<p>ಚಳ್ಳಕೆರೆ: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರತಿದಿನ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಆದಕಾರಣ ಪ್ರತಿಯೊಬ್ಬರೂ ಮಾಸ್ಕ್ಅನ್ನು ಕಡ್ಡಾಯವಾಗಿ ಧರಿಸುವ ಮೂಲಕ ಸೋಂಕು ನಿಯಂತ್ರಿಸಲು ಕೈಜೋಡಿಸಬೇಕು ಎಂದು ಪೋಲಿಸ್ ನಿರೀಕ್ಷಕ ಎಸ್.ಜೆ. ತಿಪ್ಪೇಸ್ವಾಮಿ ಮನವಿ ಮಾಡಿದರು.</p>.<p>ನಗರಸಭೆ ಹಾಗೂ ಪೋಲಿಸ್ ಇಲಾಖೆಯ ಸಹಯೋಗದಲ್ಲಿ ನಗರದ ನೆಹರೂ ಸರ್ಕಲ್ನಲ್ಲಿ ಮಂಗಳವಾರ ಆಯೋಜಿಸಿದ್ದ ಆಟೊ ಚಾಲಕರ ಜಾಗೃತಿ ಸಭೆಯಲ್ಲಿ ಮಾತನಾಡಿದರು.</p>.<p>ಮಾಸ್ಕ್ ಧರಿಸದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಜತೆಗೆ ₹ 200 ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಪೌರಾಯುಕ್ತ ಪಾಲಯ್ಯ, ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ವಾರ್ಡ್ಗಳಲ್ಲಿ ಪ್ರತಿ ದಿನ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಸ್ಯಾನಿಟೈಸರ್ ಹಾಗೂ ಸೋಂಕು ನಿವಾರಕ ದ್ರಾವಣದ ಸಿಂಪಡಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ಮಾರುಕಟ್ಟೆ ಆವರಣದಲ್ಲಿ ಸೊಪ್ಪು-ತರಕಾರಿ, ಹೂವು, ಹಣ್ಣು ಮಾರಾಟಗಾರರು ತಪ್ಪದೇ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ವ್ಯಾಪಾರ ನಡೆಸಬೇಕು ಎಂದು ಸಲಹೆ ನೀಡಿದರು. ನಗರಸಭೆ ಸಾಮಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ಗೌಡ, ಹಿರಿಯ ಆರೋಗ್ಯ ನಿರೀಕ್ಷಕ ಮಹಾಲಿಂಗಪ್ಪ ಮಾತನಾಡಿದರು.<br />ದಾದಾಪೀರ್, ಗಣೇಶ್, ಹೆಡ್ ಕಾನ್ಸ್ಟೆಬಲ್ ಚಂದ್ರನಾಯ್ಕ, ವೆಂಕಟೇಶ್, ಸಂತೋಷ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಳ್ಳಕೆರೆ: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರತಿದಿನ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಆದಕಾರಣ ಪ್ರತಿಯೊಬ್ಬರೂ ಮಾಸ್ಕ್ಅನ್ನು ಕಡ್ಡಾಯವಾಗಿ ಧರಿಸುವ ಮೂಲಕ ಸೋಂಕು ನಿಯಂತ್ರಿಸಲು ಕೈಜೋಡಿಸಬೇಕು ಎಂದು ಪೋಲಿಸ್ ನಿರೀಕ್ಷಕ ಎಸ್.ಜೆ. ತಿಪ್ಪೇಸ್ವಾಮಿ ಮನವಿ ಮಾಡಿದರು.</p>.<p>ನಗರಸಭೆ ಹಾಗೂ ಪೋಲಿಸ್ ಇಲಾಖೆಯ ಸಹಯೋಗದಲ್ಲಿ ನಗರದ ನೆಹರೂ ಸರ್ಕಲ್ನಲ್ಲಿ ಮಂಗಳವಾರ ಆಯೋಜಿಸಿದ್ದ ಆಟೊ ಚಾಲಕರ ಜಾಗೃತಿ ಸಭೆಯಲ್ಲಿ ಮಾತನಾಡಿದರು.</p>.<p>ಮಾಸ್ಕ್ ಧರಿಸದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಜತೆಗೆ ₹ 200 ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಪೌರಾಯುಕ್ತ ಪಾಲಯ್ಯ, ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ವಾರ್ಡ್ಗಳಲ್ಲಿ ಪ್ರತಿ ದಿನ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಸ್ಯಾನಿಟೈಸರ್ ಹಾಗೂ ಸೋಂಕು ನಿವಾರಕ ದ್ರಾವಣದ ಸಿಂಪಡಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ಮಾರುಕಟ್ಟೆ ಆವರಣದಲ್ಲಿ ಸೊಪ್ಪು-ತರಕಾರಿ, ಹೂವು, ಹಣ್ಣು ಮಾರಾಟಗಾರರು ತಪ್ಪದೇ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ವ್ಯಾಪಾರ ನಡೆಸಬೇಕು ಎಂದು ಸಲಹೆ ನೀಡಿದರು. ನಗರಸಭೆ ಸಾಮಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ಗೌಡ, ಹಿರಿಯ ಆರೋಗ್ಯ ನಿರೀಕ್ಷಕ ಮಹಾಲಿಂಗಪ್ಪ ಮಾತನಾಡಿದರು.<br />ದಾದಾಪೀರ್, ಗಣೇಶ್, ಹೆಡ್ ಕಾನ್ಸ್ಟೆಬಲ್ ಚಂದ್ರನಾಯ್ಕ, ವೆಂಕಟೇಶ್, ಸಂತೋಷ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>