<p><strong>ಹಿರಿಯೂರು:</strong> ‘ಫೂಟ್ ಪಲ್ಸ್ ಥೆರಪಿ ಸ್ವದೇಶಿ ಸಂಶೋಧಿತ ವೈದ್ಯಕೀಯ ಆವಿಷ್ಕಾರವಾಗಿದ್ದು, ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ ಮೇಕ್ ಇನ್ ಇಂಡಿಯಾದ ಕೊಡುಗೆಯಾಗಿದೆ’ ಎಂದು ರೋಟರಿ ಅಧ್ಯಕ್ಷ ಎಚ್. ಕಿರಣ್ ಕುಮಾರ್ ಹೇಳಿದರು.</p>.<p>ನಗರದ ರೋಟರಿ ಸಭಾಭವನದಲ್ಲಿ ಗುರುವಾರ ಸಂಜೆ ರೋಟರಿ ಸಂಸ್ಥೆ, ರೆಡ್ಕ್ರಾಸ್ ಸಂಸ್ಥೆ ಹಾಗೂ ಚಿತ್ರದುರ್ಗದ ಕಂಪೋನಿಯೊ ಸಂಸ್ಥೆ ವತಿಯಿಂದ ನಡೆದ ಉಚಿತ ಫೂಟ್ ಪಲ್ಸ್ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈ ಥೆರಪಿಯಿಂದ ದೇಹದಲ್ಲಿ ರಕ್ತ ಸಂಚಲನ ಸುಲಲಿತವಾಗುವುದಲ್ಲದೇ, ರೋಗಿಗಳಲ್ಲಿ ಮನೆಮಾಡಿರುವ ಆತಂಕವನ್ನು ದೂರ ಮಾಡಲಿದೆ. ಸ್ವದೇಶಿ ಸಂಶೋಧಿತ ವೈದ್ಯಕೀಯ ವ್ಯವಸ್ಥೆ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುವ ಸಾಧ್ಯತೆ ಇದೆ’ ಎಂದು ಅವರು ತಿಳಿಸಿದರು.</p>.<p>ರೆಡ್ಕ್ರಾಸ್ ಚೇರ್ಮನ್ ಎಚ್.ಎಸ್. ಸುಂದರರಾಜ್ ಮಾತನಾಡಿ, ‘ಫೂಟ್ ಥೆರಪಿಯಲ್ಲಿ ಯಾವುದೇ ಅಡ್ಡ ಪರಿಣಾಮ ಇಲ್ಲ. ದೀರ್ಘಕಾಲದಿಂದ ರೋಗಿಗಳನ್ನು ಕಾಡುತ್ತಿರುವ ಥೈರಾಯ್ಡ್, ಮಧುಮೇಹ, ರಕ್ತದೊತ್ತಡ, ಬೊಜ್ಜು ನಿವಾರಣೆ, ಬೆನ್ನು ನೋವು ಇದರಿಂದ ನಿಯಂತ್ರಣಕ್ಕೆ ಬರಲಿದೆ’ ಎಂದರು.</p>.<p>ಜಿಲ್ಲಾ ರೋಟರಿ ಕಾರ್ಯದರ್ಶಿ ಎಂ.ಎಸ್. ರಾಘವೇಂದ್ರ, ಅ. 10ರವರೆಗೆ ನಡೆಯಲಿರುವ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ರೋಟರಿ ಸಂಸ್ಥೆ ಕಾರ್ಯದರ್ಶಿ ಎ. ರಾಘವೇಂದ್ರ, ಬಿ.ಕೆ. ನಾಗಣ್ಣ, ಬಿ.ಜೆ. ರಾಘವೇಂದ್ರಾಚಾರ್, ಜಿ.ಎಸ್. ಕಿರಣ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ‘ಫೂಟ್ ಪಲ್ಸ್ ಥೆರಪಿ ಸ್ವದೇಶಿ ಸಂಶೋಧಿತ ವೈದ್ಯಕೀಯ ಆವಿಷ್ಕಾರವಾಗಿದ್ದು, ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ ಮೇಕ್ ಇನ್ ಇಂಡಿಯಾದ ಕೊಡುಗೆಯಾಗಿದೆ’ ಎಂದು ರೋಟರಿ ಅಧ್ಯಕ್ಷ ಎಚ್. ಕಿರಣ್ ಕುಮಾರ್ ಹೇಳಿದರು.</p>.<p>ನಗರದ ರೋಟರಿ ಸಭಾಭವನದಲ್ಲಿ ಗುರುವಾರ ಸಂಜೆ ರೋಟರಿ ಸಂಸ್ಥೆ, ರೆಡ್ಕ್ರಾಸ್ ಸಂಸ್ಥೆ ಹಾಗೂ ಚಿತ್ರದುರ್ಗದ ಕಂಪೋನಿಯೊ ಸಂಸ್ಥೆ ವತಿಯಿಂದ ನಡೆದ ಉಚಿತ ಫೂಟ್ ಪಲ್ಸ್ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈ ಥೆರಪಿಯಿಂದ ದೇಹದಲ್ಲಿ ರಕ್ತ ಸಂಚಲನ ಸುಲಲಿತವಾಗುವುದಲ್ಲದೇ, ರೋಗಿಗಳಲ್ಲಿ ಮನೆಮಾಡಿರುವ ಆತಂಕವನ್ನು ದೂರ ಮಾಡಲಿದೆ. ಸ್ವದೇಶಿ ಸಂಶೋಧಿತ ವೈದ್ಯಕೀಯ ವ್ಯವಸ್ಥೆ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುವ ಸಾಧ್ಯತೆ ಇದೆ’ ಎಂದು ಅವರು ತಿಳಿಸಿದರು.</p>.<p>ರೆಡ್ಕ್ರಾಸ್ ಚೇರ್ಮನ್ ಎಚ್.ಎಸ್. ಸುಂದರರಾಜ್ ಮಾತನಾಡಿ, ‘ಫೂಟ್ ಥೆರಪಿಯಲ್ಲಿ ಯಾವುದೇ ಅಡ್ಡ ಪರಿಣಾಮ ಇಲ್ಲ. ದೀರ್ಘಕಾಲದಿಂದ ರೋಗಿಗಳನ್ನು ಕಾಡುತ್ತಿರುವ ಥೈರಾಯ್ಡ್, ಮಧುಮೇಹ, ರಕ್ತದೊತ್ತಡ, ಬೊಜ್ಜು ನಿವಾರಣೆ, ಬೆನ್ನು ನೋವು ಇದರಿಂದ ನಿಯಂತ್ರಣಕ್ಕೆ ಬರಲಿದೆ’ ಎಂದರು.</p>.<p>ಜಿಲ್ಲಾ ರೋಟರಿ ಕಾರ್ಯದರ್ಶಿ ಎಂ.ಎಸ್. ರಾಘವೇಂದ್ರ, ಅ. 10ರವರೆಗೆ ನಡೆಯಲಿರುವ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ರೋಟರಿ ಸಂಸ್ಥೆ ಕಾರ್ಯದರ್ಶಿ ಎ. ರಾಘವೇಂದ್ರ, ಬಿ.ಕೆ. ನಾಗಣ್ಣ, ಬಿ.ಜೆ. ರಾಘವೇಂದ್ರಾಚಾರ್, ಜಿ.ಎಸ್. ಕಿರಣ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>