<p><strong>ಚಿತ್ರದುರ್ಗ:</strong> ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಒಳಪಂಗಡಗಳನ್ನು ಕೇಂದ್ರದ ‘ಒಬಿಸಿ’ ಪಟ್ಟಿಯಲ್ಲಿ ಸೇರಿಸುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಲು ಒತ್ತಾಯಿಸಬೇಕು. ಅದಕ್ಕಾಗಿ ಎಲ್ಲಾ ಮಠಾಧೀಶರು ಇದಕ್ಕೆ ಸಹಕಾರ ನೀಡಬೇಕು ಎಂದು ಭಾನುವಾರ ಚರ್ಚಿಸಲಾಯಿತು.</p>.<p>ಇಲ್ಲಿನ ಮಾದಾರ ಚನ್ನಯ್ಯ ಗುರುಪೀಠದಲ್ಲಿ ನಡೆದ ಮಠಾಧೀಶರ ಸಭೆಯಲ್ಲಿ ‘ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರೂ ನಮ್ಮ ಹೋರಾಟಕ್ಕೆ ಬೆಂಬಲ, ಸಹಕಾರ ನೀಡಬೇಕು’ ಎಂದು ಹಲವು ಸ್ವಾಮೀಜಿಗಳು ಮನವಿ ಮಾಡಿದರು.</p>.<p>ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ‘ವೀರಶೈವ ಲಿಂಗಾಯತ ಸಮುದಾಯದ 250ಕ್ಕೂ ಹೆಚ್ಚು ಮಠಾಧೀಶರು ಪ್ರತಿಯೊಂದು ಒಳಪಂಗಡ ಗುರುತಿಸಬೇಕು. ಎಲ್ಲವನ್ನೂ ಒಂದೇ ಸ್ಥರದಲ್ಲಿ ತರಲು ಯತ್ನಿಸಿದಾಗ ಮಾತ್ರ ಸಮುದಾಯಗಳ ಅಭಿವೃದ್ಧಿಯ ಕನಸು ಸಾಕಾರಗೊಳ್ಳಲು ಸಾಧ್ಯ’ ಎಂದು ಹೇಳಿದರು.</p>.<p>ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ‘ಎಲ್ಲಾ ಸಮುದಾಯಗಳಲ್ಲೂ ಬಡವರು, ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂತಹ ಪ್ರತಿಯೊಬ್ಬರಿಗೂ ಸಂವಿಧಾನದಡಿ ಸೌಲಭ್ಯ ಸಿಗಬೇಕಿರುವುದು ನ್ಯಾಯಯುತ ಬೇಡಿಕೆಯಾಗಿದೆ’ ಎಂದು ತಿಳಿಸಿದರು.</p>.<p>‘ಮಠಾಧೀಶರು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ಮೂಲಕ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಣಯ ಕೈಗೊಳ್ಳಬೇಕು. ಸಮುದಾಯಗಳ ಏಳಿಗೆಗಾಗಿ ಸ್ವಾಮೀಜಿಗಳು ಸದಾ ಒಗ್ಗಟ್ಟು ಪ್ರದರ್ಶಿಸಬೇಕು‘ ಎಂಬ ತೀರ್ಮಾನಕ್ಕೆ ಬರಲಾಯಿತು.</p>.<p>ಕಡಕೊಳದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಶಾಂತವೀರ ಶಿವಾಚಾರ್ಯ ಸ್ವಾಮೀಜಿ, ಕುಕ್ಕನೂರಿನ ಚನ್ನಮಲ್ಲಿ ಶಿವಾಚಾರ್ಯ ಸ್ವಾಮೀಜಿ, ವಿಜಯಪುರದ ಸಿದ್ಧಲಿಂಗ ದೇವರು, ಬಸವ ಕಬೀರ<br />ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಒಳಪಂಗಡಗಳನ್ನು ಕೇಂದ್ರದ ‘ಒಬಿಸಿ’ ಪಟ್ಟಿಯಲ್ಲಿ ಸೇರಿಸುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಲು ಒತ್ತಾಯಿಸಬೇಕು. ಅದಕ್ಕಾಗಿ ಎಲ್ಲಾ ಮಠಾಧೀಶರು ಇದಕ್ಕೆ ಸಹಕಾರ ನೀಡಬೇಕು ಎಂದು ಭಾನುವಾರ ಚರ್ಚಿಸಲಾಯಿತು.</p>.<p>ಇಲ್ಲಿನ ಮಾದಾರ ಚನ್ನಯ್ಯ ಗುರುಪೀಠದಲ್ಲಿ ನಡೆದ ಮಠಾಧೀಶರ ಸಭೆಯಲ್ಲಿ ‘ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರೂ ನಮ್ಮ ಹೋರಾಟಕ್ಕೆ ಬೆಂಬಲ, ಸಹಕಾರ ನೀಡಬೇಕು’ ಎಂದು ಹಲವು ಸ್ವಾಮೀಜಿಗಳು ಮನವಿ ಮಾಡಿದರು.</p>.<p>ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ‘ವೀರಶೈವ ಲಿಂಗಾಯತ ಸಮುದಾಯದ 250ಕ್ಕೂ ಹೆಚ್ಚು ಮಠಾಧೀಶರು ಪ್ರತಿಯೊಂದು ಒಳಪಂಗಡ ಗುರುತಿಸಬೇಕು. ಎಲ್ಲವನ್ನೂ ಒಂದೇ ಸ್ಥರದಲ್ಲಿ ತರಲು ಯತ್ನಿಸಿದಾಗ ಮಾತ್ರ ಸಮುದಾಯಗಳ ಅಭಿವೃದ್ಧಿಯ ಕನಸು ಸಾಕಾರಗೊಳ್ಳಲು ಸಾಧ್ಯ’ ಎಂದು ಹೇಳಿದರು.</p>.<p>ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ‘ಎಲ್ಲಾ ಸಮುದಾಯಗಳಲ್ಲೂ ಬಡವರು, ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂತಹ ಪ್ರತಿಯೊಬ್ಬರಿಗೂ ಸಂವಿಧಾನದಡಿ ಸೌಲಭ್ಯ ಸಿಗಬೇಕಿರುವುದು ನ್ಯಾಯಯುತ ಬೇಡಿಕೆಯಾಗಿದೆ’ ಎಂದು ತಿಳಿಸಿದರು.</p>.<p>‘ಮಠಾಧೀಶರು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ಮೂಲಕ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಣಯ ಕೈಗೊಳ್ಳಬೇಕು. ಸಮುದಾಯಗಳ ಏಳಿಗೆಗಾಗಿ ಸ್ವಾಮೀಜಿಗಳು ಸದಾ ಒಗ್ಗಟ್ಟು ಪ್ರದರ್ಶಿಸಬೇಕು‘ ಎಂಬ ತೀರ್ಮಾನಕ್ಕೆ ಬರಲಾಯಿತು.</p>.<p>ಕಡಕೊಳದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಶಾಂತವೀರ ಶಿವಾಚಾರ್ಯ ಸ್ವಾಮೀಜಿ, ಕುಕ್ಕನೂರಿನ ಚನ್ನಮಲ್ಲಿ ಶಿವಾಚಾರ್ಯ ಸ್ವಾಮೀಜಿ, ವಿಜಯಪುರದ ಸಿದ್ಧಲಿಂಗ ದೇವರು, ಬಸವ ಕಬೀರ<br />ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>