಮತ್ತು ಕಳ್ಳೆಯನ್ನು ಹಾಕಿ ಗ್ರಾಮದ ಬೆಸ್ಕಾಂ ಕಚೇರಿ ಮುಂದೆ ರೈತರು ಪ್ರತಿಭಟನೆ ಮಾಡಿದ ಘಟನೆ ಗುರುವಾರ ನಡೆಯಿತು.</p>.<p>‘ಹಗಲು ವೇಳೆ 4 ಗಂಟೆ ರಾತ್ರಿ ವೇಳೆ 3 ಗಂಟೆ ವಿದ್ಯುತ್ ನೀಡುತ್ತಿದ್ದು, ಪದೇ ಪದೇ ವಿದ್ಯುತ್ ಕಡಿತಗೊಳಿಸುವು ಏಕೆ. ಇದರಿಂದ ಪಂಪ್ಸೆಟ್ ಸುಟ್ಟು ಹೋಗುತ್ತವೆ. ಜೊತೆಗೆ ಬೆಳೆಗಳಿಗೆ ನೀರು ಹಾಯಿಸಲು ಕಷ್ಟವಾಗುತ್ತಿದೆ’ ಎಂದು ರೈತರು ಅಕ್ರೋಶ ವ್ಯಕ್ತಪಡಿಸಿದರು.</p>.<p>‘ಒಂದು ಗಂಟೆಗೆ ಹೆಚ್ಚು ಹೊತ್ತು ಬೆಸ್ಕಾಂ ಕಚೇರಿ ಮುಂದೆ ತಡೆ ಹಾಕಿದ ರೈತರು, ಪದೇಪದೇ ವಿದ್ಯುತ್ ಕಡಿತಗೊಳಿಸಲು ಕಾರಣ ಏನು ಎಂದು ಮೇಲಧಿಕಾರಿಗಳು ಸ್ಥಳಕ್ಕೆ ಬಂದು ಹೇಳಬೇಕು. ಇನ್ನುಮುಂದೆ ಕಡಿತಗೋಳಿಸುವುದಿಲ್ಲ ಎಂದು ಭರವಸೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಸ್ಥಳಕ್ಕೆ ಬಂದ ಬೆಸ್ಕಾಂ ಅಧಿಕಾರಿ ಶಿವಕುಮಾರ್, ಇನ್ನೂ ಮೂರು ದಿನಗಳಲ್ಲಿ ಈ ಸಮಸ್ಯೆ ಬಗೆಹರಿಸುಚವುದಾಗಿ ಭರವಸೆ ನೀಡಿದ ಮೇಲೆ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.</p>.<p>ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಭಾಷಾ, ರಾಮಚಂದ್ರಪ್ಪ, ಪರಮೇಶ್ವರಪ್ಪ, ಈರಣ್ಣ, ರತ್ನಪ್ಪ, ಗೋವಿಂದರಾಜ, ಅಣ್ಣಪ್ಪ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪರಶುರಾಂಪುರ:</strong> ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ ಎಂದು ರೈತರು ಎತ್ತಿನ ಗಾಡಿ ಮತ್ತು ಕಳ್ಳೆಯನ್ನು ಹಾಕಿ ಗ್ರಾಮದ ಬೆಸ್ಕಾಂ ಕಚೇರಿ ಮುಂದೆ ರೈತರು ಪ್ರತಿಭಟನೆ ಮಾಡಿದ ಘಟನೆ ಗುರುವಾರ ನಡೆಯಿತು.</p>.<p>‘ಹಗಲು ವೇಳೆ 4 ಗಂಟೆ ರಾತ್ರಿ ವೇಳೆ 3 ಗಂಟೆ ವಿದ್ಯುತ್ ನೀಡುತ್ತಿದ್ದು, ಪದೇ ಪದೇ ವಿದ್ಯುತ್ ಕಡಿತಗೊಳಿಸುವು ಏಕೆ. ಇದರಿಂದ ಪಂಪ್ಸೆಟ್ ಸುಟ್ಟು ಹೋಗುತ್ತವೆ. ಜೊತೆಗೆ ಬೆಳೆಗಳಿಗೆ ನೀರು ಹಾಯಿಸಲು ಕಷ್ಟವಾಗುತ್ತಿದೆ’ ಎಂದು ರೈತರು ಅಕ್ರೋಶ ವ್ಯಕ್ತಪಡಿಸಿದರು.</p>.<p>‘ಒಂದು ಗಂಟೆಗೆ ಹೆಚ್ಚು ಹೊತ್ತು ಬೆಸ್ಕಾಂ ಕಚೇರಿ ಮುಂದೆ ತಡೆ ಹಾಕಿದ ರೈತರು, ಪದೇಪದೇ ವಿದ್ಯುತ್ ಕಡಿತಗೊಳಿಸಲು ಕಾರಣ ಏನು ಎಂದು ಮೇಲಧಿಕಾರಿಗಳು ಸ್ಥಳಕ್ಕೆ ಬಂದು ಹೇಳಬೇಕು. ಇನ್ನುಮುಂದೆ ಕಡಿತಗೋಳಿಸುವುದಿಲ್ಲ ಎಂದು ಭರವಸೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಸ್ಥಳಕ್ಕೆ ಬಂದ ಬೆಸ್ಕಾಂ ಅಧಿಕಾರಿ ಶಿವಕುಮಾರ್, ಇನ್ನೂ ಮೂರು ದಿನಗಳಲ್ಲಿ ಈ ಸಮಸ್ಯೆ ಬಗೆಹರಿಸುಚವುದಾಗಿ ಭರವಸೆ ನೀಡಿದ ಮೇಲೆ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.</p>.<p>ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಭಾಷಾ, ರಾಮಚಂದ್ರಪ್ಪ, ಪರಮೇಶ್ವರಪ್ಪ, ಈರಣ್ಣ, ರತ್ನಪ್ಪ, ಗೋವಿಂದರಾಜ, ಅಣ್ಣಪ್ಪ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>