<p><span class="quote"><strong>ಚಿತ್ರದುರ್ಗ</strong>:</span> ಯೂರಿಯಾ ರಸಗೊಬ್ಬರ ಸಿಗದಿರುವುದರಿಂದ ಆಕ್ರೋಶಗೊಂಡ ನೂರಾರು ರೈತರು ಇಲ್ಲಿನ ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಮಂಗಳವಾರ ಪ್ರಯತ್ನಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಿದ ಪೊಲೀಸರು ರೈತರ ಮನವೊಲಿಸಿದರು.</p>.<p>ಎರಡು-ಮೂರು ದಿನಗಳಿಂದ ಯೂರಿಯಾ ರಸಗೊಬ್ಬರಕ್ಕೆ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ಮುಖ್ಯ ಕಚೇರಿಗೆ ರೈತರು ಅಲೆದು ಹೈರಾಣಾಗಿದ್ದಾರೆ.ಚೀಟಿ ಇಲ್ಲದವರಿಗೆ ಗೊಬ್ಬರ ಸಿಗುತ್ತಿಲ್ಲ. ‘ದಾಸ್ತಾನು ಖಾಲಿ’ ಎಂಬ ನಾಮಫಲಕ ನೋಡಿ ರೈತರು ಮತ್ತಷ್ಟು ಆಕ್ರೋಶಗೊಂಡಿದ್ದರು.</p>.<p>ರಸಗೊಬ್ಬರ ಪಡೆಯಲು ಪ್ರತಿ ದಿನ ನಸುಕಿನ 5 ರಿಂದಲೇ ರೈತರು ಸಂಘದ ಕಚೇರಿ ಮುಂದೆ ಸರದಿಯಲ್ಲಿ ನಿಲ್ಲುತ್ತಿದ್ದಾರೆ. ಹಲವು ಗ್ರಾಮಗಳಿಂದ ಬಂದಿದ್ದ 500ಕ್ಕೂ ಹೆಚ್ಚು ರೈತರು ಮಂಗಳವಾರ ಕೂಡ ರಸಗೊಬ್ಬರಕ್ಕೆ ಮುಗಿಬಿದ್ದಿದ್ದರು.ನೂಕುನುಗ್ಗಲು ನಿಯಂತ್ರಿಸುವ ಕಾರಣಕ್ಕಾಗಿ ಕೃಷಿ ಇಲಾಖೆ ಹಾಗೂ ಟಿಎಪಿಸಿಎಂಎಸ್ ಮುಂಭಾಗ ಪೊಲೀಸರನ್ನು ನಿಯೋಜಿಸಲಾಗಿದೆ.</p>.<p><strong><span class="quote">2 ಸಾವಿರ ಚೀಲ ವಿತರಿಸಿದ್ದೇವೆ:</span></strong> ‘ರೈತರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಒಂದು ತಿಂಗಳಿನಿಂದ ಯೂರಿಯಾ ರಸಗೊಬ್ಬರ ವಿತರಿಸಲು ಕ್ರಮ ಕೈಗೊಂಡಿದ್ದೇವೆ. ಚಿತ್ರದುರ್ಗದಲ್ಲಿ ಒಂದು ಸಾವಿರ, ಭರಮಸಾಗರದಲ್ಲಿ 600, ಸಿರಿಗೆರೆ ವೃತ್ತದ ಸಮೀಪ 400 ಚೀಲ ವಿತರಿಸಲಾಗಿದೆ’ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಭಾರತಮ್ಮ ತಿಳಿಸಿದರು.</p>.<p>‘ಗೊಂದಲ ಉಂಟಾಗಬಾರದು ಎಂಬ ಕಾರಣಕ್ಕಾಗಿ ಚೀಟಿ ಹಾಗೂ ಗೊಬ್ಬರ ವಿತರಿಸುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಿದ್ದೇವೆ. ಉತ್ತಮ ಮಳೆ ಆಗುತ್ತಿರುವುದರಿಂದ ರೈತರಿಗೆ ಗೊಬ್ಬರ ಅನಿವಾರ್ಯವಾಗಿದೆ. ಕೊರತೆ ಉಂಟಾಗಬಹುದು ಎಂಬ ಆತಂಕದಲ್ಲಿ ಮುಗಿಬಿಳುತ್ತಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span class="quote"><strong>ಚಿತ್ರದುರ್ಗ</strong>:</span> ಯೂರಿಯಾ ರಸಗೊಬ್ಬರ ಸಿಗದಿರುವುದರಿಂದ ಆಕ್ರೋಶಗೊಂಡ ನೂರಾರು ರೈತರು ಇಲ್ಲಿನ ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಮಂಗಳವಾರ ಪ್ರಯತ್ನಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಿದ ಪೊಲೀಸರು ರೈತರ ಮನವೊಲಿಸಿದರು.</p>.<p>ಎರಡು-ಮೂರು ದಿನಗಳಿಂದ ಯೂರಿಯಾ ರಸಗೊಬ್ಬರಕ್ಕೆ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ಮುಖ್ಯ ಕಚೇರಿಗೆ ರೈತರು ಅಲೆದು ಹೈರಾಣಾಗಿದ್ದಾರೆ.ಚೀಟಿ ಇಲ್ಲದವರಿಗೆ ಗೊಬ್ಬರ ಸಿಗುತ್ತಿಲ್ಲ. ‘ದಾಸ್ತಾನು ಖಾಲಿ’ ಎಂಬ ನಾಮಫಲಕ ನೋಡಿ ರೈತರು ಮತ್ತಷ್ಟು ಆಕ್ರೋಶಗೊಂಡಿದ್ದರು.</p>.<p>ರಸಗೊಬ್ಬರ ಪಡೆಯಲು ಪ್ರತಿ ದಿನ ನಸುಕಿನ 5 ರಿಂದಲೇ ರೈತರು ಸಂಘದ ಕಚೇರಿ ಮುಂದೆ ಸರದಿಯಲ್ಲಿ ನಿಲ್ಲುತ್ತಿದ್ದಾರೆ. ಹಲವು ಗ್ರಾಮಗಳಿಂದ ಬಂದಿದ್ದ 500ಕ್ಕೂ ಹೆಚ್ಚು ರೈತರು ಮಂಗಳವಾರ ಕೂಡ ರಸಗೊಬ್ಬರಕ್ಕೆ ಮುಗಿಬಿದ್ದಿದ್ದರು.ನೂಕುನುಗ್ಗಲು ನಿಯಂತ್ರಿಸುವ ಕಾರಣಕ್ಕಾಗಿ ಕೃಷಿ ಇಲಾಖೆ ಹಾಗೂ ಟಿಎಪಿಸಿಎಂಎಸ್ ಮುಂಭಾಗ ಪೊಲೀಸರನ್ನು ನಿಯೋಜಿಸಲಾಗಿದೆ.</p>.<p><strong><span class="quote">2 ಸಾವಿರ ಚೀಲ ವಿತರಿಸಿದ್ದೇವೆ:</span></strong> ‘ರೈತರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಒಂದು ತಿಂಗಳಿನಿಂದ ಯೂರಿಯಾ ರಸಗೊಬ್ಬರ ವಿತರಿಸಲು ಕ್ರಮ ಕೈಗೊಂಡಿದ್ದೇವೆ. ಚಿತ್ರದುರ್ಗದಲ್ಲಿ ಒಂದು ಸಾವಿರ, ಭರಮಸಾಗರದಲ್ಲಿ 600, ಸಿರಿಗೆರೆ ವೃತ್ತದ ಸಮೀಪ 400 ಚೀಲ ವಿತರಿಸಲಾಗಿದೆ’ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಭಾರತಮ್ಮ ತಿಳಿಸಿದರು.</p>.<p>‘ಗೊಂದಲ ಉಂಟಾಗಬಾರದು ಎಂಬ ಕಾರಣಕ್ಕಾಗಿ ಚೀಟಿ ಹಾಗೂ ಗೊಬ್ಬರ ವಿತರಿಸುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಿದ್ದೇವೆ. ಉತ್ತಮ ಮಳೆ ಆಗುತ್ತಿರುವುದರಿಂದ ರೈತರಿಗೆ ಗೊಬ್ಬರ ಅನಿವಾರ್ಯವಾಗಿದೆ. ಕೊರತೆ ಉಂಟಾಗಬಹುದು ಎಂಬ ಆತಂಕದಲ್ಲಿ ಮುಗಿಬಿಳುತ್ತಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>