ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಪಿಐ ಕಚೇರಿಗೆ ಬೆಂಕಿ: ಪ್ರತಿಭಟನೆ

Last Updated 4 ಜನವರಿ 2019, 12:21 IST
ಅಕ್ಷರ ಗಾತ್ರ

ಮೊಳಕಾಲ್ಮುರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಇಲ್ಲಿ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಚೇರಿಯಲ್ಲಿ ಸಾವಿರಾರು ಬೀಡಿ ಕಾರ್ಮಿಕರಿಗೆ ಸಂಬಂಧಪಟ್ಟ ದಾಖಲಾತಿಗಳು, ಕಟ್ಟಡ ಕಾರ್ಮಿಕರ ವಿಮೆ ಮತ್ತಿತರ ಅಮೂಲ್ಯ ದಾಖಲೆಗಳು ಸುಟ್ಟು ಭಸ್ಮವಾಗಿವೆ. ನೆರೆಯ ಕೇರಳದಲ್ಲಿ ನಡೆಯುತ್ತಿರುವ ಧಾರ್ಮಿಕ ಪ್ರತಿಭಟನೆಗಳ ಭಾಗವಾಗಿ ಗಡಿಭಾಗದ ಬಂಟ್ವಾಳದಲ್ಲಿ ಈ ಕೃತ್ಯ ನಡೆದಿದೆ. ಇದೊಂದು ಸಾಮಾಜಿಕ ಸ್ವಾತಂತ್ರ್ಯ ಕಿತ್ತುಕೊಳ್ಳುವ ಕೃತ್ಯವಾಗಿದೆ ಎಂದು ದೂರಿದರು.

ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು. ಸಿಪಿಐನ ಜಾಫರ್ ಷರೀಫ್, ಡಿ. ಪೆನ್ನಯ್ಯ, ವೀರೇಶ್, ಕಾಮಯ್ಯ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT