ವೇದಾವತಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಗ್ರಾಮದ ಪರಿಶಿಷ್ಟ ಜಾತಿ ಕಾಲೊನಿಗೆ ನೀರು ನುಗ್ಗಿದೆ. ಮನೆಗಳು ಜಲಾವೃತಗೊಂಡಿದ್ದು, ವಾಸಕ್ಕೆ ತೊಂದರೆಯಾಗಿದೆ. ಈ ಹಿಂದೆ ಹಲವು ಬಾರಿ ಸಮಸ್ಯೆ ಎದುರಾಗಿತ್ತಾದರೂ ಇಷ್ಟು ತೀವ್ರವಾಗಿ ಬಾಧಿಸಿರಲಿಲ್ಲ. ಪರ್ಯಾಯ ವಸತಿ ವ್ಯವಸ್ಥೆಗೆ ಮೀಸಲಿಟ್ಟ ಭೂಮಿಗೆ ಕೆಲ ರಾಜಕೀಯ ಮುಖಂಡರು ವಿನಾ ಕಾರಣ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.