ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದಿದ್ದು ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಬೀಜ, ರಸಗೊಬ್ಬರ ಖರೀದಿಗೆ ಮುಂದಾಗಿದ್ದಾರೆ. ಸೋಮವಾರ ಬೆಳಿಗ್ಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಸಿಕ್ಕಿದ್ದರಿಂದ ರೈತರು ನಿರೀಕ್ಷೆ ಮೀರಿ ಧಾವಿಸಿದ್ದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜನಜಂಗುಳಿ ನಿರ್ಮಾಣವಾಗಿತ್ತು.