<p><strong>ಚಿತ್ರದುರ್ಗ: </strong>ರೇಷ್ಮೆ ಬೆಲೆ ಕುಸಿತದಿಂದ ಕಂಗಾಲಾದ ಬೆಳೆಗಾರರು ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಲಾಕ್ಡೌನ್ ಕಾರಣಕ್ಕೆ ರೇಷ್ಮೆ ಬೆಲೆ ಗಣನೀಯವಾಗಿ ಕುಸಿದಿದೆ. ನಿಗದಿತ ಆದಾಯ ಪಡೆಯುತ್ತಿದ್ದ ರೇಷ್ಮೆ ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಬೆಳೆಗಾರರಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.</p>.<p>ಚಿತ್ರದುರ್ಗ ಜಿಲ್ಲೆಯಲ್ಲಿ ಅನೇಕರು ರೇಷ್ಮೆ ಕೃಷಿ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಯುವ ಸಮೂಹ ಕೂಡ ರೇಷ್ಮೆ ಕೃಷಿಯತ್ತ ಒಲವು ತೋರುತ್ತಿದೆ. ಇಂತಹ ಸಂದರ್ಭದಲ್ಲಿ ಬೆಲೆ ಕುಸಿತ ಉಂಟಾಗಿರುವುದು ಬೆಳೆಗಾರರಲ್ಲಿ ನಿರಾಶೆ ಮೂಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿ ಕೆ.ಜಿ ರೇಷ್ಮೆ ಉತ್ಪಾದನೆಗೆ ₹ 300ಕ್ಕೂ ಹೆಚ್ಚು ವೆಚ್ಚವಾಗುತ್ತದೆ. ಬೆಳೆ ಬೆಳೆಯಲು ರೈತರು ಮಾಡಿದ ಖರ್ಚು ಕೂಡ ಸಿಗದಂತೆ ಆಗಿದೆ. ಉತ್ಪಾದನಾ ವೆಚ್ಚಕ್ಕೆ ಶೇ 50ರಷ್ಟು ಲಾಭಾಂಶ ಸೇರಿಸಿ ಬೆಂಬಲ ಬೆಲೆ ಘೋಷಣೆ ಮಾಡಬೇಕು.</p>.<p>ಲಾಕ್ಡೌನ್ ಕಾರಣಕ್ಕೆ ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರರ ಪ್ರತಿ ಕೆ.ಜಿ ರೇಷ್ಮೆಗೆ ಸರ್ಕಾರ ₹ 150 ಪರಿಹಾರ ಧನ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ರೇಷ್ಮೆ ಬೆಲೆ ಕುಸಿತದಿಂದ ಕಂಗಾಲಾದ ಬೆಳೆಗಾರರು ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಲಾಕ್ಡೌನ್ ಕಾರಣಕ್ಕೆ ರೇಷ್ಮೆ ಬೆಲೆ ಗಣನೀಯವಾಗಿ ಕುಸಿದಿದೆ. ನಿಗದಿತ ಆದಾಯ ಪಡೆಯುತ್ತಿದ್ದ ರೇಷ್ಮೆ ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಬೆಳೆಗಾರರಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.</p>.<p>ಚಿತ್ರದುರ್ಗ ಜಿಲ್ಲೆಯಲ್ಲಿ ಅನೇಕರು ರೇಷ್ಮೆ ಕೃಷಿ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಯುವ ಸಮೂಹ ಕೂಡ ರೇಷ್ಮೆ ಕೃಷಿಯತ್ತ ಒಲವು ತೋರುತ್ತಿದೆ. ಇಂತಹ ಸಂದರ್ಭದಲ್ಲಿ ಬೆಲೆ ಕುಸಿತ ಉಂಟಾಗಿರುವುದು ಬೆಳೆಗಾರರಲ್ಲಿ ನಿರಾಶೆ ಮೂಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿ ಕೆ.ಜಿ ರೇಷ್ಮೆ ಉತ್ಪಾದನೆಗೆ ₹ 300ಕ್ಕೂ ಹೆಚ್ಚು ವೆಚ್ಚವಾಗುತ್ತದೆ. ಬೆಳೆ ಬೆಳೆಯಲು ರೈತರು ಮಾಡಿದ ಖರ್ಚು ಕೂಡ ಸಿಗದಂತೆ ಆಗಿದೆ. ಉತ್ಪಾದನಾ ವೆಚ್ಚಕ್ಕೆ ಶೇ 50ರಷ್ಟು ಲಾಭಾಂಶ ಸೇರಿಸಿ ಬೆಂಬಲ ಬೆಲೆ ಘೋಷಣೆ ಮಾಡಬೇಕು.</p>.<p>ಲಾಕ್ಡೌನ್ ಕಾರಣಕ್ಕೆ ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರರ ಪ್ರತಿ ಕೆ.ಜಿ ರೇಷ್ಮೆಗೆ ಸರ್ಕಾರ ₹ 150 ಪರಿಹಾರ ಧನ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>