ಏಪ್ರಿಲ್, ಮೇ ತಿಂಗಳ ಪಡಿತರ ವಿತರಣೆ:ಅರ್ಹ ಕುಟುಂಬಗಳಿಗೆ ಆಹಾರ ಧಾನ್ಯದ ಕೊರತೆ ಆಗಬಾರದು ಎಂಬ ಉದ್ದೇಶಕ್ಕಾಗಿ ಏಪ್ರಿಲ್ ಹಾಗೂ ಮೇ ತಿಂಗಳ ಪಡಿತರವನ್ನು ಏಕಕಾಲದಲ್ಲಿ ವಿತರಿಸಲಾಗುತ್ತಿದೆ.
‘ಪಡಿತರ ಚೀಟಿ ಇರುವವರಿಗೆ ಬಯೋಮೆಟ್ರಿಕ್ ಬದಲಾಗಿ ಮೊಬೈಲ್ ಒಟಿಪಿ ಮೂಲಕ ಆಹಾರಧಾನ್ಯ ವಿತರಿಸಲಾಗುತ್ತಿದೆ. ಪಡಿತರ ಹಂಚಿಕೆಯ ಪ್ರಮಾಣದಲ್ಲಿ ಏಪ್ರಿಲ್ ತಿಂಗಳಿನಿಂದ ಬದಲಾವಣೆ ಆಗಿದ್ದು, ಆದ್ಯತಾ ಕಾರ್ಡ್ನ ಪ್ರತಿ ಸದಸ್ಯರಿಗೆ ತಲಾ 5 ಕೆ. ಅಕ್ಕಿ ಮತ್ತು ಪ್ರತಿ ಕಾರ್ಡ್ಗೆ ತಲಾ 2 ಕೆ.ಜಿ ಗೋಧಿ ಉಚಿತವಾಗಿ ವಿತರಿಸಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.